ಬ್ರೇಕಿಂಗ್ ನ್ಯೂಸ್
14-06-21 11:03 am Headline Karnataka News Network ದೇಶ - ವಿದೇಶ
ಟೆಲ್ ಅವಿವ್, ಜೂನ್ 14: ಇಸ್ರೇಲ್ನಲ್ಲಿ ಪ್ರಧಾನಿ ಬೆಂಜಮಿನ್ ನೇತನ್ಯಾಹು 12 ವರ್ಷಗಳ ಆಡಳಿತ ಅಂತ್ಯಗೊಂಡಿದೆ. ರಾಷ್ಟ್ರೀಯವಾದಿ ನೆಫ್ತಾಲಿ ಬೆನೆಟ್ ಸಮ್ಮಿಶ್ರ ಸರ್ಕಾರದ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
ಅತ್ಯಲ್ಪ ಬಹುಮತ 60-59 ರಿಂದ ಸರ್ಕಾರ ರಚನೆ ಮಾಡಲಾಗಿದ್ದು, ಅಧಿಕಾರ ಹಂಚಿಕೆಯ ಸೂತ್ರದ ಭಾಗವಾಗಿ 2023 ರ ಸೆಪ್ಟೆಂಬರ್ ತಿಂಗಳವರೆಗೂ ನಫ್ತಾಲಿ ಬೆನೆಟ್ ಅವರು ಪ್ರಧಾನಿಯಾಗಿ ಕಾರ್ಯನಿರ್ವಹಣೆ ಮಾಡಲಿದ್ದಾರೆ.

ಇಸ್ರೇಲ್ನ ರಾಜಕೀಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಎಡಪಂಥೀಯ ಅರಬ್ ಯೇತರ ಪಕ್ಷಗಳು, ಸ್ವತಂತ್ರ ಅರಬ್ ಪಕ್ಷ ರಾಮ್ ರಾಷ್ಟ್ರೀಯವಾದಿ ನೆಫ್ತಾಲಿ ಬೆನ್ನೆಟ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ನೀಡಿದ್ದು, ಅನೂಹ್ಯವಾದ ರೀತಿಯಲ್ಲಿ ಸೈದ್ಧಾಂತಿಕ ಭಿನ್ನಾಭಿಪ್ರಾಗಳನ್ನು ಹೊಂದಿರುವ ಪಕ್ಷಗಳೇ ಸರ್ಕಾರ ರಚಿಸಿರುವುದು ಅಚ್ಚರಿ ಮೂಡಿಸಿದೆ.
ನೇತನ್ಯಾಹು ದೀರ್ಘಾವಧಿ ಸೇವೆ ಸಲ್ಲಿಸಿದ ಇಸ್ರೆಲ್ನ ಪ್ರಧಾನಿಯಾಗಿದ್ದು, ಲಿಕುಡ್ ಪಕ್ಷದ ಮುಖ್ಯಸ್ಥರಾಗಿ, ವಿಪಕ್ಷ ನಾಯಕರಾಗಿ ಮುಂದುವರೆಯಲಿದ್ದಾರೆ. ಸಂಸತ್ ನಲ್ಲಿ ನಡೆದ ಚರ್ಚೆಯ ವೇಳೆ ನಾವು ವಾಪಸ್ಸಾಗಲಿದ್ದೇವೆ ಎಂದು ನೆತನ್ಯಾಹು ಹೇಳಿದ್ದಾರೆ.

ಹಾಲಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು, ತಮಗೆ ಅಧಿಕಾರದಲ್ಲಿ ಮುಂದುವರೆಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದರು. ನಂತರ ನಫ್ತಾಲಿ ಬೆನೆಟ್ ಅವರು ಇನ್ನೆರಡು ವರ್ಷಗಳ ಆಡಳಿತಾವಧಿಯನ್ನು ಯೆಶ್ ಅಟಿಡ್ ಅವರಿಗೆ ಅಧಿಕಾರ ಬಿಟ್ಟುಕೊಡಲಿದ್ದಾರೆ.
ಯಾವುದೇ ಇಸ್ರೇಲಿ ಪ್ರಜೆಯನ್ನೂ ಸಹ ಬಿಟ್ಟುಕೊಡಲು ತಮ್ಮ ಸಮಿಶ್ರ ಸರ್ಕಾರ ಒಪ್ಪುವುದಿಲ್ಲ ಎಂದಿದ್ದಾರೆ ಬಹು ಕೋಟ್ಯಧಿಪತಿಯೂ ಆಗಿರುವ ನಫ್ತಾಲಿ ಬೆನೆಟ್. ಇಸ್ರೇಲ್ನ ಸಂಸತ್ ಹೊಸತಾಗಿ ರಚನೆಗೊಂಡಿರುವ ಸಮಿಶ್ರ ಸರ್ಕಾರಕ್ಕೆ ಅಂಗೀಕಾರ ನೀಡುವ ಸಾಧ್ಯತೆ ಬಹುತೇಕ ಹೆಚ್ಚಿದೆ ಎಂದು ಹೇಳಲಾಗಿತ್ತು. ಈಗ ಅದೇ ರೀತಿ ನಫ್ತಾಲಿ ಬೆನೆಟ್ ಇಸ್ರೇಲ್ನ ನೂತನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ.
Naftali Bennett was on Sunday sworn in as Israel's new Prime Minister, ending Benjamin Netanyahu's 12-year hold on power and the political uncertainty that gripped the Jewish nation for months after inconclusive elections.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm