ಬ್ರೇಕಿಂಗ್ ನ್ಯೂಸ್
21-06-21 04:07 pm Headline Karnataka News Network ದೇಶ - ವಿದೇಶ
Photo credits : Representational Image
ಚೆನ್ನೈ, ಜೂನ್ 21: ತಮಿಳುನಾಡಿನಲ್ಲಿ ಪಟಾಕಿ ಸ್ಪೋಟಗೊಂಡಿದ್ದು, ಘಟನೆಯಲ್ಲಿ ಐದು ವರ್ಷದ ಮಗು ಸೇರಿ 3 ಮಂದಿ ಮೃತಪಟ್ಟಿರುವ ಘಟನೆ ನಡೆಸಿದೆ.
ತಮಿಳುನಾಡಿನ ಸತ್ತೂರು ಜಿಲ್ಲೆಯ ಥಾಯಿಲ್ ಪಟ್ಟಿಯ ಕಲೈನರ್ ಕಾಲನಿಯಲ್ಲಿರುವ ಮನೆಯಲ್ಲಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಪರಿಣಾಮ ಮನೆಯಲ್ಲಿದ್ದ 5 ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಇದೊಂದು ಅಕ್ರಮ ಪಟಾಕಿ ತಯಾರಿಕಾ ಘಟಕವಾಗಿದ್ದು, ಮನೆಯಲ್ಲೇ ಪಟಾಕಿ ತಯಾರಿಸಲಾಗುತ್ತಿತ್ತು. ಈ ವೇಳೆ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ಮೃತರನ್ನು 35 ವರ್ಷದ ಸೆಲ್ವಂಮಣಿ, ಅವರ 5 ವರ್ಷದ ಪುತ್ರ ಹಾಗೂ 35 ವರ್ಷದ ಕರ್ಪಾಗಂ ಎಂದು ಗುರುತಿಸಲಾಗಿದೆ. ಅಂತೆಯೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರ್ಯ ಮತ್ತು ಪ್ರಭಾಕರ್ ಅವರನ್ನು ಸಮೀಪದ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿವೆ. ಸ್ಫೋಟದ ತೀವ್ರತೆಯಿಂದಾಗಿ ಇಡೀ ಮನೆ ಜಖಂಗೊಂಡಿದೆ. 2020ರಲ್ಲಿ ಪಟಾಕಿ ಸ್ಫೋಟ ಸಂಭವಿಸಿ 8 ಮಂದಿ ಮೃತಪಟ್ಟಿದ್ದರು. ತಮಿಳುನಾಡಿನ ಪಟಾಕಿ ತಯಾರಿಕಾ ಘಟಕ ಹೊತ್ತಿ ಉರಿದಿದ್ದು 8 ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದರು.
ಚಿಪ್ಪಿಪ್ಪಾರೈ ನಲ್ಲಿ ಘಟನೆ ನಡೆದಿದೆ. ಇದು ಈ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಸಂಭವಿಸಿದ ಎರಡನೇ ಸ್ಫೋಟ ಪ್ರಕರಣವಾಗಿದೆ. ಕಕ್ಕಿವಾದಂಪಟ್ಟಿ ಬಳಿ ಸಂಭವಿಸಿದ್ದ ಮೊದಲ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು.
In Tamil Nadu two women and a child, were killed in a firecracker factory explosion. Two people were injured in the accident at the illegal firecracker factory near Sivakasi in Tamil Nadu's Virudhunagar district.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm