ಬ್ರೇಕಿಂಗ್ ನ್ಯೂಸ್
31-08-20 10:46 am Headline Karnataka News Network ದೇಶ - ವಿದೇಶ
ಮುಂಬೈ, ಆಗಸ್ಟ್ 31: ಗಾಯನ ಲೋಕದ ಲಿವಿಂಗ್ ಲೆಜೆಂಡ್ ಲತಾ ಮಂಗೇಶ್ಕರ್ ವಾಸ ಇರುವ ಪ್ರಭುಕುಂಜ್ ಅಪಾರ್ಟ್ಮೆಂಟ್ ಅನ್ನು ಮುಂಬೈ ಮಹಾನಗರ ಪಾಲಿಕೆ ಸೀಲ್ ಡೌನ್ ಮಾಡಿದೆ. ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎನ್ನಲಾಗಿದೆ.
ಇದೇ ವೇಳೆ ಲತಾ ಮಂಗೇಶ್ಕರ್ ಕುಟುಂಬದಿಂದ ಪತ್ರಿಕಾ ಹೇಳಿಕೆ ನೀಡಲಾಗಿದ್ದು ಮಂಗೇಶ್ಕರ್ ಕುಟುಂಬಕ್ಕೇನೂ ತೊಂದರೆಯಾಗಿಲ್ಲ. ಸುರಕ್ಷಿತರಾಗಿದ್ದೇವೆ. ನಮ್ಮ ಕುಟುಂಬಸ್ಥರ ಆರೋಗ್ಯದ ಬಗ್ಗೆ ಇಲ್ಲಸಲ್ಲದ ಮಾಹಿತಿಗಳನ್ನು ಹರಿಯ ಬಿಡಬೇಡಿ. ನಮ್ಮ ಬಿಲ್ಡಿಂಗ್ ಸೊಸೈಟಿಯವರು ಇಲ್ಲಿ ವಾಸ ಮಾಡುವ ಎಲ್ಲರ ಆರೋಗ್ಯದ ಬಗ್ಗೆ ಕಾಳಜಿ ಹೊಂದಿದ್ದಾರೆ. ಅದರಲ್ಲೂ ಹಿರಿಯ ಜೀವಗಳ ಆರೋಗ್ಯದ ಬಗ್ಗೆ ನಿಗಾ ವಹಿಸಿದ್ದಾರೆ. ದೇವರ ದಯೆ ಮತ್ತು ಅಭಿಮಾನಿಗಳ ಹಾರೈಕೆಯಿಂದ ಮಂಗೇಶ್ಕರ್ ಕುಟುಂಬ ಕ್ಷೇಮವಾಗಿದೆ ಎಂದು ತಿಳಿಸಿದ್ದಾರೆ.

ಮಹಾನಗರ ಪಾಲಿಕೆಯ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ತೆಗೆದುಕೊಂಡಿದ್ದಾರೆ. ವೈರಸ್ ಹರಡದಂತಿರಲು ಇಂಥ ಎಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ನಾವು ಗಣೇಶನ ಹಬ್ಬವನ್ನೂ ಅತ್ಯಂತ ಸರಳವಾಗಿ ಆಚರಿಸಿದ್ದೇವೆ ಎಂದು ಲತಾ ಮಂಗೇಶ್ಕರ್ ಕುಟುಂಬ ಹೇಳಿಕೊಂಡಿದೆ.
ಕಳೆದ ಜುಲೈನಲ್ಲಿ ಅಮಿತಾಭ್ ಬಚ್ಚನ್ ಕುಟುಂಬಕ್ಕೆ ಕೊರೊನಾ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಬಚ್ಚನ್ ಕುಟುಂಬಕ್ಕೆ ಸೇರಿದ ಬಂಗಲೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ಆ ಬಳಿಕ ಹಿರಿಯ ನಟಿ ರೇಖಾ ವಾಸ ಇರುವ ಬಂಗಲೆಯ ಸೆಕ್ಯುರಿಟಿ ಗಾರ್ಡ್ ಗೆ ಸೋಂಕು ಬಂದಿದ್ದರಿಂದ ಬಂಗಲೆ ಸೀಲ್ ಆಗಿತ್ತು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm