ಬ್ರೇಕಿಂಗ್ ನ್ಯೂಸ್
13-06-21 01:44 pm Headline Karnataka News Network ದೇಶ - ವಿದೇಶ
ಪ್ರತಾಪಗಢ, ಜೂನ್ 13: ಕೊರೊನಾ ಮಹಾಮಾರಿ ಇಡೀ ಜಗತ್ತಿಗೆ ಹೆಮ್ಮಾರಿಯಾಗಿ ಪರಿಣಮಿಸಿದ್ದರೆ, ಇಲ್ಲೊಂದು ಗ್ರಾಮದಲ್ಲಿ ಗ್ರಾಮಸ್ಥರೇ ಸೇರಿ ಕೊರೊನಾ ಮಾತೆಯ ಹೆಸರಲ್ಲಿ ಗುಡಿ ಕಟ್ಟಿ ಸುದ್ದಿಯಾಗಿದ್ದಾರೆ.
ಉತ್ತರ ಪ್ರದೇಶದ ಪ್ರತಾಪಗಢ ಜಿಲ್ಲೆಯ ಜೂಹಿ ಶುಕಲ್ಪುರ್ ಗ್ರಾಮದಲ್ಲಿ ಗ್ರಾಮಸ್ಥರು ಸೇರಿ ಕೊರೊನಾ ಮಾತೆಗೆ ಗುಡಿ ಕಟ್ಟಿದ್ದಾರೆ. ಲೋಕೇಶ್ ಕುಮಾರ್ ಶ್ರೀವಾಸ್ತವ ಎಂಬಾತ ಗ್ರಾಮಸ್ಥರ ಸಹಕಾರದಲ್ಲಿ ಗುಡಿ ಕಟ್ಟಿದ್ದಾನೆ. ಕೊರೊನಾ ಮಾತೆಯ ಹೆಸರಲ್ಲಿ ವಿಗ್ರಹವನ್ನೂ ಸ್ಥಾಪನೆ ಮಾಡಿದ್ದ. ಗ್ರಾಮದ ನಿವಾಸಿ ರಾಧೇಶ್ಯಾಮ್ ವರ್ಮ ಎಂಬ ಅರ್ಚಕನನ್ನು ಕೊರೊನಾ ದೇವಿಯ ಪೂಜೆಗೆ ನೇಮಕ ಮಾಡಲಾಗಿತ್ತು. ಸ್ಥಳೀಯ ಜನರು ಕೊರೊನಾ ದೇವಿಯನ್ನು ಪೂಜಿಸಿ, ಜಗತ್ತಿಗೆ ಕವಿದ ಕತ್ತಲೆಯನ್ನು ನೀಗಿಸು ಎಂದು ಪ್ರಾರ್ಥಿಸಲು ತೊಡಗಿದ್ದರು.

ಆದರೆ, ಗುಡಿ ಕಟ್ಟಿ ನಾಲ್ಕು ದಿನಗಳಾಗುವಷ್ಟರಲ್ಲಿ ಜಾಗದ ವಾರೀಸುದಾರರು ತಕರಾರು ತೆಗೆದಿದ್ದಾರೆ. ಆ ಜಾಗ ನಾಗೇಶ್ ಕುಮಾರ್ ಶ್ರೀವಾಸ್ತವ ಮತ್ತು ಜೈ ಪ್ರಕಾಶ್ ಶ್ರೀವಾಸ್ತವ ಎಂಬವರಿಗೆ ಸೇರಿದ್ದೆಂದು ಅವರು ಪೊಲೀಸ್ ದೂರು ನೀಡಿದ್ದಾರೆ. ಇಷ್ಟಾಗುತ್ತಿದ್ದಂತೆ ಗುಡಿ ಕಟ್ಟಲು ಮುಂಚೂಣಿಯಲ್ಲಿ ನಿಂತಿದ್ದ ಲೋಕೇಶ್ ಕುಮಾರ್ ನಾಪತ್ತೆಯಾಗಿದ್ದಾನೆ. ಲೋಕೇಶ್ ಇದೇ ಊರಿನ ವ್ಯಕ್ತಿಯಾಗಿದ್ದರೂ, ದೆಹಲಿ ಸಮೀಪದ ನೋಯ್ಡಾದಲ್ಲಿ ನೆಲೆಸಿದ್ದ.
ತಮ್ಮ ಜಾಗವನ್ನು ಕಬಳಿಸಲು ಗುಡಿ ಕಟ್ಟಲಾಗಿದೆ ಎಂದು ನಾಗೇಶ್ ಮತ್ತು ಸೋದರ ಪೊಲೀಸರಿಗೆ ದೂರು ನೀಡಿದ್ದರು. ವಿವಾದಿತ ಜಾಗದಲ್ಲಿ ಗುಡಿ ಕಟ್ಟಲಾಗಿತ್ತು. ಗುಡಿ ನಿರ್ಮಾಣದಲ್ಲಿ ಈ ಜಾಗಕ್ಕೆ ಸೇರಿದ ವ್ಯಕ್ತಿಗಳು ಕೂಡ ಶಾಮೀಲಾಗಿದ್ದಾರೆ. ಗುಡಿಯ ಅಕ್ರಮ ನಿರ್ಮಾಣದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ ಎಂದು ಸಂಗೀಪುರ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಆದರೆ, ಅತ್ತ ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ಮತ್ತೊಂದು ಗುಂಪು ಕೊರೊನಾ ದೇವಿಯ ಗುಡಿಯನ್ನು ಒಡೆದು ಹಾಕಿದೆ.
People at Juhi Shukulpur village here built a "corona mata" temple, seeking divine grace to stay clear of the infection. However, the temple built on June 7 was demolished on Friday night.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm