ಬ್ರೇಕಿಂಗ್ ನ್ಯೂಸ್
31-08-20 05:47 pm Headline Karnataka News Network ದೇಶ - ವಿದೇಶ
ಚೆನ್ನೈ, ಆಗಸ್ಟ್.31: ಚೆನ್ನೈ ಸೂಪರ್ ಕಿಂಗ್ಸ್ ಆಟಗಾರ ಸುರೇಶ್ ರೈನಾ ಆಗಸ್ಟ್ 29 ರಂದು ಅರ್ಧಕ್ಕೆ ಭಾರತಕ್ಕೆ ವಾಪಾಸ್ಸಾಗಿದ್ದು, ವೈಯಕ್ತಿಕ ಕಾರಣದಿಂದ ಅವರು ಭಾರತಕ್ಕೆ ವಾಪಸ್ಸಾಗಿದ್ದಾರೆ ಎಂದು ಫ್ರಾಂಚೈಸಿ ಸಿಇಒ ಕೆ. ಎಸ್. ವಿಶ್ವನಾಥನ್ ಹೇಳಿಕೆ ನೀಡಿದ್ದರು. ಆದರೆ, ಅಸಲಿ ಕಾರಣ ಬೇರೆಯೇ ಇದೆ.
ತಮಗೆ ನೀಡಲಾಗಿದ್ದ ಹೋಟೆಲ್ ಕೊಠಡಿಯಿಂದ ರೈನಾ ಸಂತುಷ್ಟರಾಗಿಲ್ಲವೆಂದು ವರದಿಯೊಂದು ಹೇಳಿದೆ. ತಂಡದ ಕಪ್ತಾನ ಎಂ ಎಸ್ ಧೋನಿ ಅವರಿಗೆ ನೀಡಲಾಗಿರುವ ಕೊಠಡಿಯಂತಹದ್ದೇ ಕೊಠಡಿಯನ್ನು ತನಗೆ ನೀಡಬೇಕೆಂದು ರೈನಾ ಬಯಸಿದ್ದರೆನ್ನಲಾಗಿದೆ.

ಈಗಾಗಲೇ ಇಬ್ಬರು ಆಟಗಾರರಿಗೆ ಹಾಗೂ ತಂಡದ ಇತರ ಕೆಲ ಸಿಬ್ಬಂದಿಗೆ ಕೋವಿಡ್-19 ಪಾಸಿಟಿವ್ ಆಗಿರುವುದು ಒಂದೆಡೆಯಾದರೆ ಇನ್ನೊಂದೆಡೆ ಸುರೇಶ್ ರೈನಾ ದಿಢೀರನೇ ತಾಯ್ನಾಡಿಗೆ ಮರಳಿರುವುದು ತಂಡಕ್ಕೆ ಹೊಡೆತ ನೀಡಿದೆಯಾದರೂ ಈ ಕುರಿತು ಪ್ರತಿಕ್ರಿಯಿಸಿರುವ ತಂಡದ ಮಾಲಕ ಹಾಗೂ ಮಾಜಿ ಬಿಸಿಸಿಐ ಅಧ್ಯಕ್ಷ ಎನ್ ಶ್ರೀನಿವಾಸನ್, “ ಚೆನ್ನೈ ಸೂಪರ್ ಕಿಂಗ್ಸ್ ಯಾವತ್ತೂ ಒಂದು ಕುಟುಂಬದಂತೆ, ಎಲ್ಲಾ ಹಿರಿಯ ಆಟಗಾರರು ಜತೆಯಾಗಿಯೇ ಇದ್ದಾರೆ. ಆದರೆ ಯಾರಾದರೂ ಖುಷಿಯಾಗಿಲ್ಲದೇ ಇದ್ದರೆ ಅವರು ವಾಪಸಾಗಬಹುದು. ಯಾರ ಮೇಲೂ ಒತ್ತಡ ಹೇರುವುದಿಲ್ಲ, ಆದರೆ ಕೆಲವೊಮ್ಮೆ ಯಶಸ್ಸು ತಲೆಗೇರುತ್ತದೆ, ಐಪಿಎಲ್ ಇನ್ನೂ ಆರಂಭಗೊಂಡಿಲ್ಲ ತಾನೇನು ಕಳೆದುಕೊಳ್ಳುತ್ತೇನೆ ಹಾಗೂ ಎಷ್ಟು ಹಣ ಕಳೆದುಕೊಳ್ಳುತ್ತೇನೆ ( ರೂ 11 ಕೋಟಿ) ಎಂಬ ಕುರಿತು ರೈನಾಗೆ ಅರಿವಾಗುತ್ತದೆ” ಎಂದು ಅವರು ಹೇಳಿದರು.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm