ಬ್ರೇಕಿಂಗ್ ನ್ಯೂಸ್
14-06-21 11:03 am Headline Karnataka News Network ದೇಶ - ವಿದೇಶ
ಟೆಲ್ ಅವಿವ್, ಜೂನ್ 14: ಇಸ್ರೇಲ್ನಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು 12 ವರ್ಷಗಳ ಆಡಳಿತ ಅಂತ್ಯಗೊಂಡಿದೆ. ರಾಷ್ಟ್ರೀಯವಾದಿ ನೆಫ್ತಾಲಿ ಬೆನೆಟ್ ಸಮ್ಮಿಶ್ರ ಸರ್ಕಾರದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಅತ್ಯಲ್ಪ ಬಹುಮತ 60-59 ರಿಂದ ಸರ್ಕಾರ ರಚನೆ ಮಾಡಲಾಗಿದ್ದು, ಅಧಿಕಾರ ಹಂಚಿಕೆಯ ಸೂತ್ರದ ಭಾಗವಾಗಿ 2023 ರ ಸೆಪ್ಟೆಂಬರ್ ತಿಂಗಳವರೆಗೂ ನಫ್ತಾಲಿ ಬೆನೆಟ್ ಅವರು ಪ್ರಧಾನಿಯಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ.

ಇಸ್ರೇಲ್ನ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಡಪಂಥೀಯ ಅರಬ್ ಯೇತರ ಪಕ್ಷಗಳು, ಸ್ವತಂತ್ರ ಅರಬ್ ಪಕ್ಷ ರಾಮ್ ರಾಷ್ಟ್ರೀಯವಾದಿ ನೆಫ್ತಾಲಿ ಬೆನ್ನೆಟ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ್ದು, ಅನೂಹ್ಯವಾದ ರೀತಿಯಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಗಳನ್ನು ಹೊಂದಿರುವ ಪಕ್ಷಗಳೇ ಸರ್ಕಾರ ರಚಿಸಿರುವುದು ಅಚ್ಚರಿ ಮೂಡಿಸಿದೆ.
ನೇತನ್ಯಾಹು ದೀರ್ಘಾವಧಿ ಸೇವೆ ಸಲ್ಲಿಸಿದ ಇಸ್ರೆಲ್ನ ಪ್ರಧಾನಿಯಾಗಿದ್ದು, ಲಿಕುಡ್ ಪಕ್ಷದ ಮುಖ್ಯಸ್ಥರಾಗಿ, ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದಾರೆ. ಸಂಸತ್ ನಲ್ಲಿ ನಡೆದ ಚರ್ಚೆಯ ವೇಳೆ ನಾವು ವಾಪಸ್ಸಾಗಲಿದ್ದೇವೆ ಎಂದು ನೆತನ್ಯಾಹು ಹೇಳಿದ್ದಾರೆ.

ಹಾಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ತಮಗೆ ಅಧಿಕಾರದಲ್ಲಿ ಮುಂದುವರೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ನಂತರ ನಫ್ತಾಲಿ ಬೆನೆಟ್ ಅವರು ಇನ್ನೆರಡು ವರ್ಷಗಳ ಆಡಳಿತಾವಧಿಯನ್ನು ಯೆಶ್ ಅಟಿಡ್ ಅವರಿಗೆ ಅಧಿಕಾರ ಬಿಟ್ಟುಕೊಡಲಿದ್ದಾರೆ.
ಯಾವುದೇ ಇಸ್ರೇಲಿ ಪ್ರಜೆಯನ್ನೂ ಸಹ ಬಿಟ್ಟುಕೊಡಲು ತಮ್ಮ ಸಮಿಶ್ರ ಸರ್ಕಾರ ಒಪ್ಪುವುದಿಲ್ಲ ಎಂದಿದ್ದಾರೆ ಬಹು ಕೋಟ್ಯಧಿಪತಿಯೂ ಆಗಿರುವ ನಫ್ತಾಲಿ ಬೆನೆಟ್. ಇಸ್ರೇಲ್ನ ಸಂಸತ್ ಹೊಸತಾಗಿ ರಚನೆಗೊಂಡಿರುವ ಸಮಿಶ್ರ ಸರ್ಕಾರಕ್ಕೆ ಅಂಗೀಕಾರ ನೀಡುವ ಸಾಧ್ಯತೆ ಬಹುತೇಕ ಹೆಚ್ಚಿದೆ ಎಂದು ಹೇಳಲಾಗಿತ್ತು. ಈಗ ಅದೇ ರೀತಿ ನಫ್ತಾಲಿ ಬೆನೆಟ್ ಇಸ್ರೇಲ್ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
Naftali Bennett was on Sunday sworn in as Israel's new Prime Minister, ending Benjamin Netanyahu's 12-year hold on power and the political uncertainty that gripped the Jewish nation for months after inconclusive elections.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm