ಬ್ರೇಕಿಂಗ್ ನ್ಯೂಸ್
16-06-21 12:37 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 16: ಎರಡು ವರ್ಷಗಳ ಬಳಿಕ ಕೇಂದ್ರ ಸಂಪುಟ ವಿಸ್ತರಣೆ ಪಕ್ಕಾ ಆಗಿದೆ. ಇದಕ್ಕಾಗಿ ಕಳೆದ ಐದು ದಿನಗಳಿಂದಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಕೇಂದ್ರದ ಸಂಪುಟ ಸಚಿವರು ಹಾಗೂ ಬಿಜೆಪಿ ವರಿಷ್ಠರೊಂದಿಗೆ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ.
ಈಗಾಗ್ಲೇ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳ ಬಿಜೆಪಿ ಸಂಸದರೊಂದಿಗೆ ಅಮಿತ್ ಷಾ ಸಭೆ ನಡೆಸಿದ್ದಾರೆ. ಸುಮಾರು 30 ಸಂಸದರು ಸಭೆಯಲ್ಲಿ ಪಾಲ್ಗೊಂಡಿದ್ದರೆಂದು ತಿಳಿದುಬಂದಿದೆ. ಪ್ರಸ್ತುತ ಕೇಂದ್ರ ಸಂಪುಟದಲ್ಲಿ 28 ಸ್ಥಾನಗಳು ಖಾಲಿ ಇದ್ದು, ಸಂಸದರು ತಮ್ಮ ಕ್ಷೇತ್ರಗಳಲ್ಲಿ ಕೋವಿಡ್ ನಿರ್ವಹಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ತೋರಿದ ದಕ್ಷತೆ ಆಧರಿಸಿ ಅಂಕಗಳನ್ನು ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕಳೆದ ಎರಡು ವರ್ಷಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ರಾಜ್ಯಗಳಿಂದ ಕೇಂದ್ರ ಸಂಪುಟದಲ್ಲಿ ಪ್ರಾತಿನಿಧ್ಯಕ್ಕೆ ಒತ್ತಡ ಹೆಚ್ಚಿದ್ದರಿಂದ ಸಂಪುಟ ವಿಸ್ತರಣೆಗೆ ಮೋದಿ ಕೈ ಹಾಕಿದ್ದಾರೆ ಎಂದು ಹೇಳಲಾಗಿದೆ. ಬಿಹಾರ ಸಿಎಂ ನಿತೀಶ್ ನೇತೃತ್ವದ ಜೆಡಿಯು ಕೇಂದ್ರ ಸಂಪುಟದಲ್ಲಿ ಸ್ಥಾನಕ್ಕಾಗಿ ಮೊದಲಿನಿಂದಲೂ ಬೇಡಿಕೆ ಇಟ್ಟಿದೆ.


ಎಲ್ಜೆಪಿ ಪಕ್ಷದಿಂದಲೂ ಕೇಂದ್ರ ಸಂಪುಟ ಸೇರಲು ಬೇಡಿಕೆಯಿದೆ. ಇತ್ತ ಮಧ್ಯಪ್ರದೇಶದಲ್ಲಿ ಬೆಂಬಲಿಗರೊಂದಿಗೆ ಬಿಜೆಪಿಗೆ ಜಿಗಿದ ಜ್ಯೋತಿರಾದಿತ್ಯ ಸಿಂಧಿಯಾಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ಗೂ ಸಂಪುಟ ಸ್ಥಾನ ಸಿಗುವ ಸಾಧ್ಯತೆಯಿದೆ. ಈ ಮಧ್ಯೆ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸಂಪುಟದ ಪುನಾರಚನೆಗೂ ಭಾರಿ ಲೆಕ್ಕಾಚಾರಗಳು ನಡೆಯುತ್ತಿವೆ. ಇತ್ತೀಚೆಗೆ ಪ್ರಧಾನಿ ಮೋದಿ ಜತೆ ಸಿಎಂ ಆದಿತ್ಯನಾಥ್ ಖುದ್ದು ಭೇಟಿ ಬಳಿಕ ಈ ಪ್ರಕ್ರಿಯೆ ಮತ್ತಷ್ಟು ವೇಗ ಪಡೆದಿದೆ.
Amit Shah had met MPs from Uttar Pradesh, Maharashtra, Rajasthan, Gujarat, and some other states on Saturday and Sunday at his residence.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am