ಬ್ರೇಕಿಂಗ್ ನ್ಯೂಸ್
11-06-21 04:28 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಜೂನ್ 11: ಬಾಂಗ್ಲಾದೇಶ ಮೂಲಕ ಅಕ್ರಮವಾಗಿ ಭಾರತಕ್ಕೆ ನುಸುಳಲು ಯತ್ನಿಸಿದ್ದ ಚೀನಾ ಮೂಲದ ಶಂಕಿತ ಗೂಢಚರನನ್ನು ಗಡಿಭದ್ರತಾ ಪಡೆಯ ಯೋಧರು ಬಂಧಿಸಿದ್ದಾರೆ. ಚೈನಾದ ಹುಬೈ ಪ್ರಾಂತದ ನಿವಾಸಿ ಹ್ಯಾನ್ ಜೂನ್ (36) ಬಂಧಿತ ವ್ಯಕ್ತಿ.
ಚೀನಾ ಪರವಾಗಿ ಭಾರತದಲ್ಲಿ ಗೂಢಚಾರಿಕೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ ಬಿಎಸ್ಎಫ್ ಪಾಲಿಗೆ ದೊಡ್ಡ ಗೆಲುವು ಎಂದು ಗಡಿಭದ್ರತಾ ಪಡೆ ಹೇಳಿಕೊಂಡಿದೆ. ಈತ ಜೂನ್ 2ರಂದು ಬಾಂಗ್ಲಾದೇಶದ ರಾಜಧಾನಿ ಢಾಕಾಕ್ಕೆ ಬಂದಿದ್ದ. ಅಲ್ಲಿ ತನ್ನ ಸ್ನೇಹಿತನ ಮನೆಯಲ್ಲಿ ಉಳಿದುಕೊಂಡಿದ್ದ. ಬಳಿಕ ಪಶ್ಚಿಮ ಬಂಗಾಳದ ಗಡಿಜಿಲ್ಲೆ ಮಾಲ್ಡಾ ಮೂಲಕ ಭಾರತ ಪ್ರವೇಶ ಮಾಡುತ್ತಿದ್ದಾಗ ಗಡಿಭದ್ರತಾ ಪಡೆಯ ಕಣ್ಣಿಗೆ ಬಿದ್ದಿದ್ದು ವಿಚಾರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಹ್ಯಾನ್ ಜೂನ್ ವಿಚಾರಣೆ ವೇಳೆ ಆತನ ಬಳಿ ನಿಗೂಢ ರೀತಿಯ ಇಲೆಕ್ಟ್ರಾನಿಕ್ ವಸ್ತುಗಳು ಪತ್ತೆಯಾಗಿವೆ. ಹೀಗಾಗಿ ಚೀನಾದ ವ್ಯಕ್ತಿ ಭಾರತದಲ್ಲಿದ್ದುಕೊಂಡು ಗೂಢಚಾರಿಕೆ ನಡೆಸುತ್ತಿದ್ದಾನೆಯೇ ಎನ್ನುವ ಅನುಮಾನ ಉಂಟಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ನಾಲ್ಕು ಬಾರಿ ಭಾರತಕ್ಕೆ ಬಂದಿದ್ದಾಗಿ ಹ್ಯಾನ್ ಜೂನ್ ಹೇಳಿದ್ದು, ಉತ್ತರ ಪ್ರದೇಶದ ಗುರ್ ಗ್ರಾಮ್ ನಲ್ಲಿ ಸ್ಟಾರ್ ಸ್ಪ್ರಿಂಗ್ ಎನ್ನುವ ಹೆಸರಿನ ಹೊಟೇಲ್ ನಡೆಸುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. ಉತ್ತರ ಪ್ರದೇಶದಲ್ಲಿ ಈತನ ವಿರುದ್ಧ ಮೊಕದ್ದಮೆ ದಾಖಲಾಗಿದೆ.
ಬಾಂಗ್ಲಾ ಗಡಿಭಾಗ ಮಾಲಿಕ್ ಸುಲ್ತಾನ್ ಪುರ್ ಔಟ್ ಪೋಸ್ಟ್ ಮೂಲಕ ಕಾರಿನಲ್ಲಿ ಬಂದಿದ್ದ ಚೀನಾದ ವ್ಯಕ್ತಿಯನ್ನು ನಿಲ್ಲಿಸಿ ವಿಚಾರಣೆ ನಡೆಸಲು ಯತ್ನಿಸಿದಾಗ, ಕಾರಿನಲ್ಲಿ ಎಸ್ಕೇಪ್ ಆಗಿದ್ದಾನೆ. ಕೂಡಲೇ ಸ್ಥಳೀಯ ಪೊಲೀಸರು ಬೆನ್ನಟ್ಟಿ ಹಿಡಿದಿದ್ದು, ವಿಚಾರಣೆ ನಡೆಸಿದ್ದಾರೆ. ಪಾಸ್ಪೋರ್ಟ್ ಪರಿಶೀಲನೆ ನಡೆಸಿದಾಗ ಬಿಸಿನೆಸ್ ವೀಸಾದಲ್ಲಿ ಜೂನ್ 2ರಂದು ಢಾಕಾಕ್ಕೆ ಬಂದಿದ್ದು ಗೊತ್ತಾಗಿದೆ.
ಪರಿಶೀಲನೆ ವೇಳೆ ನಾಲ್ಕು ಬಾರಿ ಭಾರತಕ್ಕೆ ಬಂದಿದ್ದು ಗೊತ್ತಾಗಿದ್ದು, ದೆಹಲಿ, ಗುರುಗ್ರಾಮ್, ಹೈದರಾಬಾದ್ ನಲ್ಲಿ ಇದ್ದುದು ತಿಳಿದುಬಂದಿದೆ. ಕೆಲವು ದಿನಗಳ ಹಿಂದೆ ಹ್ಯಾನ್ ಜೂನ್ ಜೊತೆಗೆ ಪಾರ್ಟ್ನರ್ ಆಗಿದ್ದ ಸೂನ್ ಜಿಯಾಂಗ್, ಎಟಿಎಸ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ. ಆತನ ಜೊತೆಗೆ ನಿಕಟ ನೆಟ್ವರ್ಕ್ ಹೊಂದಿದ್ದ ಕಾರಣ ಹ್ಯಾನ್ ಜೂನ್ ಹೆಸರನ್ನು ಪೊಲೀಸರಿಗೆ ತಿಳಿಸಿದ್ದ. ಇದೇ ಕಾರಣದಿಂದ ಚೀನಾದಲ್ಲಿದ್ದ ಹ್ಯಾನ್ ಜೂನ್ ಭಾರತಕ್ಕೆ ಮರಳಲು ಪಾಸ್ಪೋರ್ಟ್ ಸಿಕ್ಕಿರಲಿಲ್ಲ. ಇದರಿಂದಾಗಿ ಬಾಂಗ್ಲಾದೇಶದ ಢಾಕಾಕ್ಕೆ ಬಂದು ಭಾರತಕ್ಕೆ ಒಳನುಸುಳಿದ್ದ ಅನ್ನುವುದು ತನಿಖೆಯಲ್ಲಿ ತಿಳಿದುಬಂದಿದೆ.
The Border Security Force nabbed a Chinese intruder attempting to enter India through the Bangladesh border, who has been identified as a wanted criminal
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 09:44 pm
HK News Staffer
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
ಪುತ್ತೂರು ; ಪತಿ - ಪತ್ನಿ ಜಗಳ ಕೊಲೆಯಲ್ಲಿ ಅವಸಾನ, ಪ...
20-03-26 03:39 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm