ಬ್ರೇಕಿಂಗ್ ನ್ಯೂಸ್
21-06-21 04:07 pm Headline Karnataka News Network ದೇಶ - ವಿದೇಶ
Photo credits : Representational Image
ಚೆನ್ನೈ, ಜೂನ್ 21: ತಮಿಳುನಾಡಿನಲ್ಲಿ ಪಟಾಕಿ ಸ್ಪೋಟಗೊಂಡಿದ್ದು, ಘಟನೆಯಲ್ಲಿ ಐದು ವರ್ಷದ ಮಗು ಸೇರಿ 3 ಮಂದಿ ಮೃತಪಟ್ಟಿರುವ ಘಟನೆ ನಡೆಸಿದೆ.
ತಮಿಳುನಾಡಿನ ಸತ್ತೂರು ಜಿಲ್ಲೆಯ ಥಾಯಿಲ್ ಪಟ್ಟಿಯ ಕಲೈನರ್ ಕಾಲನಿಯಲ್ಲಿರುವ ಮನೆಯಲ್ಲಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಪರಿಣಾಮ ಮನೆಯಲ್ಲಿದ್ದ 5 ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಇದೊಂದು ಅಕ್ರಮ ಪಟಾಕಿ ತಯಾರಿಕಾ ಘಟಕವಾಗಿದ್ದು, ಮನೆಯಲ್ಲೇ ಪಟಾಕಿ ತಯಾರಿಸಲಾಗುತ್ತಿತ್ತು. ಈ ವೇಳೆ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ಮೃತರನ್ನು 35 ವರ್ಷದ ಸೆಲ್ವಂಮಣಿ, ಅವರ 5 ವರ್ಷದ ಪುತ್ರ ಹಾಗೂ 35 ವರ್ಷದ ಕರ್ಪಾಗಂ ಎಂದು ಗುರುತಿಸಲಾಗಿದೆ. ಅಂತೆಯೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರ್ಯ ಮತ್ತು ಪ್ರಭಾಕರ್ ಅವರನ್ನು ಸಮೀಪದ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿವೆ. ಸ್ಫೋಟದ ತೀವ್ರತೆಯಿಂದಾಗಿ ಇಡೀ ಮನೆ ಜಖಂಗೊಂಡಿದೆ. 2020ರಲ್ಲಿ ಪಟಾಕಿ ಸ್ಫೋಟ ಸಂಭವಿಸಿ 8 ಮಂದಿ ಮೃತಪಟ್ಟಿದ್ದರು. ತಮಿಳುನಾಡಿನ ಪಟಾಕಿ ತಯಾರಿಕಾ ಘಟಕ ಹೊತ್ತಿ ಉರಿದಿದ್ದು 8 ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದರು.
ಚಿಪ್ಪಿಪ್ಪಾರೈ ನಲ್ಲಿ ಘಟನೆ ನಡೆದಿದೆ. ಇದು ಈ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಸಂಭವಿಸಿದ ಎರಡನೇ ಸ್ಫೋಟ ಪ್ರಕರಣವಾಗಿದೆ. ಕಕ್ಕಿವಾದಂಪಟ್ಟಿ ಬಳಿ ಸಂಭವಿಸಿದ್ದ ಮೊದಲ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು.
In Tamil Nadu two women and a child, were killed in a firecracker factory explosion. Two people were injured in the accident at the illegal firecracker factory near Sivakasi in Tamil Nadu's Virudhunagar district.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
25-07-26 07:34 pm
HK News Staffer
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
ಮತ್ತೆ ಪ್ರತಿಭಟನೆಗೆ ಬಂದ್ರೆ ಜೇಬಿನಲ್ಲಿ 50 ಗ್ರಾಂ ಡ...
23-07-26 06:26 pm
25-07-26 07:32 pm
HK News Staffer
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
ನೀಟ್ ಪರೀಕ್ಷೆ ; ಮಂಗಳೂರಿನಲ್ಲೂ ಮೊಳಗಿದ ವಿದ್ಯಾರ್ಥಿ...
24-07-26 10:37 pm
Surathkal Brdige, Thokottu, Mangalore: ಸುರತ್ಕ...
23-07-26 10:27 pm
25-07-26 07:36 pm
HK News Staffer
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm
Astra Group Fraud, Lanchu Lal, Mangalore: ‘ಅಸ...
24-07-26 05:30 pm