ಬ್ರೇಕಿಂಗ್ ನ್ಯೂಸ್
18-06-21 01:17 pm Headline Karnataka News Network ದೇಶ - ವಿದೇಶ
ಚಂಡೀಗಢ, ಜೂ.18 : ಮಗು ಸಾವನ್ನಪ್ಪಿದ್ದ ಬಗ್ಗೆ ವೈದ್ಯರು ಖಚಿತ ಪಡಿಸಿದ್ದರಿಂದ ಕುಟುಂಬಸ್ಥರು ಮನೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಆದರೆ ಹೆತ್ತಮ್ಮನ ಗೋಳಾಟ ಮುಗಿಲು ಮುಟ್ಟಿತ್ತು. ಅರಚಾಟವೋ, ತಾಯಿಯ ಬಿಸಿಯಪ್ಪುಗೆಯೋ, ಸತ್ತು ಮಲಗಿದ್ದ ಮಗುವಿನ ದೇಹದಲ್ಲಿ ಫಕ್ಕನೆ ಚಲನೆ ಕಂಡುಬಂದು ಜೀವ ಪಡೆದ ಘಟನೆ ಹರಿಯಾಣದಲ್ಲಿ ನಡೆದಿದೆ.
ಏಳು ವರ್ಷದ ಮಗು ಕುನಾಲ್ ಶರ್ಮಾಗೆ ಕಳೆದ ತಿಂಗಳು ಟೈಫಾಯಿಡ್ ಜ್ವರ ಕಾಣಿಸಿಕೊಂಡಿದ್ದು ತೀವ್ರ ಅಸ್ವಸ್ಥನಾಗಿದ್ದ. ಬಳಿಕ ಮಗುವನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವಾರದ ಬಳಿಕ ಮಗು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಪಾಲಕರು ಕಣ್ಣೀರು ಹಾಕುತ್ತಲೇ ಮಗುವಿನ ಶವವನ್ನು ಊರಿಗೆ ತಂದಿದ್ದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಈ ನಡುವೆ ಪವಾಡವೇ ನಡೆದಿದ್ದು, ಶವವಾಗಿದ್ದ ಮಗು ಜೀವ ಪಡೆದಿದೆ.

ಮಗುವಿನ ತಾಯಿ ಅರಚಾಡುತ್ತಾ ಮಗುವಿನ ದೇಹವನ್ನೆಲ್ಲ ಸವರತೊಡಗಿದ್ದರು. ಈ ವೇಳೆ ಬಾಲಕನ ದೇಹದಲ್ಲಿ ಚಲನೆ ಕಂಡುಬಂದಿದ್ದು, ಕೂಡಲೇ ತಂದೆ ಹಿತೇಶ್, ಮಗುವಿನ ಮೇಲೆ ಹಾಕಿದ್ದ ಬಟ್ಟೆ ತೆಗೆದು ಉಸಿರು ಕೊಡಿಸುವ ಪ್ರಯತ್ನ ಮಾಡಿದ್ದಾರೆ. ಆಗ ಮಗನ ದೇಹದಲ್ಲಿ ಎದೆಯ ಬಡಿತವೂ ಶುರುವಾಗಿದೆ.
ಕೂಡಲೇ ಮಗುವನ್ನು ಎತ್ತಿಕೊಂಡು ಪಾಲಕರು ಸಮೀಪದ ಖಾಸಗಿ ಆಸ್ಪತ್ರೆಗೆ ಹೋಗಿದ್ದಾರೆ. 20 ದಿನಗಳ ಚಿಕಿತ್ಸೆ ಬಳಿಕ, ಪವಾಡ ಎಂಬಂತೆ ಬಾಲಕ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಜೂ.15 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಮಗು ಸತ್ತು ಬದುಕಿದ ಪ್ರಸಂಗ ಉತ್ತರ ಭಾರತದಲ್ಲಿ ಪವಾಡದ ಕತೆಯಾಗಿ ಮಾರ್ದನಿಸಿದೆ.
In a shocker from Haryana's Bahadurgarh, 7-year-old Kunal, who was allegedly declared dead by doctors, miraculously survived after his relatives sensed some movement in his body minutes before his last rites.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm