ಬ್ರೇಕಿಂಗ್ ನ್ಯೂಸ್
14-06-21 09:48 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜೂ.14: ದೇಶದಲ್ಲಿ ಪ್ರಯಾಣ ನಿರ್ಬಂಧಗಳ ಕಾರಣದಿಂದಾಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ದಂಪತಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿವಾಹ ನೋಂದಣಿಗೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ.
ಅರ್ಜಿದಾರರಾದ ಥಾಮಸ್ ಕುಟ್ಟಿ ಜೋಸೆಫ್ ಮತ್ತು ಬ್ಲೋಸಮ್ ಥಾಮಸ್ ತಮ್ಮ ವಿವಾಹ ನೋಂದಣಿ ಮಾಡಬೇಕಾದರೆ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರೂ ಹಾಜರಿರಬೇಕು ಎಂದು ಸ್ಥಳೀಯ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿಗಳು ತಿಳಿಸಿದ್ದರು. ಈ ಹಿನ್ನೆಲೆ ಥಾಮಸ್ ಕುಟ್ಟಿ ಜೋಸೆಫ್ ಮತ್ತು ಬ್ಲೋಸಮ್ ಥಾಮಸ್ ಹೈಕೋರ್ಟ್ ಕದ ತಟ್ಟಿದ್ದಾರೆ.
ಅರ್ಜಿದಾರರ ಪರ ವಕೀಲ ಜಾಕೋಬ್ ಪಿ. ಅಲೆಕ್ಸ್ ಪ್ರಕಾರ, ಅರ್ಜಿದಾರರು 1997 ರ ಜೂನ್ 30 ರಂದು ವಿವಾಹವಾಗಿದ್ದಾರೆ. ಪ್ರಸ್ತುತ ದಂಪತಿಗೆ ಮೂವರು ಮಕ್ಕಳಿದ್ದಾರೆ. ತಾತ್ಕಾಲಿಕ ವೀಸಾದ ಮೇಲೆ ಈ ದಂಪತಿ ಇತ್ತೀಚೆಗೆ ಯುಎಇಯಿಂದ ಆಸ್ಟ್ರೇಲಿಯಾಕ್ಕೆ ಹೋಗಿದ್ದಾರೆ. ವಲಸೆ ನಿಯಮದ ಬದಲಾವಣೆಯಿಂದಾಗಿ, ಈ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗಿದೆ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ಜೋಡಿಯು 1997 ರ ಜೂನ್ 30 ರಂದು ವಿವಾಹವಾಗಿದ್ದಾರೆ ಎಂದು ಉಲ್ಲೇಖ ಮಾಡಲಾಗಿದೆ.

ಅರ್ಜಿ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಾಹದ ನೋಂದಣಿಗೆ ಅವಕಾಶವಿದೆ ಎಂದು ತೀರ್ಪು ಹೇಳಿದೆ. ಅಲ್ಲದೆ, ಅರ್ಜಿದಾರರು ಹಾಜರುಪಡಿಸಿದ ಸಾಕ್ಷ್ಯಗಳಿಂದ ಪತಿ, ಪತ್ನಿ ಎಂಬುದು ಸಾಬೀತಾಗಿದೆ. ಮದುವೆಗಳ ನೋಂದಣಿಯನ್ನು ರಿಜಿಸ್ಟ್ರಾರ್ ಜನರಲ್ ಆಫ್ ಮ್ಯಾರೇಜ್ ನಡೆಸುತ್ತದೆ. ಆದರೆ ಈ ಕೊರೊನಾ ಸಾಂಕ್ರಾಮಿಕ ಅವಧಿಯಲ್ಲಿ ಅರ್ಜಿದಾರರು ಆಸ್ಟ್ರೇಲಿಯಾದಿಂದ ಇಲ್ಲಿಗೆ ಬಂದು ಸಹಿ ಮಾಡುವುದು ಅಸಾಧ್ಯವೆಂದು ಕೋರ್ಟ್ ಗಮನಿಸಿದೆ.
ವಿವಾಹದ ರಿಜಿಸ್ಟ್ರಾರ್ ಅಧಿಕಾರಿ ಅಗತ್ಯವಿದ್ದಲ್ಲಿ, ಅರ್ಜಿದಾರರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತುಕತೆ ನಡೆಸಬಹುದಾಗಿದೆ. ಅರ್ಜಿದಾರರ ಡಿಜಿಟಲ್ ಸಹಿಯೊಂದಿಗಿನ ನಕಲನ್ನು ಇ-ಮೇಲ್ ಮೂಲಕ ಅಥವಾ ಕೊರಿಯರ್ ಮೂಲಕ ಪಡೆದುಕೊಳ್ಳಬೇಕು. ಬಳಿಕ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿಗಳು ಅರ್ಜಿದಾರರ ಮದುವೆಯನ್ನು ನೋಂದಾಯಿಸಿ ವಿವಾಹ ಪ್ರಮಾಣಪತ್ರವನ್ನು ಅರ್ಜಿದಾರರ ಪವರ್ ಆಫ್ ಅಟಾರ್ನಿ ಹೊಂದಿರುವವರಿಗೆ ನೀಡಬೇಕು ಎಂದು ತೀರ್ಪಿನಲ್ಲಿ ಹೇಳಿದೆ.
Kerala High Court has permitted a couple residing in Australia to register their marriage under the Kerala Registration of Marriages (Common) via Video Conference.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm