ಬ್ರೇಕಿಂಗ್ ನ್ಯೂಸ್
11-06-21 04:28 pm Headline Karnataka News Network ದೇಶ - ವಿದೇಶ
ಕೊಲ್ಕತ್ತಾ, ಜೂನ್ 11: ಬಾಂಗ್ಲಾದೇಶ ಮೂಲಕ ಅಕ್ರಮವಾಗಿ ಭಾರತಕ್ಕೆ ನುಸುಳಲು ಯತ್ನಿಸಿದ್ದ ಚೀನಾ ಮೂಲದ ಶಂಕಿತ ಗೂಢಚರನನ್ನು ಗಡಿಭದ್ರತಾ ಪಡೆಯ ಯೋಧರು ಬಂಧಿಸಿದ್ದಾರೆ. ಚೈನಾದ ಹುಬೈ ಪ್ರಾಂತದ ನಿವಾಸಿ ಹ್ಯಾನ್ ಜೂನ್ (36) ಬಂಧಿತ ವ್ಯಕ್ತಿ.
ಚೀನಾ ಪರವಾಗಿ ಭಾರತದಲ್ಲಿ ಗೂಢಚಾರಿಕೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ ಬಿಎಸ್ಎಫ್ ಪಾಲಿಗೆ ದೊಡ್ಡ ಗೆಲುವು ಎಂದು ಗಡಿಭದ್ರತಾ ಪಡೆ ಹೇಳಿಕೊಂಡಿದೆ. ಈತ ಜೂನ್ 2ರಂದು ಬಾಂಗ್ಲಾದೇಶದ ರಾಜಧಾನಿ ಢಾಕಾಕ್ಕೆ ಬಂದಿದ್ದ. ಅಲ್ಲಿ ತನ್ನ ಸ್ನೇಹಿತನ ಮನೆಯಲ್ಲಿ ಉಳಿದುಕೊಂಡಿದ್ದ. ಬಳಿಕ ಪಶ್ಚಿಮ ಬಂಗಾಳದ ಗಡಿಜಿಲ್ಲೆ ಮಾಲ್ಡಾ ಮೂಲಕ ಭಾರತ ಪ್ರವೇಶ ಮಾಡುತ್ತಿದ್ದಾಗ ಗಡಿಭದ್ರತಾ ಪಡೆಯ ಕಣ್ಣಿಗೆ ಬಿದ್ದಿದ್ದು ವಿಚಾರಣೆ ನಡೆಸಿ ವಶಕ್ಕೆ ಪಡೆದಿದ್ದಾರೆ.

ಹ್ಯಾನ್ ಜೂನ್ ವಿಚಾರಣೆ ವೇಳೆ ಆತನ ಬಳಿ ನಿಗೂಢ ರೀತಿಯ ಇಲೆಕ್ಟ್ರಾನಿಕ್ ವಸ್ತುಗಳು ಪತ್ತೆಯಾಗಿವೆ. ಹೀಗಾಗಿ ಚೀನಾದ ವ್ಯಕ್ತಿ ಭಾರತದಲ್ಲಿದ್ದುಕೊಂಡು ಗೂಢಚಾರಿಕೆ ನಡೆಸುತ್ತಿದ್ದಾನೆಯೇ ಎನ್ನುವ ಅನುಮಾನ ಉಂಟಾಗಿದ್ದು, ಪೊಲೀಸರು ಬಂಧಿಸಿದ್ದಾರೆ. ಈ ಹಿಂದೆ ನಾಲ್ಕು ಬಾರಿ ಭಾರತಕ್ಕೆ ಬಂದಿದ್ದಾಗಿ ಹ್ಯಾನ್ ಜೂನ್ ಹೇಳಿದ್ದು, ಉತ್ತರ ಪ್ರದೇಶದ ಗುರ್ ಗ್ರಾಮ್ ನಲ್ಲಿ ಸ್ಟಾರ್ ಸ್ಪ್ರಿಂಗ್ ಎನ್ನುವ ಹೆಸರಿನ ಹೊಟೇಲ್ ನಡೆಸುತ್ತಿರುವ ಬಗ್ಗೆ ಮಾಹಿತಿ ನೀಡಿದ್ದಾನೆ. ಉತ್ತರ ಪ್ರದೇಶದಲ್ಲಿ ಈತನ ವಿರುದ್ಧ ಮೊಕದ್ದಮೆ ದಾಖಲಾಗಿದೆ.
ಬಾಂಗ್ಲಾ ಗಡಿಭಾಗ ಮಾಲಿಕ್ ಸುಲ್ತಾನ್ ಪುರ್ ಔಟ್ ಪೋಸ್ಟ್ ಮೂಲಕ ಕಾರಿನಲ್ಲಿ ಬಂದಿದ್ದ ಚೀನಾದ ವ್ಯಕ್ತಿಯನ್ನು ನಿಲ್ಲಿಸಿ ವಿಚಾರಣೆ ನಡೆಸಲು ಯತ್ನಿಸಿದಾಗ, ಕಾರಿನಲ್ಲಿ ಎಸ್ಕೇಪ್ ಆಗಿದ್ದಾನೆ. ಕೂಡಲೇ ಸ್ಥಳೀಯ ಪೊಲೀಸರು ಬೆನ್ನಟ್ಟಿ ಹಿಡಿದಿದ್ದು, ವಿಚಾರಣೆ ನಡೆಸಿದ್ದಾರೆ. ಪಾಸ್ಪೋರ್ಟ್ ಪರಿಶೀಲನೆ ನಡೆಸಿದಾಗ ಬಿಸಿನೆಸ್ ವೀಸಾದಲ್ಲಿ ಜೂನ್ 2ರಂದು ಢಾಕಾಕ್ಕೆ ಬಂದಿದ್ದು ಗೊತ್ತಾಗಿದೆ.
ಪರಿಶೀಲನೆ ವೇಳೆ ನಾಲ್ಕು ಬಾರಿ ಭಾರತಕ್ಕೆ ಬಂದಿದ್ದು ಗೊತ್ತಾಗಿದ್ದು, ದೆಹಲಿ, ಗುರುಗ್ರಾಮ್, ಹೈದರಾಬಾದ್ ನಲ್ಲಿ ಇದ್ದುದು ತಿಳಿದುಬಂದಿದೆ. ಕೆಲವು ದಿನಗಳ ಹಿಂದೆ ಹ್ಯಾನ್ ಜೂನ್ ಜೊತೆಗೆ ಪಾರ್ಟ್ನರ್ ಆಗಿದ್ದ ಸೂನ್ ಜಿಯಾಂಗ್, ಎಟಿಎಸ್ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ. ಆತನ ಜೊತೆಗೆ ನಿಕಟ ನೆಟ್ವರ್ಕ್ ಹೊಂದಿದ್ದ ಕಾರಣ ಹ್ಯಾನ್ ಜೂನ್ ಹೆಸರನ್ನು ಪೊಲೀಸರಿಗೆ ತಿಳಿಸಿದ್ದ. ಇದೇ ಕಾರಣದಿಂದ ಚೀನಾದಲ್ಲಿದ್ದ ಹ್ಯಾನ್ ಜೂನ್ ಭಾರತಕ್ಕೆ ಮರಳಲು ಪಾಸ್ಪೋರ್ಟ್ ಸಿಕ್ಕಿರಲಿಲ್ಲ. ಇದರಿಂದಾಗಿ ಬಾಂಗ್ಲಾದೇಶದ ಢಾಕಾಕ್ಕೆ ಬಂದು ಭಾರತಕ್ಕೆ ಒಳನುಸುಳಿದ್ದ ಅನ್ನುವುದು ತನಿಖೆಯಲ್ಲಿ ತಿಳಿದುಬಂದಿದೆ.
The Border Security Force nabbed a Chinese intruder attempting to enter India through the Bangladesh border, who has been identified as a wanted criminal
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm