ಬ್ರೇಕಿಂಗ್ ನ್ಯೂಸ್
10-06-21 08:29 pm Headline Karnataka News Network ದೇಶ - ವಿದೇಶ
ಲಕ್ನೋ, ಜೂ. 10: ''ಹುಡುಗಿಯರಿಗೆ ಮೊಬೈಲ್ ಫೋನ್ ನೀಡಬಾರದು, ಅದು ಅತ್ಯಾಚಾರಗಳಿಗೆ ಕಾರಣವಾಗುತ್ತದೆ'' ಎಂಬ ವಿವಾದಾತ್ಮಕ ಹೇಳಿಕೆಯನ್ನು ಉತ್ತರ ಪ್ರದೇಶ ಮಹಿಳಾ ಆಯೋಗದ ಸದಸ್ಯೆ ನೀಡಿದ್ದಾರೆ. ಅಲಿಗಢ ಜಿಲ್ಲೆಯ ಮಹಿಳೆಗೆ ಸಂಬಂಧಿಸಿದ ದೂರಿನ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ ಮೀನಾ ಕುಮಾರಿ ಈ ಹೇಳಿಕೆ ನೀಡಿದ್ದಾರೆ.
ಹುಡುಗಿಯರಿಗೆ ಮೊಬೈಲ್ ಫೋನ್ ನೀಡಬಾರದು. ಹುಡುಗಿಯರು ಹುಡುಗರೊಂದಿಗೆ ಗಂಟೆಗಟ್ಟಲೆ ಫೋನ್ಗಳಲ್ಲಿ ಮಾತನಾಡುತ್ತಾರೆ. ಬಳಿಕ ಹುಡುಗರೊಂದಿಗೆ ಓಡಿಹೋಗುತ್ತಾರೆ. ಹುಡುಗಿಯರ ಫೋನ್ಗಳನ್ನು ಕೂಡಾ ಈ ಪರಿಶೀಲನೆ ಮಾಡಲಾಗುತ್ತಿಲ್ಲ. ಕುಟುಂಬ ಸದಸ್ಯರಿಗೆ ಈ ವಿಚಾರದ ಅರಿವೇ ಇರುವುದಿಲ್ಲ" ಎಂದು ಯುಪಿ ಮಹಿಳಾ ಆಯೋಗದ ಸದದ್ಯೆ ಮೀನಾ ಕುಮಾರಿ ಹೇಳಿದ್ದಾರೆ.

ಮಹಿಳೆಯರ ಮೇಲಿನ ಹೆಚ್ಚುತ್ತಿರುವ ಅಪರಾಧಗಳ ಬಗ್ಗೆ ಸಮಾಜವೇ ಗಂಭೀರವಾಗಿರಬೇಕು. ಪೋಷಕರು, ವಿಶೇಷವಾಗಿ ತಾಯಂದಿರು ದೊಡ್ಡ ಜವಾಬ್ದಾರಿಯನ್ನು ಹೊಂದಿದ್ದಾರೆ. ತಾಯಂದಿರು ತಮ್ಮ ಹೆಣ್ಣುಮಕ್ಕಳ ಮೇಲೆ ನಿಗಾವಹಿಸಬೇಕು. ಈ ವಿಚಾರದಲ್ಲಿ ತಾಯಂದಿರಿಗೆ ದೊಡ್ಡ ಜವಾಬ್ದಾರಿ ಇದೆ. ತಾಯಂದಿರು ತಮ್ಮ ಹೆಣ್ಣುಮಕ್ಕಳ ಬಗ್ಗೆ ಅಸಡ್ಡೆ ಹೊಂದಿದ್ದರೆ, ಮುಂದಿನ ಪರಿಣಾಮಕ್ಕೆ ತಾಯಂದಿರೇ ಜವಾಬ್ದಾರರು" ಎಂದಿದ್ದಾರೆ.
ಆದರೆ ಈ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಆಯೋಗದ ಉಪಾಧ್ಯಕ್ಷೆ ಅಂಜು ಚೌಧರಿ, ''ಹೆಣ್ಣು ಮಕ್ಕಳಿಗೆ ಮೊಬೈಲ್ ಫೋನ್ ನೀಡದಿರುವುದು ಲೈಂಗಿಕ ದೌರ್ಜನ್ಯವನ್ನು ಕೊನೆಗೊಳಿಸಲು ಇರುವ ಉಪಾಯವಲ್ಲ, ಇದು ಪರಿಹಾರವೂ ಅಲ್ಲ'' ಎಂದು ಸ್ಪಷ್ಟಪಡಿಸಿದ್ದಾರೆ.
ಜನವರಿಯಲ್ಲಿ, ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಚಂದ್ರಮುಖಿ ದೇವಿ ಬಾದೌನ್ನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ತಮ್ಮ ಅಭಿಪ್ರಾಯ ನೀಡುವ ಸಂದರ್ಭ ಈ ರೀತಿಯೇ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ''ಮಹಿಳೆಯರು ಸಂಜೆ ಹೊರಗೆ ಹೋಗದಿದ್ದರೆ ಈ ಘಟನೆಯನ್ನು ತಪ್ಪಿಸಬಹುದಿತ್ತು'' ಎಂದು ಕೂಡಾ ಹೇಳಿದ್ದರು. ಈ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಚಂದ್ರಮುಖಿ ದೇವಿ ತನ್ನ ಹೇಳಿಕೆಯನ್ನು ಹಿಂತೆಗೆದುಕೊಂಡಿದ್ದರು.
A member of Uttar Pradesh Women's Commission has said that girls should not be given mobile phones as it leads to rape. During a Mahila Jansunwai (public hearing of women-related complaints) in Aligarh on Wednesday, the member said, “Girls talk on phones and later run away with boys….”
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 09:44 pm
HK News Staffer
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm