ಬ್ರೇಕಿಂಗ್ ನ್ಯೂಸ್
16-06-21 12:37 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 16: ಎರಡು ವರ್ಷಗಳ ಬಳಿಕ ಕೇಂದ್ರ ಸಂಪುಟ ವಿಸ್ತರಣೆ ಪಕ್ಕಾ ಆಗಿದೆ. ಇದಕ್ಕಾಗಿ ಕಳೆದ ಐದು ದಿನಗಳಿಂದಲೂ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಷಾ ಕೇಂದ್ರದ ಸಂಪುಟ ಸಚಿವರು ಹಾಗೂ ಬಿಜೆಪಿ ವರಿಷ್ಠರೊಂದಿಗೆ ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದ್ದಾರೆ.
ಈಗಾಗ್ಲೇ ಉತ್ತರ ಪ್ರದೇಶ, ಮಹಾರಾಷ್ಟ್ರ, ರಾಜಸ್ಥಾನ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳ ಬಿಜೆಪಿ ಸಂಸದರೊಂದಿಗೆ ಅಮಿತ್ ಷಾ ಸಭೆ ನಡೆಸಿದ್ದಾರೆ. ಸುಮಾರು 30 ಸಂಸದರು ಸಭೆಯಲ್ಲಿ ಪಾಲ್ಗೊಂಡಿದ್ದರೆಂದು ತಿಳಿದುಬಂದಿದೆ. ಪ್ರಸ್ತುತ ಕೇಂದ್ರ ಸಂಪುಟದಲ್ಲಿ 28 ಸ್ಥಾನಗಳು ಖಾಲಿ ಇದ್ದು, ಸಂಸದರು ತಮ್ಮ ಕ್ಷೇತ್ರಗಳಲ್ಲಿ ಕೋವಿಡ್ ನಿರ್ವಹಣೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಲ್ಲಿ ತೋರಿದ ದಕ್ಷತೆ ಆಧರಿಸಿ ಅಂಕಗಳನ್ನು ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಕಳೆದ ಎರಡು ವರ್ಷಗಳಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ರಾಜ್ಯಗಳಿಂದ ಕೇಂದ್ರ ಸಂಪುಟದಲ್ಲಿ ಪ್ರಾತಿನಿಧ್ಯಕ್ಕೆ ಒತ್ತಡ ಹೆಚ್ಚಿದ್ದರಿಂದ ಸಂಪುಟ ವಿಸ್ತರಣೆಗೆ ಮೋದಿ ಕೈ ಹಾಕಿದ್ದಾರೆ ಎಂದು ಹೇಳಲಾಗಿದೆ. ಬಿಹಾರ ಸಿಎಂ ನಿತೀಶ್ ನೇತೃತ್ವದ ಜೆಡಿಯು ಕೇಂದ್ರ ಸಂಪುಟದಲ್ಲಿ ಸ್ಥಾನಕ್ಕಾಗಿ ಮೊದಲಿನಿಂದಲೂ ಬೇಡಿಕೆ ಇಟ್ಟಿದೆ.


ಎಲ್ಜೆಪಿ ಪಕ್ಷದಿಂದಲೂ ಕೇಂದ್ರ ಸಂಪುಟ ಸೇರಲು ಬೇಡಿಕೆಯಿದೆ. ಇತ್ತ ಮಧ್ಯಪ್ರದೇಶದಲ್ಲಿ ಬೆಂಬಲಿಗರೊಂದಿಗೆ ಬಿಜೆಪಿಗೆ ಜಿಗಿದ ಜ್ಯೋತಿರಾದಿತ್ಯ ಸಿಂಧಿಯಾಗೆ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ಗೂ ಸಂಪುಟ ಸ್ಥಾನ ಸಿಗುವ ಸಾಧ್ಯತೆಯಿದೆ. ಈ ಮಧ್ಯೆ, ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸಂಪುಟದ ಪುನಾರಚನೆಗೂ ಭಾರಿ ಲೆಕ್ಕಾಚಾರಗಳು ನಡೆಯುತ್ತಿವೆ. ಇತ್ತೀಚೆಗೆ ಪ್ರಧಾನಿ ಮೋದಿ ಜತೆ ಸಿಎಂ ಆದಿತ್ಯನಾಥ್ ಖುದ್ದು ಭೇಟಿ ಬಳಿಕ ಈ ಪ್ರಕ್ರಿಯೆ ಮತ್ತಷ್ಟು ವೇಗ ಪಡೆದಿದೆ.
Amit Shah had met MPs from Uttar Pradesh, Maharashtra, Rajasthan, Gujarat, and some other states on Saturday and Sunday at his residence.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm