ಬ್ರೇಕಿಂಗ್ ನ್ಯೂಸ್
19-06-21 12:49 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 19: ಕಂಟೇನರ್ ಟ್ರಕ್ವೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಆದ ಘಟನೆ ಮಹಾರಾಷ್ಟ್ರದ ಉಸ್ಮಾನಾಬಾದ್ನಲ್ಲಿ ನಡೆದಿದೆ. ಅದರಲ್ಲಿದ್ದ ಸುಮಾರು 70 ಲಕ್ಷ ಮೌಲ್ಯದ ವಸ್ತುಗಳನ್ನು ಗ್ರಾಮಸ್ಥರು ಹಾಗೂ ದಾರಿಹೋಕರು ಲೂಟಿ ಹೊಡೆದಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.
ಪಲ್ಟಿಯಾದ ಟ್ರಕ್ ಮೊಬೈಲ್ ಫೋನ್ಗಳು, ಕಂಪ್ಯೂಟರ್ಗಳು, ಎಲ್ಇಡಿ ಟಿವಿಗಳು, ಬೊಂಬೆಗಳು ಹಾಗೂ ಎಲೆಕ್ಟ್ರಾನಿಕ್ ಉತ್ಪನ್ನಗಳನ್ನು ಸಾಗಿಸುತ್ತಿತ್ತು ಎಂದು ತಿಳಿದು ಬಂದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ.
ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಕೂಂಬಿಂಗ್ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಟ್ರಕ್ನಲ್ಲಿದ್ದ ಬೆಲೆಬಾಳುವ ವಸ್ತುಗಳನ್ನು ತೆಗೆದುಕೊಂಡು ಹೋಗಿರುವ ಜನರು ವಾಪಸ್ ತಂದುಕೊಡಿ ಎಂದು ಹೇಳಿದ್ದರು. ಪೊಲೀಸ್ ತಂಡಗಳು ಅಕ್ಕ-ಪಕ್ಕದ ಪ್ರದೇಶಗಳಲ್ಲಿ ಬೀಡು ಬಿಟ್ಟಿದ್ದು, ಜನರು ತಾವು ತೆಗೆದುಕೊಂಡು ಹೋಗಿರುವ ವಸ್ತುಗಳನ್ನು ಹಿಂಪಡೆಯಲು ಹರಸಾಹಸಪಟ್ಟರು.




ವಾಶಿ ತಹಶಿಲ್ನ ತೆರ್ಕೆಡಾದ ಲಕ್ಷ್ಮಿ ಪಾರ್ದಿ ಪೆಡಿ ಬಳಿ ಸೋಲಾಪುರ-ರಂಗಾಬಾದ್ ಹೆದ್ದಾರಿಯಲ್ಲಿ ಶುಕ್ರವಾರ ಮುಂಜಾನೆ 3 ಗಂಟೆಯಲ್ಲಿ ಈ ಘಟನೆ ನಡೆದಿದೆ. ಟ್ರಕ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕೂಡಲೇ, ಅಲ್ಲಿಗೆ ಧಾವಿಸಿದ ಜನರು ಟ್ರಕ್ನಲ್ಲಿದ್ದ ಟಿವಿ, ಮೊಬೈಲ್, ಕಂಪ್ಯೂಟರ್ಗಳನ್ನು ಕದ್ದುಕೊಂಡು ಹೋಗಿದ್ದಾರೆ. ಇನ್ನೂ ಕೆಲವರು ಕಂಟೇನರ್ನ ಬಾಗಿಲು ತೆರೆಯಲು ಯತ್ನಿಸಿದರು. ಸ್ಥಳೀಯ ಪೊಲೀಸ್ ತಂಡ ಸ್ಥಳಕ್ಕೆ ಧಾವಿಸಿ ಜನರು ಕದ್ದೊಯ್ದಿರುವ ವಸ್ತುಗಳನ್ನು ಮರಳಿ ಪಡೆಯಲು ಯತ್ನಿಸಿದರು.
ಪೊಲೀಸರು ಕೂಂಬಿಂಗ್ ಕಾರ್ಯಾಚರಣೆಯನ್ನು ಆರಂಭಿಸಿದರು. ಪೊಲೀಸರ ಮನವಿ ಬಳಿಕ ಕೆಲವು ಜನರು ಮಾತ್ರ ತಾವು ತೆಗೆದುಕೊಂಡು ಹೋಗಿದ್ದ ವಸ್ತುಗಳನ್ನು ವಾಪಸ್ ತಂದುಕೊಟ್ಟರು. ಆದರೆ ಇನ್ನೂ ಕೆಲವರು ತಂದುಕೊಡಲಿಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
Goods, including phones, computers, LEDs, worth over ₹ 70 lakh were looted allegedly by villagers and passersby after a container truck overturned Maharashtra's Osmanabad.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm