ಬ್ರೇಕಿಂಗ್ ನ್ಯೂಸ್
14-06-21 09:48 pm Headline Karnataka News Network ದೇಶ - ವಿದೇಶ
ತಿರುವನಂತಪುರಂ, ಜೂ.14: ದೇಶದಲ್ಲಿ ಪ್ರಯಾಣ ನಿರ್ಬಂಧಗಳ ಕಾರಣದಿಂದಾಗಿ ಆಸ್ಟ್ರೇಲಿಯಾದಲ್ಲಿ ನೆಲೆಸಿರುವ ದಂಪತಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿವಾಹ ನೋಂದಣಿಗೆ ಕೇರಳ ಹೈಕೋರ್ಟ್ ಅನುಮತಿ ನೀಡಿದೆ.
ಅರ್ಜಿದಾರರಾದ ಥಾಮಸ್ ಕುಟ್ಟಿ ಜೋಸೆಫ್ ಮತ್ತು ಬ್ಲೋಸಮ್ ಥಾಮಸ್ ತಮ್ಮ ವಿವಾಹ ನೋಂದಣಿ ಮಾಡಬೇಕಾದರೆ ರಿಜಿಸ್ಟ್ರಾರ್ ಕಚೇರಿಯಲ್ಲಿ ಇಬ್ಬರೂ ಹಾಜರಿರಬೇಕು ಎಂದು ಸ್ಥಳೀಯ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿಗಳು ತಿಳಿಸಿದ್ದರು. ಈ ಹಿನ್ನೆಲೆ ಥಾಮಸ್ ಕುಟ್ಟಿ ಜೋಸೆಫ್ ಮತ್ತು ಬ್ಲೋಸಮ್ ಥಾಮಸ್ ಹೈಕೋರ್ಟ್ ಕದ ತಟ್ಟಿದ್ದಾರೆ.
ಅರ್ಜಿದಾರರ ಪರ ವಕೀಲ ಜಾಕೋಬ್ ಪಿ. ಅಲೆಕ್ಸ್ ಪ್ರಕಾರ, ಅರ್ಜಿದಾರರು 1997 ರ ಜೂನ್ 30 ರಂದು ವಿವಾಹವಾಗಿದ್ದಾರೆ. ಪ್ರಸ್ತುತ ದಂಪತಿಗೆ ಮೂವರು ಮಕ್ಕಳಿದ್ದಾರೆ. ತಾತ್ಕಾಲಿಕ ವೀಸಾದ ಮೇಲೆ ಈ ದಂಪತಿ ಇತ್ತೀಚೆಗೆ ಯುಎಇಯಿಂದ ಆಸ್ಟ್ರೇಲಿಯಾಕ್ಕೆ ಹೋಗಿದ್ದಾರೆ. ವಲಸೆ ನಿಯಮದ ಬದಲಾವಣೆಯಿಂದಾಗಿ, ಈ ದಂಪತಿಗೆ ವಿವಾಹ ನೋಂದಣಿ ಪ್ರಮಾಣಪತ್ರವನ್ನು ಸಲ್ಲಿಸಬೇಕಾಗಿದೆ ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಈ ಜೋಡಿಯು 1997 ರ ಜೂನ್ 30 ರಂದು ವಿವಾಹವಾಗಿದ್ದಾರೆ ಎಂದು ಉಲ್ಲೇಖ ಮಾಡಲಾಗಿದೆ.

ಅರ್ಜಿ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಾಹದ ನೋಂದಣಿಗೆ ಅವಕಾಶವಿದೆ ಎಂದು ತೀರ್ಪು ಹೇಳಿದೆ. ಅಲ್ಲದೆ, ಅರ್ಜಿದಾರರು ಹಾಜರುಪಡಿಸಿದ ಸಾಕ್ಷ್ಯಗಳಿಂದ ಪತಿ, ಪತ್ನಿ ಎಂಬುದು ಸಾಬೀತಾಗಿದೆ. ಮದುವೆಗಳ ನೋಂದಣಿಯನ್ನು ರಿಜಿಸ್ಟ್ರಾರ್ ಜನರಲ್ ಆಫ್ ಮ್ಯಾರೇಜ್ ನಡೆಸುತ್ತದೆ. ಆದರೆ ಈ ಕೊರೊನಾ ಸಾಂಕ್ರಾಮಿಕ ಅವಧಿಯಲ್ಲಿ ಅರ್ಜಿದಾರರು ಆಸ್ಟ್ರೇಲಿಯಾದಿಂದ ಇಲ್ಲಿಗೆ ಬಂದು ಸಹಿ ಮಾಡುವುದು ಅಸಾಧ್ಯವೆಂದು ಕೋರ್ಟ್ ಗಮನಿಸಿದೆ.
ವಿವಾಹದ ರಿಜಿಸ್ಟ್ರಾರ್ ಅಧಿಕಾರಿ ಅಗತ್ಯವಿದ್ದಲ್ಲಿ, ಅರ್ಜಿದಾರರೊಂದಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಮಾತುಕತೆ ನಡೆಸಬಹುದಾಗಿದೆ. ಅರ್ಜಿದಾರರ ಡಿಜಿಟಲ್ ಸಹಿಯೊಂದಿಗಿನ ನಕಲನ್ನು ಇ-ಮೇಲ್ ಮೂಲಕ ಅಥವಾ ಕೊರಿಯರ್ ಮೂಲಕ ಪಡೆದುಕೊಳ್ಳಬೇಕು. ಬಳಿಕ ರಿಜಿಸ್ಟ್ರಾರ್ ಕಚೇರಿ ಸಿಬ್ಬಂದಿಗಳು ಅರ್ಜಿದಾರರ ಮದುವೆಯನ್ನು ನೋಂದಾಯಿಸಿ ವಿವಾಹ ಪ್ರಮಾಣಪತ್ರವನ್ನು ಅರ್ಜಿದಾರರ ಪವರ್ ಆಫ್ ಅಟಾರ್ನಿ ಹೊಂದಿರುವವರಿಗೆ ನೀಡಬೇಕು ಎಂದು ತೀರ್ಪಿನಲ್ಲಿ ಹೇಳಿದೆ.
Kerala High Court has permitted a couple residing in Australia to register their marriage under the Kerala Registration of Marriages (Common) via Video Conference.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm