ಬ್ರೇಕಿಂಗ್ ನ್ಯೂಸ್
19-06-21 12:49 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 19: ಕಂಟೇನರ್ ಟ್ರಕ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆದ ಘಟನೆ ಮಹಾರಾಷ್ಟ್ರದ ಉಸ್ಮಾನಾಬಾದ್ನಲ್ಲಿ ನಡೆದಿದೆ. ಅದರಲ್ಲಿದ್ದ ಸುಮಾರು 70 ಲಕ್ಷ ಮೌಲ್ಯದ ವಸ್ತುಗಳನ್ನು ಗ್ರಾಮಸ್ಥರು ಹಾಗೂ ದಾರಿಹೋಕರು ಲೂಟಿ ಹೊಡೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಪಲ್ಟಿಯಾದ ಟ್ರಕ್ ಮೊಬೈಲ್ ಫೋನ್ಗಳು, ಕಂಪ್ಯೂಟರ್ಗಳು, ಎಲ್ಇಡಿ ಟಿವಿಗಳು, ಬೊಂಬೆಗಳು ಹಾಗೂ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಸಾಗಿಸುತ್ತಿತ್ತು ಎಂದು ತಿಳಿದು ಬಂದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಟ್ರಕ್ನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿರುವ ಜನರು ವಾಪಸ್ ತಂದುಕೊಡಿ ಎಂದು ಹೇಳಿದ್ದರು. ಪೊಲೀಸ್ ತಂಡಗಳು ಅಕ್ಕ-ಪಕ್ಕದ ಪ್ರದೇಶಗಳಲ್ಲಿ ಬೀಡು ಬಿಟ್ಟಿದ್ದು, ಜನರು ತಾವು ತೆಗೆದುಕೊಂಡು ಹೋಗಿರುವ ವಸ್ತುಗಳನ್ನು ಹಿಂಪಡೆಯಲು ಹರಸಾಹಸಪಟ್ಟರು.




ವಾಶಿ ತಹಶಿಲ್ನ ತೆರ್ಕೆಡಾದ ಲಕ್ಷ್ಮಿ ಪಾರ್ದಿ ಪೆಡಿ ಬಳಿ ಸೋಲಾಪುರ-ರಂಗಾಬಾದ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ 3 ಗಂಟೆಯಲ್ಲಿ ಈ ಘಟನೆ ನಡೆದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ. ಇನ್ನೂ ಕೆಲವರು ಕಂಟೇನರ್ನ ಬಾಗಿಲು ತೆರೆಯಲು ಯತ್ನಿಸಿದರು. ಸ್ಥಳೀಯ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಜನರು ಕದ್ದೊಯ್ದಿರುವ ವಸ್ತುಗಳನ್ನು ಮರಳಿ ಪಡೆಯಲು ಯತ್ನಿಸಿದರು.
ಪೊಲೀಸರು ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿದರು. ಪೊಲೀಸರ ಮನವಿ ಬಳಿಕ ಕೆಲವು ಜನರು ಮಾತ್ರ ತಾವು ತೆಗೆದುಕೊಂಡು ಹೋಗಿದ್ದ ವಸ್ತುಗಳನ್ನು ವಾಪಸ್ ತಂದುಕೊಟ್ಟರು. ಆದರೆ ಇನ್ನೂ ಕೆಲವರು ತಂದುಕೊಡಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
Goods, including phones, computers, LEDs, worth over ₹ 70 lakh were looted allegedly by villagers and passersby after a container truck overturned Maharashtra's Osmanabad.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm