ಬ್ರೇಕಿಂಗ್ ನ್ಯೂಸ್
21-06-21 04:07 pm Headline Karnataka News Network ದೇಶ - ವಿದೇಶ
Photo credits : Representational Image
ಚೆನ್ನೈ, ಜೂನ್ 21: ತಮಿಳುನಾಡಿನಲ್ಲಿ ಪಟಾಕಿ ಸ್ಪೋಟಗೊಂಡಿದ್ದು, ಘಟನೆಯಲ್ಲಿ ಐದು ವರ್ಷದ ಮಗು ಸೇರಿ 3 ಮಂದಿ ಮೃತಪಟ್ಟಿರುವ ಘಟನೆ ನಡೆಸಿದೆ.
ತಮಿಳುನಾಡಿನ ಸತ್ತೂರು ಜಿಲ್ಲೆಯ ಥಾಯಿಲ್ ಪಟ್ಟಿಯ ಕಲೈನರ್ ಕಾಲನಿಯಲ್ಲಿರುವ ಮನೆಯಲ್ಲಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಪರಿಣಾಮ ಮನೆಯಲ್ಲಿದ್ದ 5 ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಇದೊಂದು ಅಕ್ರಮ ಪಟಾಕಿ ತಯಾರಿಕಾ ಘಟಕವಾಗಿದ್ದು, ಮನೆಯಲ್ಲೇ ಪಟಾಕಿ ತಯಾರಿಸಲಾಗುತ್ತಿತ್ತು. ಈ ವೇಳೆ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ಮೃತರನ್ನು 35 ವರ್ಷದ ಸೆಲ್ವಂಮಣಿ, ಅವರ 5 ವರ್ಷದ ಪುತ್ರ ಹಾಗೂ 35 ವರ್ಷದ ಕರ್ಪಾಗಂ ಎಂದು ಗುರುತಿಸಲಾಗಿದೆ. ಅಂತೆಯೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರ್ಯ ಮತ್ತು ಪ್ರಭಾಕರ್ ಅವರನ್ನು ಸಮೀಪದ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿವೆ. ಸ್ಫೋಟದ ತೀವ್ರತೆಯಿಂದಾಗಿ ಇಡೀ ಮನೆ ಜಖಂಗೊಂಡಿದೆ. 2020ರಲ್ಲಿ ಪಟಾಕಿ ಸ್ಫೋಟ ಸಂಭವಿಸಿ 8 ಮಂದಿ ಮೃತಪಟ್ಟಿದ್ದರು. ತಮಿಳುನಾಡಿನ ಪಟಾಕಿ ತಯಾರಿಕಾ ಘಟಕ ಹೊತ್ತಿ ಉರಿದಿದ್ದು 8 ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದರು.
ಚಿಪ್ಪಿಪ್ಪಾರೈ ನಲ್ಲಿ ಘಟನೆ ನಡೆದಿದೆ. ಇದು ಈ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಸಂಭವಿಸಿದ ಎರಡನೇ ಸ್ಫೋಟ ಪ್ರಕರಣವಾಗಿದೆ. ಕಕ್ಕಿವಾದಂಪಟ್ಟಿ ಬಳಿ ಸಂಭವಿಸಿದ್ದ ಮೊದಲ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು.
In Tamil Nadu two women and a child, were killed in a firecracker factory explosion. Two people were injured in the accident at the illegal firecracker factory near Sivakasi in Tamil Nadu's Virudhunagar district.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm