ಬ್ರೇಕಿಂಗ್ ನ್ಯೂಸ್
31-08-20 06:15 pm Headline Karnataka News Network ದೇಶ - ವಿದೇಶ
ದೆಹಲಿ, ಆಗಸ್ಟ್ 31: ಕಳೆದ ಹಲವು ದಿನಗಳಿಂದ ತೀವ್ರ ಅನಾರೋಗ್ಯ ಸಮಸ್ಯೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ರಾಷ್ಟ್ರಪತಿ, ರಾಜಕೀಯ ಧುರೀಣ ಪ್ರಣಬ್ ಮುಖರ್ಜಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ 84 ವರ್ಷದ ಪ್ರಣಬ್ ಮುಖರ್ಜಿ ಅವರನ್ನು ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ (ಆರ್ ಅಂಡ್ ಆರ್) ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಅಲ್ಲದೆ, ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿ ಸಮಸ್ಯೆ ಉದ್ಭವವಾಗಿತ್ತು. ಹೀಗಾಗಿ ಪ್ರಣಬ್ ಅವರಿಗೆ ತುರ್ತಾಗಿ ಮಿದುಳು ಚಿಕಿತ್ಸೆಯನ್ನು ಮಾಡಲಾಗಿತ್ತು.
ಆದರೆ, ಮಿದುಳು ಶಸ್ತ್ರ ಚಿಕಿತ್ಸೆ ಮಾಡುವ ಮುನ್ನ ನಡೆಸಲಾಗಿದ್ದ ಕೊರೋನಾ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಬಂದಿತ್ತು. ಆದರೂ ಮಿದುಳು ಶಸ್ತ್ರ ಚಿಕಿತ್ಸೆಯನ್ನು ಮುಗಿಸಿ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ (ವೆಂಟಿಲೇಟರ್ ಸಪೋರ್ಟ್) ಮಾಡುವ ಮೂಲಕ ತೀವ್ರ ನಿಗಾ ವಹಿಸಲಾಗಿತ್ತು. ಈ ವೇಳೆ ಅವರು ಶಾಶ್ವತ ಕೋಮಾಕ್ಕೆ ಜಾರಿದ್ದರು.
ಬಂಗಾಳದಲ್ಲಿ 1935, ಡಿಸೆಂಬರ್ 11ರಂದು ಜನಿಸಿದ ಪ್ರಣಬ್ ಮುಖರ್ಜಿ ಕಾಂಗ್ರೆಸ್ ಮೂಲಕ ರಾಜಕೀಯ ಜೀವನ ಪ್ರಾರಂಭಿಸಿದರು. 2012ರಿಂದ 2017ರವರೆಗೆ ಭಾರತದ 13ನೇ ರಾಷ್ಟ್ರಪತಿಯಾಗಿ ಅತ್ಯುನ್ನತ ಹುದ್ದೆ ಅಲಂಕರಿಸಿದ್ದಾರೆ. ರಾಷ್ಟ್ರಪತಿಗಳಾಗುವ ಮುನ್ನ ಅವರು ವಿದೇಶಾಂಗ ಸಚಿವ, ರಕ್ಷಣಾ ಸಚಿವ ಮತ್ತು ಹಣಕಾಸು ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಅಪಾರ ರಾಜಕೀಯ ಅನುಭವ ಹೊಂದಿರುವ ಅವರು ರಾಷ್ಟ್ರಪತಿ ಅಧಿಕಾರ ಪೂರ್ಣಗೊಂಡ ಬಳಿಕ ಸಕ್ರಿಯ ರಾಜಕಾರಣದಿಂದ ದೂರವೇ ಉಳಿದಿದ್ದರು.
India grieves the passing away of Bharat Ratna Shri Pranab Mukherjee. He has left an indelible mark on the development trajectory of our nation. A scholar par excellence, a towering statesman, he was admired across the political spectrum and by all sections of society. pic.twitter.com/gz6rwQbxi6
— Narendra Modi (@narendramodi) August 31, 2020
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm