ಬ್ರೇಕಿಂಗ್ ನ್ಯೂಸ್
18-06-21 01:17 pm Headline Karnataka News Network ದೇಶ - ವಿದೇಶ
ಚಂಡೀಗಢ, ಜೂ.18 : ಮಗು ಸಾವನ್ನಪ್ಪಿದ್ದ ಬಗ್ಗೆ ವೈದ್ಯರು ಖಚಿತ ಪಡಿಸಿದ್ದರಿಂದ ಕುಟುಂಬಸ್ಥರು ಮನೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಆದರೆ ಹೆತ್ತಮ್ಮನ ಗೋಳಾಟ ಮುಗಿಲು ಮುಟ್ಟಿತ್ತು. ಅರಚಾಟವೋ, ತಾಯಿಯ ಬಿಸಿಯಪ್ಪುಗೆಯೋ, ಸತ್ತು ಮಲಗಿದ್ದ ಮಗುವಿನ ದೇಹದಲ್ಲಿ ಫಕ್ಕನೆ ಚಲನೆ ಕಂಡುಬಂದು ಜೀವ ಪಡೆದ ಘಟನೆ ಹರಿಯಾಣದಲ್ಲಿ ನಡೆದಿದೆ.
ಏಳು ವರ್ಷದ ಮಗು ಕುನಾಲ್ ಶರ್ಮಾಗೆ ಕಳೆದ ತಿಂಗಳು ಟೈಫಾಯಿಡ್ ಜ್ವರ ಕಾಣಿಸಿಕೊಂಡಿದ್ದು ತೀವ್ರ ಅಸ್ವಸ್ಥನಾಗಿದ್ದ. ಬಳಿಕ ಮಗುವನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವಾರದ ಬಳಿಕ ಮಗು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಪಾಲಕರು ಕಣ್ಣೀರು ಹಾಕುತ್ತಲೇ ಮಗುವಿನ ಶವವನ್ನು ಊರಿಗೆ ತಂದಿದ್ದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಈ ನಡುವೆ ಪವಾಡವೇ ನಡೆದಿದ್ದು, ಶವವಾಗಿದ್ದ ಮಗು ಜೀವ ಪಡೆದಿದೆ.

ಮಗುವಿನ ತಾಯಿ ಅರಚಾಡುತ್ತಾ ಮಗುವಿನ ದೇಹವನ್ನೆಲ್ಲ ಸವರತೊಡಗಿದ್ದರು. ಈ ವೇಳೆ ಬಾಲಕನ ದೇಹದಲ್ಲಿ ಚಲನೆ ಕಂಡುಬಂದಿದ್ದು, ಕೂಡಲೇ ತಂದೆ ಹಿತೇಶ್, ಮಗುವಿನ ಮೇಲೆ ಹಾಕಿದ್ದ ಬಟ್ಟೆ ತೆಗೆದು ಉಸಿರು ಕೊಡಿಸುವ ಪ್ರಯತ್ನ ಮಾಡಿದ್ದಾರೆ. ಆಗ ಮಗನ ದೇಹದಲ್ಲಿ ಎದೆಯ ಬಡಿತವೂ ಶುರುವಾಗಿದೆ.
ಕೂಡಲೇ ಮಗುವನ್ನು ಎತ್ತಿಕೊಂಡು ಪಾಲಕರು ಸಮೀಪದ ಖಾಸಗಿ ಆಸ್ಪತ್ರೆಗೆ ಹೋಗಿದ್ದಾರೆ. 20 ದಿನಗಳ ಚಿಕಿತ್ಸೆ ಬಳಿಕ, ಪವಾಡ ಎಂಬಂತೆ ಬಾಲಕ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಜೂ.15 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಮಗು ಸತ್ತು ಬದುಕಿದ ಪ್ರಸಂಗ ಉತ್ತರ ಭಾರತದಲ್ಲಿ ಪವಾಡದ ಕತೆಯಾಗಿ ಮಾರ್ದನಿಸಿದೆ.
In a shocker from Haryana's Bahadurgarh, 7-year-old Kunal, who was allegedly declared dead by doctors, miraculously survived after his relatives sensed some movement in his body minutes before his last rites.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm