ಬ್ರೇಕಿಂಗ್ ನ್ಯೂಸ್
18-06-21 05:54 pm Headline Karnataka News Network ದೇಶ - ವಿದೇಶ
ಬೆಳಗಾವಿ, ಜೂನ್ 18 : ಮಹಾರಾಷ್ಟ್ರದ ಸಹ್ಯಾದ್ರಿ ಶ್ರೇಣಿಯಲ್ಲಿ ಮುಂಗಾರು ಚುರುಕಾಗಿದ್ದು ಮಹಾರಾಷ್ಟ್ರದ ಜಲಾನಯನ ಪ್ರದೇಶ ಹೊಂದಿರುವ ಮತ್ತು ಕರ್ನಾಟಕದಲ್ಲಿ ಹರಿಯುವ ಹಲವು ನದಿಗಳು ಉಕ್ಕಿ ಹರಿಯುತ್ತಿವೆ.
ಮಹಾರಾಷ್ಟ್ರ ರಾಜ್ಯದ ನದಿ ತೀರದಲ್ಲೂ ಪ್ರವಾಹದ ಆತಂಕ ಕಂಡುಬಂದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ನರಸಿಂಹವಾಡಿ ದತ್ತ ಮಂದಿರ ಸಂಪೂರ್ಣ ಜಲಾವೃತವಾಗಿದೆ.
ಕೃಷ್ಣಾ ಹಾಗೂ ಪಂಚಗಂಗಾ ನದಿಯ ಸಂಗಮಕ್ಷೇತ್ರವಾಗಿರುವ ಸುಕ್ಷೇತ್ರ ನರಸಿಂಹವಾಡಿ ದತ್ತಮಂದಿರಕ್ಕೆ ಕೃಷ್ಣಾ ನದಿ ನೀರು ನುಗ್ಗಿ ಅವಾಂತರವಾಗಿದೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಬಳಿ ನದಿಯಲ್ಲಿ ಸುಮಾರು 80 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ.
ಮಳೆಯಿಂದಾಗಿ ಬೆಳಗಾವಿಯ ಬೆಳಗಾವಿ ಜಿಲ್ಲೆ ಮೂಡಲಗಿ ತಾಲ್ಲೂಕಿನ ಸುಣದೋಳಿ ಸೇತುವೆ ಸಂಪೂರ್ಣ ಮುಳುಗಡೆಯಾಗಿದೆ. ಸೇತುವೆ ಮುಳುಗಡೆಯಾಗಿರುವ ಕಾರಣ 20 ಹಳ್ಳಿಗಳ ಜನರು ಮೂಡಲಗಿ ತಾಲ್ಲೂಕು ಕೇಂದ್ರ ತಲುಪಲು ಸಾಧ್ಯವಾಗುತ್ತಿಲ್ಲ. ಮೂಡಲಗಿ ತಾಲೂಕಿನಲ್ಲಿ ಒಟ್ಟು ಆರು ಸೇತುವೆಗಳು ಮುಳುಗಡೆಯಾಗಿವೆ. ಹಿಡಕಲ್ ಡ್ಯಾಂನಿಂದ ಹೊರಹರಿವು ಹೆಚ್ಚಿದರೆ ನೂರಾರು ಗ್ರಾಮಗಳು ಜಲಾವೃತವಾಗಲಿವೆ.
ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಭೆ
ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು, ಕಲಬುರಗಿ, ಯಾದಗಿರಿ, ಬೀದರ್, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಒಟ್ಟು 20 ಜಿಲ್ಲಾಡಳಿತಗಳ ಜತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಭೆ ನಡೆಸಲಿದ್ದಾರೆ.
ರಾಜ್ಯದಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಪ್ರದೇಶಗಳ ಜಿಲ್ಲಾಡಳಿತಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಮಧ್ಯಾಹ್ನ 12 ಗಂಟೆಗೆ ವಿಡಿಯೊ ಕಾನ್ಫರೆನ್ಸ್ ಸಭೆ ನಡೆಸಲಿದ್ದಾರೆ. 20 ಜಿಲ್ಲಾಡಳಿತಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
Heavy rains in Maharashtra flood situation grim in Belagavi District
14-10-25 11:24 am
HK News Desk
CM Siddaramaiah, DK Shivakumar:ಶಾಸಕರ ಬೆಂಬಲವಿಲ...
13-10-25 10:09 pm
ಸಚಿವನಾಗಿ ಆದಾಯ ಮೂಲಕ್ಕೆ ಕತ್ತರಿ ; ನಟನೆಗೆ ಮರಳಲಿದ್...
13-10-25 03:54 pm
ಶಾಲಾ ಮೈದಾನ, ಪಾರ್ಕ್ ಸೇರಿ ಸಾರ್ವಜನಿಕ ಸ್ಥಳಗಳಲ್ಲಿ...
13-10-25 12:51 pm
DK Shivakumar, MLA Munirathna, CM Siddaramaia...
12-10-25 08:59 pm
14-10-25 11:22 am
HK News Desk
ಕರೂರು ಕಾಲ್ತುಳಿತ ಪ್ರಕರಣ ; ಸಿಬಿಐ ತನಿಖೆಗೆ ಒಪ್ಪಿಸ...
14-10-25 11:11 am
Ex-IAS Officer Kannan Gopinathan, Congress: ಜ...
13-10-25 10:37 pm
Kerala, IT professional dead, RSS members: ಆರ...
13-10-25 05:31 pm
ಪಾಕಿಸ್ತಾನದ ಸೇನಾ ಔಟ್ ಪೋಸ್ಟ್ ಮೇಲೆ ಅಫ್ಘಾನ್ ಭೀಕರ...
12-10-25 10:19 pm
13-10-25 07:47 pm
Udupi Correspondent
ಆರೆಸ್ಸೆಸ್ ಸೇವಾ ಚಟುವಟಿಕೆ ತಿಳಿಯದ ಪ್ರಿಯಾಂಕ ಖರ್ಗೆ...
13-10-25 04:33 pm
Honey Bees Attack in Puttur: ಪುತ್ತೂರು ; ಹೆಜ್ಜ...
12-10-25 09:53 pm
ಪುತ್ತೂರಿಗೆ ಬಂದಿದ್ದ ಇಬ್ಬರು ಯುವತಿಯರು ದಿಢೀರ್ ನಾಪ...
12-10-25 06:53 pm
Uchila Fire, Mangalore: ಹೊತ್ತಿ ಉರಿದ ಉಚ್ಚಿಲದ ಗ...
12-10-25 05:46 pm
14-10-25 11:19 am
Mangalore Correspondent
Vitla, Honey Trap, Mangalore Crime: ಗಲ್ಫ್ ಉದ್...
13-10-25 10:04 pm
Mangalore, Loan Fraud, Fake Gold: ಆತ್ಮಶಕ್ತಿ ಸ...
12-10-25 03:52 pm
Udupi, Karkala, Youth suicide: ಖಾಸಗಿ ವಿಡಿಯೋ ಮ...
10-10-25 09:48 pm
Bangalore Caste Census, Fight: ಜಾತಿಗಣತಿ ಸಮೀಕ್...
10-10-25 07:43 pm