ಬ್ರೇಕಿಂಗ್ ನ್ಯೂಸ್
18-06-21 01:17 pm Headline Karnataka News Network ದೇಶ - ವಿದೇಶ
ಚಂಡೀಗಢ, ಜೂ.18 : ಮಗು ಸಾವನ್ನಪ್ಪಿದ್ದ ಬಗ್ಗೆ ವೈದ್ಯರು ಖಚಿತ ಪಡಿಸಿದ್ದರಿಂದ ಕುಟುಂಬಸ್ಥರು ಮನೆಯಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಆದರೆ ಹೆತ್ತಮ್ಮನ ಗೋಳಾಟ ಮುಗಿಲು ಮುಟ್ಟಿತ್ತು. ಅರಚಾಟವೋ, ತಾಯಿಯ ಬಿಸಿಯಪ್ಪುಗೆಯೋ, ಸತ್ತು ಮಲಗಿದ್ದ ಮಗುವಿನ ದೇಹದಲ್ಲಿ ಫಕ್ಕನೆ ಚಲನೆ ಕಂಡುಬಂದು ಜೀವ ಪಡೆದ ಘಟನೆ ಹರಿಯಾಣದಲ್ಲಿ ನಡೆದಿದೆ.
ಏಳು ವರ್ಷದ ಮಗು ಕುನಾಲ್ ಶರ್ಮಾಗೆ ಕಳೆದ ತಿಂಗಳು ಟೈಫಾಯಿಡ್ ಜ್ವರ ಕಾಣಿಸಿಕೊಂಡಿದ್ದು ತೀವ್ರ ಅಸ್ವಸ್ಥನಾಗಿದ್ದ. ಬಳಿಕ ಮಗುವನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ವಾರದ ಬಳಿಕ ಮಗು ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದರು. ಪಾಲಕರು ಕಣ್ಣೀರು ಹಾಕುತ್ತಲೇ ಮಗುವಿನ ಶವವನ್ನು ಊರಿಗೆ ತಂದಿದ್ದು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಿಕೊಂಡಿದ್ದರು. ಈ ನಡುವೆ ಪವಾಡವೇ ನಡೆದಿದ್ದು, ಶವವಾಗಿದ್ದ ಮಗು ಜೀವ ಪಡೆದಿದೆ.

ಮಗುವಿನ ತಾಯಿ ಅರಚಾಡುತ್ತಾ ಮಗುವಿನ ದೇಹವನ್ನೆಲ್ಲ ಸವರತೊಡಗಿದ್ದರು. ಈ ವೇಳೆ ಬಾಲಕನ ದೇಹದಲ್ಲಿ ಚಲನೆ ಕಂಡುಬಂದಿದ್ದು, ಕೂಡಲೇ ತಂದೆ ಹಿತೇಶ್, ಮಗುವಿನ ಮೇಲೆ ಹಾಕಿದ್ದ ಬಟ್ಟೆ ತೆಗೆದು ಉಸಿರು ಕೊಡಿಸುವ ಪ್ರಯತ್ನ ಮಾಡಿದ್ದಾರೆ. ಆಗ ಮಗನ ದೇಹದಲ್ಲಿ ಎದೆಯ ಬಡಿತವೂ ಶುರುವಾಗಿದೆ.
ಕೂಡಲೇ ಮಗುವನ್ನು ಎತ್ತಿಕೊಂಡು ಪಾಲಕರು ಸಮೀಪದ ಖಾಸಗಿ ಆಸ್ಪತ್ರೆಗೆ ಹೋಗಿದ್ದಾರೆ. 20 ದಿನಗಳ ಚಿಕಿತ್ಸೆ ಬಳಿಕ, ಪವಾಡ ಎಂಬಂತೆ ಬಾಲಕ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು, ಜೂ.15 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾನೆ. ಮಗು ಸತ್ತು ಬದುಕಿದ ಪ್ರಸಂಗ ಉತ್ತರ ಭಾರತದಲ್ಲಿ ಪವಾಡದ ಕತೆಯಾಗಿ ಮಾರ್ದನಿಸಿದೆ.
In a shocker from Haryana's Bahadurgarh, 7-year-old Kunal, who was allegedly declared dead by doctors, miraculously survived after his relatives sensed some movement in his body minutes before his last rites.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm