ಬ್ರೇಕಿಂಗ್ ನ್ಯೂಸ್
19-06-21 12:49 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 19: ಕಂಟೇನರ್ ಟ್ರಕ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆದ ಘಟನೆ ಮಹಾರಾಷ್ಟ್ರದ ಉಸ್ಮಾನಾಬಾದ್ನಲ್ಲಿ ನಡೆದಿದೆ. ಅದರಲ್ಲಿದ್ದ ಸುಮಾರು 70 ಲಕ್ಷ ಮೌಲ್ಯದ ವಸ್ತುಗಳನ್ನು ಗ್ರಾಮಸ್ಥರು ಹಾಗೂ ದಾರಿಹೋಕರು ಲೂಟಿ ಹೊಡೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಪಲ್ಟಿಯಾದ ಟ್ರಕ್ ಮೊಬೈಲ್ ಫೋನ್ಗಳು, ಕಂಪ್ಯೂಟರ್ಗಳು, ಎಲ್ಇಡಿ ಟಿವಿಗಳು, ಬೊಂಬೆಗಳು ಹಾಗೂ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಸಾಗಿಸುತ್ತಿತ್ತು ಎಂದು ತಿಳಿದು ಬಂದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಟ್ರಕ್ನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿರುವ ಜನರು ವಾಪಸ್ ತಂದುಕೊಡಿ ಎಂದು ಹೇಳಿದ್ದರು. ಪೊಲೀಸ್ ತಂಡಗಳು ಅಕ್ಕ-ಪಕ್ಕದ ಪ್ರದೇಶಗಳಲ್ಲಿ ಬೀಡು ಬಿಟ್ಟಿದ್ದು, ಜನರು ತಾವು ತೆಗೆದುಕೊಂಡು ಹೋಗಿರುವ ವಸ್ತುಗಳನ್ನು ಹಿಂಪಡೆಯಲು ಹರಸಾಹಸಪಟ್ಟರು.
ವಾಶಿ ತಹಶಿಲ್ನ ತೆರ್ಕೆಡಾದ ಲಕ್ಷ್ಮಿ ಪಾರ್ದಿ ಪೆಡಿ ಬಳಿ ಸೋಲಾಪುರ-ರಂಗಾಬಾದ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ 3 ಗಂಟೆಯಲ್ಲಿ ಈ ಘಟನೆ ನಡೆದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ. ಇನ್ನೂ ಕೆಲವರು ಕಂಟೇನರ್ನ ಬಾಗಿಲು ತೆರೆಯಲು ಯತ್ನಿಸಿದರು. ಸ್ಥಳೀಯ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಜನರು ಕದ್ದೊಯ್ದಿರುವ ವಸ್ತುಗಳನ್ನು ಮರಳಿ ಪಡೆಯಲು ಯತ್ನಿಸಿದರು.
ಪೊಲೀಸರು ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿದರು. ಪೊಲೀಸರ ಮನವಿ ಬಳಿಕ ಕೆಲವು ಜನರು ಮಾತ್ರ ತಾವು ತೆಗೆದುಕೊಂಡು ಹೋಗಿದ್ದ ವಸ್ತುಗಳನ್ನು ವಾಪಸ್ ತಂದುಕೊಟ್ಟರು. ಆದರೆ ಇನ್ನೂ ಕೆಲವರು ತಂದುಕೊಡಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
Goods, including phones, computers, LEDs, worth over ₹ 70 lakh were looted allegedly by villagers and passersby after a container truck overturned Maharashtra's Osmanabad.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm