ಬ್ರೇಕಿಂಗ್ ನ್ಯೂಸ್
18-06-21 05:54 pm Headline Karnataka News Network ದೇಶ - ವಿದೇಶ
ಬೆಳಗಾವಿ, ಜೂನ್ 18 : ಮಹಾರಾಷ್ಟ್ರದ ಸಹ್ಯಾದ್ರಿ ಶ್ರೇಣಿಯಲ್ಲಿ ಮುಂಗಾರು ಚುರುಕಾಗಿದ್ದು ಮಹಾರಾಷ್ಟ್ರದ ಜಲಾನಯನ ಪ್ರದೇಶ ಹೊಂದಿರುವ ಮತ್ತು ಕರ್ನಾಟಕದಲ್ಲಿ ಹರಿಯುವ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.
ಮಹಾರಾಷ್ಟ್ರ ರಾಜ್ಯದ ನದಿ ತೀರದಲ್ಲೂ ಪ್ರವಾಹದ ಆತಂಕ ಕಂಡುಬಂದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ನರಸಿಂಹವಾಡಿ ದತ್ತ ಮಂದಿರ ಸಂಪೂರ್ಣ ಜಲಾವೃತವಾಗಿದೆ.

ಕೃಷ್ಣಾ ಹಾಗೂ ಪಂಚಗಂಗಾ ನದಿಯ ಸಂಗಮಕ್ಷೇತ್ರವಾಗಿರುವ ಸುಕ್ಷೇತ್ರ ನರಸಿಂಹವಾಡಿ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿ ಅವಾಂತರವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನದಿಯಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಮಳೆಯಿಂದಾಗಿ ಬೆಳಗಾವಿಯ ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಸುಣದೋಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವ ಕಾರಣ 20 ಹಳ್ಳಿಗಳ ಜನರು ಮೂಡಲಗಿ ತಾಲ್ಲೂಕು ಕೇಂದ್ರ ತಲುಪಲು ಸಾಧ್ಯವಾಗುತ್ತಿಲ್ಲ. ಮೂಡಲಗಿ ತಾಲೂಕಿನಲ್ಲಿ ಒಟ್ಟು ಆರು ಸೇತುವೆಗಳು ಮುಳುಗಡೆಯಾಗಿವೆ. ಹಿಡಕಲ್ ಡ್ಯಾಂನಿಂದ ಹೊರಹರಿವು ಹೆಚ್ಚಿದರೆ ನೂರಾರು ಗ್ರಾಮಗಳು ಜಲಾವೃತವಾಗಲಿವೆ.



ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ
ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಒಟ್ಟು 20 ಜಿಲ್ಲಾಡಳಿತಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಪ್ರದೇಶಗಳ ಜಿಲ್ಲಾಡಳಿತಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ. 20 ಜಿಲ್ಲಾಡಳಿತಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Heavy rains in Maharashtra flood situation grim in Belagavi District
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm