ಬ್ರೇಕಿಂಗ್ ನ್ಯೂಸ್
31-08-20 12:36 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಆಗಸ್ಟ್ 31: ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಎರಡೇ ಸ್ಥಾನದಲ್ಲಿರುವ ಭಾರತದಲ್ಲಿ ಕೊರೋನಾ ಸೋಂಕು ದಾಖಲೆಯ ಪ್ರಮಾಣದಲ್ಲಿ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ 80 ಸಾವಿರಕ್ಕೂ ಅಧಿಕ ಕೋವಿಡ್-19 ಪ್ರಕರಣಗಳು ರವಿವಾರ ವರದಿಯಾಗಿದ್ದು, ವಿಶ್ವದ ಯಾವುದೇ ದೇಶದಲ್ಲೂ ಒಂದೇ ದಿನ ಕೊರೊನದ ಇಷ್ಟೊಂದು ಪ್ರಕರಣಗಳು ಪತ್ತೆಯಾದ ನಿದರ್ಶನ ಇಲ್ಲ.
ಅಲ್ಪ ಇಳಿಕೆಯ ಬಳಿಕ ಪ್ರಗತಿ ದರ ಹಾಗೂ ಸೋಂಕಿತರ ಪೈಕಿ ಸಾವಿಗೀಡಾದವರ ದರ ಹೆಚ್ಚಿದೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ದರ ದುಪ್ಪಟ್ಟಾಗಿದೆ. ಶನಿವಾರ ದೇಶಾದ್ಯಂತ 80,0092 ಪ್ರಕರಣಗಳು ದೃಢಪಟ್ಟಿದ್ದು, ವಾರಾಂತ್ಯದಲ್ಲಿ ಕಡಿಮೆ ತಪಾಸಣೆ ನಡೆಯುವ ಹಿನ್ನೆಲೆಯಲ್ಲಿ ಕಡಿಮೆ ಪ್ರಕರಣಗಳು ವರದಿಯಾಗುತ್ತಿದ್ದವು. ಇದುವರೆಗೆ ವಾರಾಂತ್ಯದಲ್ಲಿ ಗರಿಷ್ಠ ಅಂದರೆ 63,851 ಪ್ರಕರಣಗಳು ಆಗಸ್ಟ್ 9ರಂದು ವರದಿಯಾಗಿದ್ದವು.

ಆತಂಕಕಾರಿ ವಿಚಾರವೆಂದರೆ ತಿಂಗಳ ಮೊದಲ ವಾರಗಳಲ್ಲಿ ಹೊಸ ಪ್ರಕರಣಗಳು ಹಾಗೂ ಪ್ರಗತಿ ದರ ಇಳಿಕೆ ಕಂಡುಬಂದಿದ್ದರೂ, ಕೊನೆಯ ವಾರ ಏರಿಕೆಯಾಗಿದೆ. ದೇಶದಲ್ಲಿ ಸತತ ಐದು ದಿನಗಳಿಂದ 76 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿದ್ದು, ವಾರದಲ್ಲಿ ಪ್ರಗತಿ ದರ 13.1% ಇದೆ. ಹಿಂದಿನ ವಾರ ದಾಖಲಾಗಿದ್ದ 4.7%ಕ್ಕೆ ಹೋಲಿಸಿದರೆ ಇದು ಮೂರು ಪಟ್ಟು. ಅದಕ್ಕಿಂತ ಹಿಂದಿನ ವಾರ 5.9% ಹಾಗೂ ಆಗಸ್ಟ್ ಮೊದಲ ವಾರ 10.9% ಪ್ರಗತಿದರ ದಾಖಲಾಗಿತ್ತು. ಅಂತೆಯೇ ಸತತ ನಾಲ್ಕನೇ ದಿನ ಸಾವಿರಕ್ಕೂ ಅಧಿಕ ಸಾವು ಸಂಭವಿಸಿದೆ. ಈ ವಾರ ಸಾವಿನ ಏರಿಕೆ ದರ ಶೇಕಡ 3.9ರಷ್ಟಿದ್ದು, ಹಿಂದಿನ ವಾರ ದಾಖಲಾದ ಶೇಕಡ 1.7ಕ್ಕೆ ಹೋಲಿಸಿದರೆ ಇದು ದ್ವಿಗುಣಗೊಂಡಿದೆ.
ಮಹಾರಾಷ್ಟ್ರ ಸತತ ಎರಡನೇ ದಿನ 16 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಕಂಡಿದೆ. 16,408 ಮಂದಿಗೆ ಶನಿವಾರ ಸೋಂಕು ದೃಢಪಟ್ಟಿದ್ದು, ಉಳಿದಂತೆ ಉತ್ತರ ಪ್ರದೇಶ (6,233), ರಾಜಸ್ಥಾನ (1,450), ಮಧ್ಯಪ್ರದೇಶ (1,558), ಛತ್ತೀಸ್ಗಢ (1,471) ಮತ್ತು ಜಮ್ಮು ಮತ್ತು ಕಾಶ್ಮೀರ (786) ಹೀಗೆ ಐದು ರಾಜ್ಯಗಳು ಶನಿವಾರ ಇದುವರೆಗಿನ ಗರಿಷ್ಠ ಪ್ರಕರಣಗಳನ್ನು ದಾಖಲಿಸಿವೆ. ದೇಶದಲ್ಲಿ ರವಿವಾರ 970 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಬಲಿಯಾದವರ ಸಂಖ್ಯೆ 64,550ಕ್ಕೇರಿದೆ.
04-04-26 07:33 pm
HK News Staffer
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
04-04-26 10:53 pm
HK News Staffer
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
04-04-26 05:42 pm
HK News Staffer
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am
ಮೂರನೇ ಮಗುವೂ ಹೆಣ್ಣಾಗುತ್ತದೆಂದು ಗರ್ಭಿಣಿ ಪತ್ನಿ, ಇ...
03-04-26 11:00 pm