ಬ್ರೇಕಿಂಗ್ ನ್ಯೂಸ್
18-06-21 05:54 pm Headline Karnataka News Network ದೇಶ - ವಿದೇಶ
ಬೆಳಗಾವಿ, ಜೂನ್ 18 : ಮಹಾರಾಷ್ಟ್ರದ ಸಹ್ಯಾದ್ರಿ ಶ್ರೇಣಿಯಲ್ಲಿ ಮುಂಗಾರು ಚುರುಕಾಗಿದ್ದು ಮಹಾರಾಷ್ಟ್ರದ ಜಲಾನಯನ ಪ್ರದೇಶ ಹೊಂದಿರುವ ಮತ್ತು ಕರ್ನಾಟಕದಲ್ಲಿ ಹರಿಯುವ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.
ಮಹಾರಾಷ್ಟ್ರ ರಾಜ್ಯದ ನದಿ ತೀರದಲ್ಲೂ ಪ್ರವಾಹದ ಆತಂಕ ಕಂಡುಬಂದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ನರಸಿಂಹವಾಡಿ ದತ್ತ ಮಂದಿರ ಸಂಪೂರ್ಣ ಜಲಾವೃತವಾಗಿದೆ.

ಕೃಷ್ಣಾ ಹಾಗೂ ಪಂಚಗಂಗಾ ನದಿಯ ಸಂಗಮಕ್ಷೇತ್ರವಾಗಿರುವ ಸುಕ್ಷೇತ್ರ ನರಸಿಂಹವಾಡಿ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿ ಅವಾಂತರವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನದಿಯಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಮಳೆಯಿಂದಾಗಿ ಬೆಳಗಾವಿಯ ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಸುಣದೋಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವ ಕಾರಣ 20 ಹಳ್ಳಿಗಳ ಜನರು ಮೂಡಲಗಿ ತಾಲ್ಲೂಕು ಕೇಂದ್ರ ತಲುಪಲು ಸಾಧ್ಯವಾಗುತ್ತಿಲ್ಲ. ಮೂಡಲಗಿ ತಾಲೂಕಿನಲ್ಲಿ ಒಟ್ಟು ಆರು ಸೇತುವೆಗಳು ಮುಳುಗಡೆಯಾಗಿವೆ. ಹಿಡಕಲ್ ಡ್ಯಾಂನಿಂದ ಹೊರಹರಿವು ಹೆಚ್ಚಿದರೆ ನೂರಾರು ಗ್ರಾಮಗಳು ಜಲಾವೃತವಾಗಲಿವೆ.



ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ
ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಒಟ್ಟು 20 ಜಿಲ್ಲಾಡಳಿತಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಪ್ರದೇಶಗಳ ಜಿಲ್ಲಾಡಳಿತಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ. 20 ಜಿಲ್ಲಾಡಳಿತಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Heavy rains in Maharashtra flood situation grim in Belagavi District
13-03-26 12:09 pm
HK News Staffer
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
13-03-26 11:24 am
HK News Staffer
ಅಮೆರಿಕದ ಪಶ್ಚಿಮ ಕರಾವಳಿಗೆ ಇರಾನ್ ದಾಳಿ ಸಾಧ್ಯತೆ ;...
12-03-26 09:03 pm
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
13-03-26 11:46 am
HK News Staffer
ಸುಳ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯ...
12-03-26 10:47 pm
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm