ಬ್ರೇಕಿಂಗ್ ನ್ಯೂಸ್
14-06-21 11:03 am Headline Karnataka News Network ದೇಶ - ವಿದೇಶ
ಟೆಲ್ ಅವಿವ್, ಜೂನ್ 14: ಇಸ್ರೇಲ್ನಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು 12 ವರ್ಷಗಳ ಆಡಳಿತ ಅಂತ್ಯಗೊಂಡಿದೆ. ರಾಷ್ಟ್ರೀಯವಾದಿ ನೆಫ್ತಾಲಿ ಬೆನೆಟ್ ಸಮ್ಮಿಶ್ರ ಸರ್ಕಾರದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಅತ್ಯಲ್ಪ ಬಹುಮತ 60-59 ರಿಂದ ಸರ್ಕಾರ ರಚನೆ ಮಾಡಲಾಗಿದ್ದು, ಅಧಿಕಾರ ಹಂಚಿಕೆಯ ಸೂತ್ರದ ಭಾಗವಾಗಿ 2023 ರ ಸೆಪ್ಟೆಂಬರ್ ತಿಂಗಳವರೆಗೂ ನಫ್ತಾಲಿ ಬೆನೆಟ್ ಅವರು ಪ್ರಧಾನಿಯಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ.

ಇಸ್ರೇಲ್ನ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಡಪಂಥೀಯ ಅರಬ್ ಯೇತರ ಪಕ್ಷಗಳು, ಸ್ವತಂತ್ರ ಅರಬ್ ಪಕ್ಷ ರಾಮ್ ರಾಷ್ಟ್ರೀಯವಾದಿ ನೆಫ್ತಾಲಿ ಬೆನ್ನೆಟ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ್ದು, ಅನೂಹ್ಯವಾದ ರೀತಿಯಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಗಳನ್ನು ಹೊಂದಿರುವ ಪಕ್ಷಗಳೇ ಸರ್ಕಾರ ರಚಿಸಿರುವುದು ಅಚ್ಚರಿ ಮೂಡಿಸಿದೆ.
ನೇತನ್ಯಾಹು ದೀರ್ಘಾವಧಿ ಸೇವೆ ಸಲ್ಲಿಸಿದ ಇಸ್ರೆಲ್ನ ಪ್ರಧಾನಿಯಾಗಿದ್ದು, ಲಿಕುಡ್ ಪಕ್ಷದ ಮುಖ್ಯಸ್ಥರಾಗಿ, ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದಾರೆ. ಸಂಸತ್ ನಲ್ಲಿ ನಡೆದ ಚರ್ಚೆಯ ವೇಳೆ ನಾವು ವಾಪಸ್ಸಾಗಲಿದ್ದೇವೆ ಎಂದು ನೆತನ್ಯಾಹು ಹೇಳಿದ್ದಾರೆ.

ಹಾಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ತಮಗೆ ಅಧಿಕಾರದಲ್ಲಿ ಮುಂದುವರೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ನಂತರ ನಫ್ತಾಲಿ ಬೆನೆಟ್ ಅವರು ಇನ್ನೆರಡು ವರ್ಷಗಳ ಆಡಳಿತಾವಧಿಯನ್ನು ಯೆಶ್ ಅಟಿಡ್ ಅವರಿಗೆ ಅಧಿಕಾರ ಬಿಟ್ಟುಕೊಡಲಿದ್ದಾರೆ.
ಯಾವುದೇ ಇಸ್ರೇಲಿ ಪ್ರಜೆಯನ್ನೂ ಸಹ ಬಿಟ್ಟುಕೊಡಲು ತಮ್ಮ ಸಮಿಶ್ರ ಸರ್ಕಾರ ಒಪ್ಪುವುದಿಲ್ಲ ಎಂದಿದ್ದಾರೆ ಬಹು ಕೋಟ್ಯಧಿಪತಿಯೂ ಆಗಿರುವ ನಫ್ತಾಲಿ ಬೆನೆಟ್. ಇಸ್ರೇಲ್ನ ಸಂಸತ್ ಹೊಸತಾಗಿ ರಚನೆಗೊಂಡಿರುವ ಸಮಿಶ್ರ ಸರ್ಕಾರಕ್ಕೆ ಅಂಗೀಕಾರ ನೀಡುವ ಸಾಧ್ಯತೆ ಬಹುತೇಕ ಹೆಚ್ಚಿದೆ ಎಂದು ಹೇಳಲಾಗಿತ್ತು. ಈಗ ಅದೇ ರೀತಿ ನಫ್ತಾಲಿ ಬೆನೆಟ್ ಇಸ್ರೇಲ್ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
Naftali Bennett was on Sunday sworn in as Israel's new Prime Minister, ending Benjamin Netanyahu's 12-year hold on power and the political uncertainty that gripped the Jewish nation for months after inconclusive elections.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am