ಬ್ರೇಕಿಂಗ್ ನ್ಯೂಸ್
31-08-20 12:36 pm Headline Karnataka News Network ದೇಶ - ವಿದೇಶ
ಹೊಸದಿಲ್ಲಿ, ಆಗಸ್ಟ್ 31: ಜನಸಂಖ್ಯೆಯಲ್ಲಿ ವಿಶ್ವದಲ್ಲೇ ಎರಡೇ ಸ್ಥಾನದಲ್ಲಿರುವ ಭಾರತದಲ್ಲಿ ಕೊರೋನಾ ಸೋಂಕು ದಾಖಲೆಯ ಪ್ರಮಾಣದಲ್ಲಿ ಏರುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ದೇಶದಲ್ಲಿ ಇದೇ ಮೊದಲ ಬಾರಿಗೆ 80 ಸಾವಿರಕ್ಕೂ ಅಧಿಕ ಕೋವಿಡ್-19 ಪ್ರಕರಣಗಳು ರವಿವಾರ ವರದಿಯಾಗಿದ್ದು, ವಿಶ್ವದ ಯಾವುದೇ ದೇಶದಲ್ಲೂ ಒಂದೇ ದಿನ ಕೊರೊನದ ಇಷ್ಟೊಂದು ಪ್ರಕರಣಗಳು ಪತ್ತೆಯಾದ ನಿದರ್ಶನ ಇಲ್ಲ.
ಅಲ್ಪ ಇಳಿಕೆಯ ಬಳಿಕ ಪ್ರಗತಿ ದರ ಹಾಗೂ ಸೋಂಕಿತರ ಪೈಕಿ ಸಾವಿಗೀಡಾದವರ ದರ ಹೆಚ್ಚಿದೆ. ಹಿಂದಿನ ವಾರಕ್ಕೆ ಹೋಲಿಸಿದರೆ ಈ ದರ ದುಪ್ಪಟ್ಟಾಗಿದೆ. ಶನಿವಾರ ದೇಶಾದ್ಯಂತ 80,0092 ಪ್ರಕರಣಗಳು ದೃಢಪಟ್ಟಿದ್ದು, ವಾರಾಂತ್ಯದಲ್ಲಿ ಕಡಿಮೆ ತಪಾಸಣೆ ನಡೆಯುವ ಹಿನ್ನೆಲೆಯಲ್ಲಿ ಕಡಿಮೆ ಪ್ರಕರಣಗಳು ವರದಿಯಾಗುತ್ತಿದ್ದವು. ಇದುವರೆಗೆ ವಾರಾಂತ್ಯದಲ್ಲಿ ಗರಿಷ್ಠ ಅಂದರೆ 63,851 ಪ್ರಕರಣಗಳು ಆಗಸ್ಟ್ 9ರಂದು ವರದಿಯಾಗಿದ್ದವು.

ಆತಂಕಕಾರಿ ವಿಚಾರವೆಂದರೆ ತಿಂಗಳ ಮೊದಲ ವಾರಗಳಲ್ಲಿ ಹೊಸ ಪ್ರಕರಣಗಳು ಹಾಗೂ ಪ್ರಗತಿ ದರ ಇಳಿಕೆ ಕಂಡುಬಂದಿದ್ದರೂ, ಕೊನೆಯ ವಾರ ಏರಿಕೆಯಾಗಿದೆ. ದೇಶದಲ್ಲಿ ಸತತ ಐದು ದಿನಗಳಿಂದ 76 ಸಾವಿರಕ್ಕೂ ಅಧಿಕ ಪ್ರಕರಣಗಳು ವರದಿಯಾಗುತ್ತಿದ್ದು, ವಾರದಲ್ಲಿ ಪ್ರಗತಿ ದರ 13.1% ಇದೆ. ಹಿಂದಿನ ವಾರ ದಾಖಲಾಗಿದ್ದ 4.7%ಕ್ಕೆ ಹೋಲಿಸಿದರೆ ಇದು ಮೂರು ಪಟ್ಟು. ಅದಕ್ಕಿಂತ ಹಿಂದಿನ ವಾರ 5.9% ಹಾಗೂ ಆಗಸ್ಟ್ ಮೊದಲ ವಾರ 10.9% ಪ್ರಗತಿದರ ದಾಖಲಾಗಿತ್ತು. ಅಂತೆಯೇ ಸತತ ನಾಲ್ಕನೇ ದಿನ ಸಾವಿರಕ್ಕೂ ಅಧಿಕ ಸಾವು ಸಂಭವಿಸಿದೆ. ಈ ವಾರ ಸಾವಿನ ಏರಿಕೆ ದರ ಶೇಕಡ 3.9ರಷ್ಟಿದ್ದು, ಹಿಂದಿನ ವಾರ ದಾಖಲಾದ ಶೇಕಡ 1.7ಕ್ಕೆ ಹೋಲಿಸಿದರೆ ಇದು ದ್ವಿಗುಣಗೊಂಡಿದೆ.
ಮಹಾರಾಷ್ಟ್ರ ಸತತ ಎರಡನೇ ದಿನ 16 ಸಾವಿರಕ್ಕೂ ಅಧಿಕ ಪ್ರಕರಣಗಳನ್ನು ಕಂಡಿದೆ. 16,408 ಮಂದಿಗೆ ಶನಿವಾರ ಸೋಂಕು ದೃಢಪಟ್ಟಿದ್ದು, ಉಳಿದಂತೆ ಉತ್ತರ ಪ್ರದೇಶ (6,233), ರಾಜಸ್ಥಾನ (1,450), ಮಧ್ಯಪ್ರದೇಶ (1,558), ಛತ್ತೀಸ್ಗಢ (1,471) ಮತ್ತು ಜಮ್ಮು ಮತ್ತು ಕಾಶ್ಮೀರ (786) ಹೀಗೆ ಐದು ರಾಜ್ಯಗಳು ಶನಿವಾರ ಇದುವರೆಗಿನ ಗರಿಷ್ಠ ಪ್ರಕರಣಗಳನ್ನು ದಾಖಲಿಸಿವೆ. ದೇಶದಲ್ಲಿ ರವಿವಾರ 970 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು ಬಲಿಯಾದವರ ಸಂಖ್ಯೆ 64,550ಕ್ಕೇರಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm