ಬ್ರೇಕಿಂಗ್ ನ್ಯೂಸ್
01-08-20 06:55 am Headline Karnataka News Network ದೇಶ - ವಿದೇಶ
ಅಲಾಸ್ಕ, ಆ 01: ವಿಮಾನಗಳೆರಡರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಶಾಸಕ ಸೇರಿ ಏಳು ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ಅಮೆರಿಕದ ಅಲಾಸ್ಕದ ಕೆನೈ ಪೆನಿನ್ಸುಲಾದ ಸೋಲ್ಡೊಟ್ನಾ ನಗರದ ವಿಮಾನ ನಿಲ್ದಾಣದ ಸಮೀಪದಲ್ಲಿ ನಡೆದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ವಿಮಾನ ಪತನದಲ್ಲಿ ಮೃತಪಟ್ಟವರನ್ನು ಶಾಸಕ ಗ್ಯಾರಿ ನೂಪ್, ಪೈಲಟ್ ಗ್ರೆಗೋರಿ ಬೆಲ್ (67), ಗೈಡ್ ಡೇವಿಡ್ ರೋಜರ್ಸ್ (40) ಮತ್ತು ಸೌಥ್ ಕರೊಲಿನಾ ಪ್ರವಾಸಿಗರಾದ ಕಲೆಬ್ ಹಸ್ಲಿ (26), ಹೆದರ್ ಹಸ್ಲಿ (25), ಮೆಕಾಯ್ ಹಸ್ಲಿ (24) ಮತ್ತು ಕ್ರಿಸ್ಟಿ ರೈಟ್ (23) ಎಂದು ಗುರುತಿಸಲಾಗಿದೆ.
ಎರಡು ವಿಮಾನಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಯಾರೂ ಕೂಡಾ ಬದುಕುಳಿದಿಲ್ಲ. ಅಲಾಸ್ಕಾ ಪ್ರದೇಶವನ್ನು ಪ್ರತಿನಿಧಿಸುತ್ತಿದ್ದ ಶಾಸಕ ಗ್ಯಾರಿ ನೂಪ್ ವಿಮಾನವೊಂದರಲ್ಲಿ ಏಕಾಂಗಿಯಾಗಿ ವಾಪಾಸ್ಸಾಗುತ್ತಿದ್ದರು. ಇನ್ನೊಂದು ವಿಮಾನವು ಅಲಾಸ್ಕಾ ಕಡೆಗೆ ಸೌಥ್ ಕರೊನಾದಿಂದ ಬರುತ್ತಿದ್ದು, ಈ ವಿಮಾನದಲ್ಲಿ ನಾಲ್ಕು ಪ್ರವಾಸಿಗರು ಸೇರಿದಂತೆ ಓರ್ವ ಗೈಡ್ ಮತ್ತು ಪೈಲಟ್ ಇದ್ದರು.
ಮಾಯು ಮಾರ್ಗದ ನಡುವೆ ಎರಡು ವಿಮಾನಗಳ ಮುಖಾಮುಖಿ ಡಿಕ್ಕಿಯ ಪರಿಣಾಮ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದು, ಈ ಪೈಕಿ ಓರ್ವನನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದ ಸಂದರ್ಭ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ.
ಮೃತ ಶಾಸಕ ಗ್ಯಾರಿ ನೂಪ್ ಅವರು ಓರ್ವ ರಿಪಬ್ಲಿಕನ್ ಹಾಗೂ ರಾಜ್ಯ ಸದನದ ಉಭಯ ಪಕ್ಷೀಯ ಬಹುಮತದ ಸದಸ್ಯರಾಗಿದ್ದರು. ಇವರ ಈ ದುರಂತ ಸಾವಿಗೆ ಹಲವಾರ ಸಹೋದ್ಯೋಗಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇವರು ತಮ್ಮ ಪ್ರದೇಶದ ಅಭಿವೃದ್ದಿಗಾಗಿ ದುಡಿಯುತ್ತಿದ್ದು, ಇಂತಹ ನಾಯಕನನ್ನು ನಾವು ಕಳೆದುಕೊಂಡಿದ್ದೇವೆ ಎಂದು ಸಹೋದ್ಯೋಗಿಗಳು ದುಃಖಿತರಾಗಿದ್ದಾರೆ.
ಪ್ರಕರಣದ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.
2019ರ ಮೇ ತಿಂಗಳಿನಲ್ಲಿ ಕೆಟ್ಟಿಕನ್ ಬಳಿ ವಿಮಾನಗಳ ಡಿಕ್ಕಿ ಸಂಭವಿಸಿದ್ದು, 6 ಮಂದಿ ಸಾವನ್ನಪ್ಪಿದ್ದು, 10 ಜನರು ಪ್ರಾಣಾಪಾಯದಿಂದ ಪಾರಾಗಿದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm