ಬ್ರೇಕಿಂಗ್ ನ್ಯೂಸ್
30-08-20 09:09 am Headline Karnataka News Network ದೇಶ - ವಿದೇಶ
ನವದೆಹಲಿ, ಆಗಸ್ಟ್ 30: ಕೊರೊನಾ ಲಾಕ್ ಡೌನ್ ನಿಯಂತ್ರಣವನ್ನು ಹಂತ ಹಂತವಾಗಿ ಸಡಿಲಗೊಳಿಸುತ್ತಿರುವ ಕೇಂದ್ರ ಸರಕಾರ ಅನ್ ಲಾಕ್ 4.0 ಬಿಡುಗಡೆ ಮಾಡಿದೆ. ಸೆಪ್ಟೆಂಬರ್ 7ರ ನಂತರ ದೇಶಾದ್ಯಂತ ಮೆಟ್ರೊ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಿರುವ ಕೇಂದ್ರ, ಶಾಲೆ, ಕಾಲೇಜು ಸೆಪ್ಟೆಂಬರ್ 30ರ ವರೆಗೂ ತೆರೆಯಲು ಅನುಮತಿ ನೀಡಿಲ್ಲ.

ಸೆಪ್ಟೆಂಬರ್ 21ರ ಬಳಿಕ ಸಭೆ, ಸಮಾರಂಭಗಳಿಗೆ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಿ ನೂರು ಜನರಿಗೆ ಸೀಮಿತ ಆಗಿರಬೇಕು. ಇದರಂತೆ ರಾಜಕೀಯ ಸಭೆಗಳು, ಸಾಂಸ್ಕೃತಿಕ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಅನುಮತಿ ಸಿಗಲಿದೆ. ಹಾಗೆಯೇ ಹವಾನಿಯಂತ್ರಣ ರಹಿತ ಸಿನಿಮಾ ಟಾಕೀಸ್ ತೆರೆಯುವುದಕ್ಕೂ ಅವಕಾಶ ನೀಡಲಾಗಿದೆ. ಇನ್ನು ಕಂಟೈನ್ಮೆಂಟ್ ಝೋನಲ್ಲಿ ನಿರ್ಬಂಧ ಯಥಾಸ್ಥಿತಿ ಮುಂದುವರಿಯಲಿದೆ. ಉಳಿದಂತೆ ಅಗತ್ಯ ಬಿದ್ದರೆ ಹೆಚ್ಚುವರಿ ಲಾಕ್ ಡೌನ್ ಹೇರುವುದಕ್ಕೆ ರಾಜ್ಯ ಸರಕಾರಗಳಿಗೆ ಅಧಿಕಾರ ನೀಡಲಾಗಿದೆ. ಅಲ್ಲದೆ, ಅಂತಾರಾಜ್ಯ ಸಂಚಾರವನ್ನು ಸಂಪೂರ್ಣ ಮುಕ್ತಗೊಳಿಸಲಾಗಿದೆ. ಸಂಚಾರಕ್ಕೆ ಯಾವುದೇ ನಿರ್ಬಂಧ ವಿಧಿಸಬಾರದು, ಜೊತೆಗೆ ಪ್ರತ್ಯೇಕವಾಗಿ ಇ- ಪಾಸ್ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.

ಇನ್ನು ಶಾಲೆ, ಕಾಲೇಜನ್ನು ಸೆಪ್ಟೆಂಬರ್ 30 ರ ವರೆಗೆ ತೆರೆಯುವಂತಿಲ್ಲ. ಅನ್ ಲೈನ್ ಕ್ಲಾಸ್ ನಡೆಸುವುದಿದ್ದರೆ ಶಿಕ್ಷಣ ಸಂಸ್ಥೆಗಳು 50 ಶೇ. ಸಿಬಂದಿಯನ್ನು ಕರೆಸಿಕೊಳ್ಳಬಹುದು. ಈ ಸೌಲಭ್ಯ ಕಂಟೈನ್ಮೆಂಟ್ ವಲಯದಿಂದ ಹೊರಗಿನ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರಲಿದೆ. ಇನ್ನು 9ರಿಂದ 12 ನೇ ತರಗತಿಯ ವಿದ್ಯಾರ್ಥಿಗಳು ಬೋಧನೆ, ನೋಟ್ಸ್ ವಿಚಾರದಲ್ಲಿ ಶಿಕ್ಷಕರ ಜೊತೆ ವ್ಯವಹರಿಸಲು ಶಾಲೆ ಅಥವಾ ಕಾಲೇಜಿಗೆ ತೆರಳಲು ಅವಕಾಶ ನೀಡಲಾಗಿದೆ. ಆದರೆ ಪೋಷಕರ ಪರ್ಮಿಶನ್ ಪಡೆದೇ ಶಾಲೆ, ಕಾಲೇಜಿಗೆ ತೆರಳುವಂತೆ ಸೂಚಿಸಲಾಗಿದೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm