ಬ್ರೇಕಿಂಗ್ ನ್ಯೂಸ್
16-06-21 12:37 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 16: ಎರಡು ವರ್ಷಗಳ ಬಳಿಕ ಕೇಂದ್ರ ಸಂಪುಟ ವಿಸ್ತರಣೆ ಪಕ್ಕಾ ಆಗಿದೆ. ಇದಕ್ಕಾಗಿ ಕಳೆದ ಐದು ದಿನಗಳಿಂದಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಕೇಂದ್ರದ ಸಂಪುಟ ಸಚಿವರು ಹಾಗೂ ಬಿಜೆಪಿ ವರಿಷ್ಠರೊಂದಿಗೆ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ.
ಈಗಾಗ್ಲೇ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳ ಬಿಜೆಪಿ ಸಂಸದರೊಂದಿಗೆ ಅಮಿತ್ ಷಾ ಸಭೆ ನಡೆಸಿದ್ದಾರೆ. ಸುಮಾರು 30 ಸಂಸದರು ಸಭೆಯಲ್ಲಿ ಪಾಲ್ಗೊಂಡಿದ್ದರೆಂದು ತಿಳಿದುಬಂದಿದೆ. ಪ್ರಸ್ತುತ ಕೇಂದ್ರ ಸಂಪುಟದಲ್ಲಿ 28 ಸ್ಥಾನಗಳು ಖಾಲಿ ಇದ್ದು, ಸಂಸದರು ತಮ್ಮ ಕ್ಷೇತ್ರಗಳಲ್ಲಿ ಕೋವಿಡ್ ನಿರ್ವಹಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ತೋರಿದ ದಕ್ಷತೆ ಆಧರಿಸಿ ಅಂಕಗಳನ್ನು ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕಳೆದ ಎರಡು ವರ್ಷಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ರಾಜ್ಯಗಳಿಂದ ಕೇಂದ್ರ ಸಂಪುಟದಲ್ಲಿ ಪ್ರಾತಿನಿಧ್ಯಕ್ಕೆ ಒತ್ತಡ ಹೆಚ್ಚಿದ್ದರಿಂದ ಸಂಪುಟ ವಿಸ್ತರಣೆಗೆ ಮೋದಿ ಕೈ ಹಾಕಿದ್ದಾರೆ ಎಂದು ಹೇಳಲಾಗಿದೆ. ಬಿಹಾರ ಸಿಎಂ ನಿತೀಶ್ ನೇತೃತ್ವದ ಜೆಡಿಯು ಕೇಂದ್ರ ಸಂಪುಟದಲ್ಲಿ ಸ್ಥಾನಕ್ಕಾಗಿ ಮೊದಲಿನಿಂದಲೂ ಬೇಡಿಕೆ ಇಟ್ಟಿದೆ.


ಎಲ್ಜೆಪಿ ಪಕ್ಷದಿಂದಲೂ ಕೇಂದ್ರ ಸಂಪುಟ ಸೇರಲು ಬೇಡಿಕೆಯಿದೆ. ಇತ್ತ ಮಧ್ಯಪ್ರದೇಶದಲ್ಲಿ ಬೆಂಬಲಿಗರೊಂದಿಗೆ ಬಿಜೆಪಿಗೆ ಜಿಗಿದ ಜ್ಯೋತಿರಾದಿತ್ಯ ಸಿಂಧಿಯಾಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ಗೂ ಸಂಪುಟ ಸ್ಥಾನ ಸಿಗುವ ಸಾಧ್ಯತೆಯಿದೆ. ಈ ಮಧ್ಯೆ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸಂಪುಟದ ಪುನಾರಚನೆಗೂ ಭಾರಿ ಲೆಕ್ಕಾಚಾರಗಳು ನಡೆಯುತ್ತಿವೆ. ಇತ್ತೀಚೆಗೆ ಪ್ರಧಾನಿ ಮೋದಿ ಜತೆ ಸಿಎಂ ಆದಿತ್ಯನಾಥ್ ಖುದ್ದು ಭೇಟಿ ಬಳಿಕ ಈ ಪ್ರಕ್ರಿಯೆ ಮತ್ತಷ್ಟು ವೇಗ ಪಡೆದಿದೆ.
Amit Shah had met MPs from Uttar Pradesh, Maharashtra, Rajasthan, Gujarat, and some other states on Saturday and Sunday at his residence.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm