ಬ್ರೇಕಿಂಗ್ ನ್ಯೂಸ್
17-06-21 04:47 pm Headline Karnataka News Network ದೇಶ - ವಿದೇಶ
Photo credits : Timesofindia
ಬಹ್ರೇನ್, ಜೂನ್ 17: ಬಹ್ರೇನ್ ದೇಶದಲ್ಲಿ ಕೋವಿಡ್ ನಿಯಮಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ಬಿಹಾರ ಮೂಲದ ವ್ಯಕ್ತಿಗೆ ಮೂರು ವರ್ಷಗಳ ಜೈಲು ಶಿಕ್ಷೆ ಮತ್ತು ಒಂಬತ್ತು ಲಕ್ಷ ದಂಡ ವಿಧಿಸಲಾಗಿದೆ. ಈ ಬಗ್ಗೆ ಹೈದರಾಬಾದ್ ಮೂಲದ ವ್ಯಕ್ತಿಯೊಬ್ಬರು ವಿದೇಶಾಂಗ ಸಚಿವಾಲಯವನ್ನು ಸಂಪರ್ಕಿಸಿದ್ದಾರೆ.
ಬಿಹಾರ ಮೂಲದ ಮೊಹಮ್ಮದ್ ಖಾಲಿದ್ ಎಂಬಾತನಿಗೆ ಬಹ್ರೇನ್ನಲ್ಲಿ ಕೋವಿಡ್ -19 ರೂಲ್ಸ್ ಗಳನ್ನು ಉಲ್ಲಂಘಿಸಿದ್ದಕ್ಕಾಗಿ ಜೈಲು ಶಿಕ್ಷೆ ಮತ್ತು 9 ಲಕ್ಷ ರೂ. ದಂಡವನ್ನು ಅಲ್ಲಿನ ಸರಕಾರ ವಿಧಿಸಿದೆ.

ಆದರೆ, ಖಲೀದ್ಗೆ ಕ್ಷುಲ್ಲಕ ವಿಚಾರಕ್ಕೆ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಆರೋಪಿಸಿ ಮೊಹಮ್ಮದ್ ಖಾಲಿದ್ ಕುಟುಂಬ ಈಗ ನೆರವು ಕೇಳಿ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರನ್ನು ಸಂಪರ್ಕಿಸಿದೆ. ಮೊಹಮ್ಮದ್ ಖಾಲಿದ್ ಎಂಟು ವರ್ಷಗಳಿಂದ ಬಹ್ರೇನ್ನಲ್ಲಿ ಕೆಲಸ ಮಾಡುತ್ತಿದ್ದಾರೆ. ಮೇ 18 ರಂದು ಕೋವಿಡ್ ಪಾಸಿಟಿವ್ ಆದ ನಂತರ 15 ದಿನಗಳ ಕಾಲ ಅವರನ್ನು ಮನೆಯಲ್ಲಿ ಕ್ವಾರಂಟೈನ್ ಇರಲು ಸೂಚಿಸಲಾಗಿತ್ತು. ಕಂಪನಿಯಿಂದ ಒದಗಿಸಿದ ವಸತಿ ಸೌಕರ್ಯದಲ್ಲಿ 17 ದಿನಗಳ ಕ್ವಾರಂಟೈನ್ ಪೂರ್ಣಗೊಳಿಸಿದ ಬಳಿಕ ಖಾಲಿದ್, ಆಹಾರ ಸಾಮಗ್ರಿ ಖರೀದಿಸಲು ಹೊರಗೆ ತೆರಳಿದ್ದರು. ಈ ವೇಳೆ ಸ್ಥಳೀಯರೊಬ್ಬರು ಗುರುತಿಸಿ ಖಾಲಿದ್ ವಿರುದ್ಧ ದೂರು ನೀಡಿದ್ದರು. ಅಲ್ಲದೆ, ಹೊರಗಡೆ ತಿರುಗಾಡಿದ ಬಗ್ಗೆ ಜಾಲತಾಣದಲ್ಲಿ ವಿಡಿಯೋ ಪ್ರಸಾರ ಮಾಡಲಾಗಿತ್ತು. ಬಳಿಕ ಅಲ್ಲಿನ ಪೊಲೀಸರು ಖಾಲಿದ್ನನ್ನು ಬಂಧಿಸಿದ್ದರು ಎಂದು ಹೈದರಾಬಾದ್ ಮೂಲದ ಖಾಲಿದ್ ಸೋದರ ಹುಸೇನ್ ಅಹ್ಮದ್ ಹೇಳಿದ್ದಾರೆ.
ಸ್ಥಳೀಯ ಪೊಲೀಸರು ಬಳಿಕ ಆತನನ್ನು ಮತ್ತೆ ಕೋವಿಡ್ ಪರೀಕ್ಷೆಗೆ ಒಳಪಡಿಸಿದ್ದು ನೆಗೆಟಿವ್ ಬಂದಿತ್ತು. ಆದರೂ, ಅವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಿ 5,000 ಬಹ್ರೇನ್ ದಿನಾರ್ ದಂಡದೊಂದಿಗೆ ಮೂರು ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ ಎಂದು ಹುಸೇನ್ ಅಹ್ಮದ್ ವಿದೇಶಾಂಗ ಇಲಾಖೆಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
A youth from Bihar, working in Bahrain has been sentenced to three years in jail for not following the COVID-19 rules. Along with this, a fine of about ten lakh rupees has also been imposed on him.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm