ಬ್ರೇಕಿಂಗ್ ನ್ಯೂಸ್
18-06-21 01:17 pm Headline Karnataka News Network ದೇಶ - ವಿದೇಶ
ಚಂಡೀಗಢ, ಜೂ.18 : ಮಗು ಸಾವನ್ನಪ್ಪಿದ್ದ ಬಗ್ಗೆ ವೈದ್ಯರು ಖಚಿತ ಪಡಿಸಿದ್ದರಿಂದ ಕುಟುಂಬಸ್ಥರು ಮನೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಆದರೆ ಹೆತ್ತಮ್ಮನ ಗೋಳಾಟ ಮುಗಿಲು ಮುಟ್ಟಿತ್ತು. ಅರಚಾಟವೋ, ತಾಯಿಯ ಬಿಸಿಯಪ್ಪುಗೆಯೋ, ಸತ್ತು ಮಲಗಿದ್ದ ಮಗುವಿನ ದೇಹದಲ್ಲಿ ಫಕ್ಕನೆ ಚಲನೆ ಕಂಡುಬಂದು ಜೀವ ಪಡೆದ ಘಟನೆ ಹರಿಯಾಣದಲ್ಲಿ ನಡೆದಿದೆ.
ಏಳು ವರ್ಷದ ಮಗು ಕುನಾಲ್ ಶರ್ಮಾಗೆ ಕಳೆದ ತಿಂಗಳು ಟೈಫಾಯಿಡ್ ಜ್ವರ ಕಾಣಿಸಿಕೊಂಡಿದ್ದು ತೀವ್ರ ಅಸ್ವಸ್ಥನಾಗಿದ್ದ. ಬಳಿಕ ಮಗುವನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವಾರದ ಬಳಿಕ ಮಗು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಪಾಲಕರು ಕಣ್ಣೀರು ಹಾಕುತ್ತಲೇ ಮಗುವಿನ ಶವವನ್ನು ಊರಿಗೆ ತಂದಿದ್ದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಈ ನಡುವೆ ಪವಾಡವೇ ನಡೆದಿದ್ದು, ಶವವಾಗಿದ್ದ ಮಗು ಜೀವ ಪಡೆದಿದೆ.

ಮಗುವಿನ ತಾಯಿ ಅರಚಾಡುತ್ತಾ ಮಗುವಿನ ದೇಹವನ್ನೆಲ್ಲ ಸವರತೊಡಗಿದ್ದರು. ಈ ವೇಳೆ ಬಾಲಕನ ದೇಹದಲ್ಲಿ ಚಲನೆ ಕಂಡುಬಂದಿದ್ದು, ಕೂಡಲೇ ತಂದೆ ಹಿತೇಶ್, ಮಗುವಿನ ಮೇಲೆ ಹಾಕಿದ್ದ ಬಟ್ಟೆ ತೆಗೆದು ಉಸಿರು ಕೊಡಿಸುವ ಪ್ರಯತ್ನ ಮಾಡಿದ್ದಾರೆ. ಆಗ ಮಗನ ದೇಹದಲ್ಲಿ ಎದೆಯ ಬಡಿತವೂ ಶುರುವಾಗಿದೆ.
ಕೂಡಲೇ ಮಗುವನ್ನು ಎತ್ತಿಕೊಂಡು ಪಾಲಕರು ಸಮೀಪದ ಖಾಸಗಿ ಆಸ್ಪತ್ರೆಗೆ ಹೋಗಿದ್ದಾರೆ. 20 ದಿನಗಳ ಚಿಕಿತ್ಸೆ ಬಳಿಕ, ಪವಾಡ ಎಂಬಂತೆ ಬಾಲಕ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಜೂ.15 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಮಗು ಸತ್ತು ಬದುಕಿದ ಪ್ರಸಂಗ ಉತ್ತರ ಭಾರತದಲ್ಲಿ ಪವಾಡದ ಕತೆಯಾಗಿ ಮಾರ್ದನಿಸಿದೆ.
In a shocker from Haryana's Bahadurgarh, 7-year-old Kunal, who was allegedly declared dead by doctors, miraculously survived after his relatives sensed some movement in his body minutes before his last rites.
30-05-26 06:45 pm
HK News Staffer
ಕೆಪಿಸಿಸಿ ಅಧ್ಯಕ್ಷ ಗಾದಿಗೆ ಸರ್ಪ್ರೈಸ್ ಟ್ವಿಸ್ಟ್ ;...
30-05-26 01:14 pm
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 09:52 pm
HK News Desk
Mangalore News, Traffic: ಹೆದ್ದಾರಿ ಅಪಘಾತ ತಡೆಗೆ...
30-05-26 08:06 pm
Master Travels Bus, Mangalore: ಕಾವೂರಿನಲ್ಲಿ ಬಸ...
30-05-26 02:10 pm
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am