ಬ್ರೇಕಿಂಗ್ ನ್ಯೂಸ್
18-06-21 01:17 pm Headline Karnataka News Network ದೇಶ - ವಿದೇಶ
ಚಂಡೀಗಢ, ಜೂ.18 : ಮಗು ಸಾವನ್ನಪ್ಪಿದ್ದ ಬಗ್ಗೆ ವೈದ್ಯರು ಖಚಿತ ಪಡಿಸಿದ್ದರಿಂದ ಕುಟುಂಬಸ್ಥರು ಮನೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಆದರೆ ಹೆತ್ತಮ್ಮನ ಗೋಳಾಟ ಮುಗಿಲು ಮುಟ್ಟಿತ್ತು. ಅರಚಾಟವೋ, ತಾಯಿಯ ಬಿಸಿಯಪ್ಪುಗೆಯೋ, ಸತ್ತು ಮಲಗಿದ್ದ ಮಗುವಿನ ದೇಹದಲ್ಲಿ ಫಕ್ಕನೆ ಚಲನೆ ಕಂಡುಬಂದು ಜೀವ ಪಡೆದ ಘಟನೆ ಹರಿಯಾಣದಲ್ಲಿ ನಡೆದಿದೆ.
ಏಳು ವರ್ಷದ ಮಗು ಕುನಾಲ್ ಶರ್ಮಾಗೆ ಕಳೆದ ತಿಂಗಳು ಟೈಫಾಯಿಡ್ ಜ್ವರ ಕಾಣಿಸಿಕೊಂಡಿದ್ದು ತೀವ್ರ ಅಸ್ವಸ್ಥನಾಗಿದ್ದ. ಬಳಿಕ ಮಗುವನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವಾರದ ಬಳಿಕ ಮಗು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಪಾಲಕರು ಕಣ್ಣೀರು ಹಾಕುತ್ತಲೇ ಮಗುವಿನ ಶವವನ್ನು ಊರಿಗೆ ತಂದಿದ್ದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಈ ನಡುವೆ ಪವಾಡವೇ ನಡೆದಿದ್ದು, ಶವವಾಗಿದ್ದ ಮಗು ಜೀವ ಪಡೆದಿದೆ.

ಮಗುವಿನ ತಾಯಿ ಅರಚಾಡುತ್ತಾ ಮಗುವಿನ ದೇಹವನ್ನೆಲ್ಲ ಸವರತೊಡಗಿದ್ದರು. ಈ ವೇಳೆ ಬಾಲಕನ ದೇಹದಲ್ಲಿ ಚಲನೆ ಕಂಡುಬಂದಿದ್ದು, ಕೂಡಲೇ ತಂದೆ ಹಿತೇಶ್, ಮಗುವಿನ ಮೇಲೆ ಹಾಕಿದ್ದ ಬಟ್ಟೆ ತೆಗೆದು ಉಸಿರು ಕೊಡಿಸುವ ಪ್ರಯತ್ನ ಮಾಡಿದ್ದಾರೆ. ಆಗ ಮಗನ ದೇಹದಲ್ಲಿ ಎದೆಯ ಬಡಿತವೂ ಶುರುವಾಗಿದೆ.
ಕೂಡಲೇ ಮಗುವನ್ನು ಎತ್ತಿಕೊಂಡು ಪಾಲಕರು ಸಮೀಪದ ಖಾಸಗಿ ಆಸ್ಪತ್ರೆಗೆ ಹೋಗಿದ್ದಾರೆ. 20 ದಿನಗಳ ಚಿಕಿತ್ಸೆ ಬಳಿಕ, ಪವಾಡ ಎಂಬಂತೆ ಬಾಲಕ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಜೂ.15 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಮಗು ಸತ್ತು ಬದುಕಿದ ಪ್ರಸಂಗ ಉತ್ತರ ಭಾರತದಲ್ಲಿ ಪವಾಡದ ಕತೆಯಾಗಿ ಮಾರ್ದನಿಸಿದೆ.
In a shocker from Haryana's Bahadurgarh, 7-year-old Kunal, who was allegedly declared dead by doctors, miraculously survived after his relatives sensed some movement in his body minutes before his last rites.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm