ಬ್ರೇಕಿಂಗ್ ನ್ಯೂಸ್
18-06-21 05:54 pm Headline Karnataka News Network ದೇಶ - ವಿದೇಶ
ಬೆಳಗಾವಿ, ಜೂನ್ 18 : ಮಹಾರಾಷ್ಟ್ರದ ಸಹ್ಯಾದ್ರಿ ಶ್ರೇಣಿಯಲ್ಲಿ ಮುಂಗಾರು ಚುರುಕಾಗಿದ್ದು ಮಹಾರಾಷ್ಟ್ರದ ಜಲಾನಯನ ಪ್ರದೇಶ ಹೊಂದಿರುವ ಮತ್ತು ಕರ್ನಾಟಕದಲ್ಲಿ ಹರಿಯುವ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.
ಮಹಾರಾಷ್ಟ್ರ ರಾಜ್ಯದ ನದಿ ತೀರದಲ್ಲೂ ಪ್ರವಾಹದ ಆತಂಕ ಕಂಡುಬಂದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ನರಸಿಂಹವಾಡಿ ದತ್ತ ಮಂದಿರ ಸಂಪೂರ್ಣ ಜಲಾವೃತವಾಗಿದೆ.

ಕೃಷ್ಣಾ ಹಾಗೂ ಪಂಚಗಂಗಾ ನದಿಯ ಸಂಗಮಕ್ಷೇತ್ರವಾಗಿರುವ ಸುಕ್ಷೇತ್ರ ನರಸಿಂಹವಾಡಿ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿ ಅವಾಂತರವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನದಿಯಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಮಳೆಯಿಂದಾಗಿ ಬೆಳಗಾವಿಯ ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಸುಣದೋಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವ ಕಾರಣ 20 ಹಳ್ಳಿಗಳ ಜನರು ಮೂಡಲಗಿ ತಾಲ್ಲೂಕು ಕೇಂದ್ರ ತಲುಪಲು ಸಾಧ್ಯವಾಗುತ್ತಿಲ್ಲ. ಮೂಡಲಗಿ ತಾಲೂಕಿನಲ್ಲಿ ಒಟ್ಟು ಆರು ಸೇತುವೆಗಳು ಮುಳುಗಡೆಯಾಗಿವೆ. ಹಿಡಕಲ್ ಡ್ಯಾಂನಿಂದ ಹೊರಹರಿವು ಹೆಚ್ಚಿದರೆ ನೂರಾರು ಗ್ರಾಮಗಳು ಜಲಾವೃತವಾಗಲಿವೆ.



ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ
ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಒಟ್ಟು 20 ಜಿಲ್ಲಾಡಳಿತಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಪ್ರದೇಶಗಳ ಜಿಲ್ಲಾಡಳಿತಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ. 20 ಜಿಲ್ಲಾಡಳಿತಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Heavy rains in Maharashtra flood situation grim in Belagavi District
09-09-26 10:52 am
HK News Staffer
ಕಳಸದಲ್ಲಿ ರಸ್ತೆ ಅವ್ಯವಸ್ಥೆಯ ಎಫೆಕ್ಟ್: ‘ಹುಡುಗ-ಹು...
08-09-26 02:24 pm
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
09-09-26 03:29 pm
HK News Staffer
ಮಂಗಳೂರಿನಲ್ಲಿ ಸಂಪುಟ ಸಭೆ ; ಪುತ್ತೂರಿನಲ್ಲಿ ಆಯುರ್ವ...
09-09-26 02:03 pm
ಮಂಗಳೂರು ರೈಲ್ವೇ ಆಡಳಿತಾತ್ಮಕ ವರ್ಗಾವಣೆ ಪ್ರಕ್ರಿಯೆ...
08-09-26 05:20 pm
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
09-09-26 12:16 pm
HK News Staffer
ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು...
08-09-26 09:19 pm
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm