ಬ್ರೇಕಿಂಗ್ ನ್ಯೂಸ್
14-06-21 09:48 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜೂ.14: ದೇಶದಲ್ಲಿ ಪ್ರಯಾಣ ನಿರ್ಬಂಧಗಳ ಕಾರಣದಿಂದಾಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ದಂಪತಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿವಾಹ ನೋಂದಣಿಗೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ.
ಅರ್ಜಿದಾರರಾದ ಥಾಮಸ್ ಕುಟ್ಟಿ ಜೋಸೆಫ್ ಮತ್ತು ಬ್ಲೋಸಮ್ ಥಾಮಸ್ ತಮ್ಮ ವಿವಾಹ ನೋಂದಣಿ ಮಾಡಬೇಕಾದರೆ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರೂ ಹಾಜರಿರಬೇಕು ಎಂದು ಸ್ಥಳೀಯ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿಗಳು ತಿಳಿಸಿದ್ದರು. ಈ ಹಿನ್ನೆಲೆ ಥಾಮಸ್ ಕುಟ್ಟಿ ಜೋಸೆಫ್ ಮತ್ತು ಬ್ಲೋಸಮ್ ಥಾಮಸ್ ಹೈಕೋರ್ಟ್ ಕದ ತಟ್ಟಿದ್ದಾರೆ.
ಅರ್ಜಿದಾರರ ಪರ ವಕೀಲ ಜಾಕೋಬ್ ಪಿ. ಅಲೆಕ್ಸ್ ಪ್ರಕಾರ, ಅರ್ಜಿದಾರರು 1997 ರ ಜೂನ್ 30 ರಂದು ವಿವಾಹವಾಗಿದ್ದಾರೆ. ಪ್ರಸ್ತುತ ದಂಪತಿಗೆ ಮೂವರು ಮಕ್ಕಳಿದ್ದಾರೆ. ತಾತ್ಕಾಲಿಕ ವೀಸಾದ ಮೇಲೆ ಈ ದಂಪತಿ ಇತ್ತೀಚೆಗೆ ಯುಎಇಯಿಂದ ಆಸ್ಟ್ರೇಲಿಯಾಕ್ಕೆ ಹೋಗಿದ್ದಾರೆ. ವಲಸೆ ನಿಯಮದ ಬದಲಾವಣೆಯಿಂದಾಗಿ, ಈ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗಿದೆ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ಜೋಡಿಯು 1997 ರ ಜೂನ್ 30 ರಂದು ವಿವಾಹವಾಗಿದ್ದಾರೆ ಎಂದು ಉಲ್ಲೇಖ ಮಾಡಲಾಗಿದೆ.

ಅರ್ಜಿ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಾಹದ ನೋಂದಣಿಗೆ ಅವಕಾಶವಿದೆ ಎಂದು ತೀರ್ಪು ಹೇಳಿದೆ. ಅಲ್ಲದೆ, ಅರ್ಜಿದಾರರು ಹಾಜರುಪಡಿಸಿದ ಸಾಕ್ಷ್ಯಗಳಿಂದ ಪತಿ, ಪತ್ನಿ ಎಂಬುದು ಸಾಬೀತಾಗಿದೆ. ಮದುವೆಗಳ ನೋಂದಣಿಯನ್ನು ರಿಜಿಸ್ಟ್ರಾರ್ ಜನರಲ್ ಆಫ್ ಮ್ಯಾರೇಜ್ ನಡೆಸುತ್ತದೆ. ಆದರೆ ಈ ಕೊರೊನಾ ಸಾಂಕ್ರಾಮಿಕ ಅವಧಿಯಲ್ಲಿ ಅರ್ಜಿದಾರರು ಆಸ್ಟ್ರೇಲಿಯಾದಿಂದ ಇಲ್ಲಿಗೆ ಬಂದು ಸಹಿ ಮಾಡುವುದು ಅಸಾಧ್ಯವೆಂದು ಕೋರ್ಟ್ ಗಮನಿಸಿದೆ.
ವಿವಾಹದ ರಿಜಿಸ್ಟ್ರಾರ್ ಅಧಿಕಾರಿ ಅಗತ್ಯವಿದ್ದಲ್ಲಿ, ಅರ್ಜಿದಾರರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತುಕತೆ ನಡೆಸಬಹುದಾಗಿದೆ. ಅರ್ಜಿದಾರರ ಡಿಜಿಟಲ್ ಸಹಿಯೊಂದಿಗಿನ ನಕಲನ್ನು ಇ-ಮೇಲ್ ಮೂಲಕ ಅಥವಾ ಕೊರಿಯರ್ ಮೂಲಕ ಪಡೆದುಕೊಳ್ಳಬೇಕು. ಬಳಿಕ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿಗಳು ಅರ್ಜಿದಾರರ ಮದುವೆಯನ್ನು ನೋಂದಾಯಿಸಿ ವಿವಾಹ ಪ್ರಮಾಣಪತ್ರವನ್ನು ಅರ್ಜಿದಾರರ ಪವರ್ ಆಫ್ ಅಟಾರ್ನಿ ಹೊಂದಿರುವವರಿಗೆ ನೀಡಬೇಕು ಎಂದು ತೀರ್ಪಿನಲ್ಲಿ ಹೇಳಿದೆ.
Kerala High Court has permitted a couple residing in Australia to register their marriage under the Kerala Registration of Marriages (Common) via Video Conference.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm