ಬ್ರೇಕಿಂಗ್ ನ್ಯೂಸ್
14-06-21 09:48 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜೂ.14: ದೇಶದಲ್ಲಿ ಪ್ರಯಾಣ ನಿರ್ಬಂಧಗಳ ಕಾರಣದಿಂದಾಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ದಂಪತಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿವಾಹ ನೋಂದಣಿಗೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ.
ಅರ್ಜಿದಾರರಾದ ಥಾಮಸ್ ಕುಟ್ಟಿ ಜೋಸೆಫ್ ಮತ್ತು ಬ್ಲೋಸಮ್ ಥಾಮಸ್ ತಮ್ಮ ವಿವಾಹ ನೋಂದಣಿ ಮಾಡಬೇಕಾದರೆ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರೂ ಹಾಜರಿರಬೇಕು ಎಂದು ಸ್ಥಳೀಯ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿಗಳು ತಿಳಿಸಿದ್ದರು. ಈ ಹಿನ್ನೆಲೆ ಥಾಮಸ್ ಕುಟ್ಟಿ ಜೋಸೆಫ್ ಮತ್ತು ಬ್ಲೋಸಮ್ ಥಾಮಸ್ ಹೈಕೋರ್ಟ್ ಕದ ತಟ್ಟಿದ್ದಾರೆ.
ಅರ್ಜಿದಾರರ ಪರ ವಕೀಲ ಜಾಕೋಬ್ ಪಿ. ಅಲೆಕ್ಸ್ ಪ್ರಕಾರ, ಅರ್ಜಿದಾರರು 1997 ರ ಜೂನ್ 30 ರಂದು ವಿವಾಹವಾಗಿದ್ದಾರೆ. ಪ್ರಸ್ತುತ ದಂಪತಿಗೆ ಮೂವರು ಮಕ್ಕಳಿದ್ದಾರೆ. ತಾತ್ಕಾಲಿಕ ವೀಸಾದ ಮೇಲೆ ಈ ದಂಪತಿ ಇತ್ತೀಚೆಗೆ ಯುಎಇಯಿಂದ ಆಸ್ಟ್ರೇಲಿಯಾಕ್ಕೆ ಹೋಗಿದ್ದಾರೆ. ವಲಸೆ ನಿಯಮದ ಬದಲಾವಣೆಯಿಂದಾಗಿ, ಈ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗಿದೆ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ಜೋಡಿಯು 1997 ರ ಜೂನ್ 30 ರಂದು ವಿವಾಹವಾಗಿದ್ದಾರೆ ಎಂದು ಉಲ್ಲೇಖ ಮಾಡಲಾಗಿದೆ.

ಅರ್ಜಿ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಾಹದ ನೋಂದಣಿಗೆ ಅವಕಾಶವಿದೆ ಎಂದು ತೀರ್ಪು ಹೇಳಿದೆ. ಅಲ್ಲದೆ, ಅರ್ಜಿದಾರರು ಹಾಜರುಪಡಿಸಿದ ಸಾಕ್ಷ್ಯಗಳಿಂದ ಪತಿ, ಪತ್ನಿ ಎಂಬುದು ಸಾಬೀತಾಗಿದೆ. ಮದುವೆಗಳ ನೋಂದಣಿಯನ್ನು ರಿಜಿಸ್ಟ್ರಾರ್ ಜನರಲ್ ಆಫ್ ಮ್ಯಾರೇಜ್ ನಡೆಸುತ್ತದೆ. ಆದರೆ ಈ ಕೊರೊನಾ ಸಾಂಕ್ರಾಮಿಕ ಅವಧಿಯಲ್ಲಿ ಅರ್ಜಿದಾರರು ಆಸ್ಟ್ರೇಲಿಯಾದಿಂದ ಇಲ್ಲಿಗೆ ಬಂದು ಸಹಿ ಮಾಡುವುದು ಅಸಾಧ್ಯವೆಂದು ಕೋರ್ಟ್ ಗಮನಿಸಿದೆ.
ವಿವಾಹದ ರಿಜಿಸ್ಟ್ರಾರ್ ಅಧಿಕಾರಿ ಅಗತ್ಯವಿದ್ದಲ್ಲಿ, ಅರ್ಜಿದಾರರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತುಕತೆ ನಡೆಸಬಹುದಾಗಿದೆ. ಅರ್ಜಿದಾರರ ಡಿಜಿಟಲ್ ಸಹಿಯೊಂದಿಗಿನ ನಕಲನ್ನು ಇ-ಮೇಲ್ ಮೂಲಕ ಅಥವಾ ಕೊರಿಯರ್ ಮೂಲಕ ಪಡೆದುಕೊಳ್ಳಬೇಕು. ಬಳಿಕ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿಗಳು ಅರ್ಜಿದಾರರ ಮದುವೆಯನ್ನು ನೋಂದಾಯಿಸಿ ವಿವಾಹ ಪ್ರಮಾಣಪತ್ರವನ್ನು ಅರ್ಜಿದಾರರ ಪವರ್ ಆಫ್ ಅಟಾರ್ನಿ ಹೊಂದಿರುವವರಿಗೆ ನೀಡಬೇಕು ಎಂದು ತೀರ್ಪಿನಲ್ಲಿ ಹೇಳಿದೆ.
Kerala High Court has permitted a couple residing in Australia to register their marriage under the Kerala Registration of Marriages (Common) via Video Conference.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am