ಬ್ರೇಕಿಂಗ್ ನ್ಯೂಸ್
21-06-21 04:07 pm Headline Karnataka News Network ದೇಶ - ವಿದೇಶ
Photo credits : Representational Image
ಚೆನ್ನೈ, ಜೂನ್ 21: ತಮಿಳುನಾಡಿನಲ್ಲಿ ಪಟಾಕಿ ಸ್ಪೋಟಗೊಂಡಿದ್ದು, ಘಟನೆಯಲ್ಲಿ ಐದು ವರ್ಷದ ಮಗು ಸೇರಿ 3 ಮಂದಿ ಮೃತಪಟ್ಟಿರುವ ಘಟನೆ ನಡೆಸಿದೆ.
ತಮಿಳುನಾಡಿನ ಸತ್ತೂರು ಜಿಲ್ಲೆಯ ಥಾಯಿಲ್ ಪಟ್ಟಿಯ ಕಲೈನರ್ ಕಾಲನಿಯಲ್ಲಿರುವ ಮನೆಯಲ್ಲಿ ಪಟಾಕಿ ತಯಾರಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಪರಿಣಾಮ ಮನೆಯಲ್ಲಿದ್ದ 5 ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದು, ಇದೊಂದು ಅಕ್ರಮ ಪಟಾಕಿ ತಯಾರಿಕಾ ಘಟಕವಾಗಿದ್ದು, ಮನೆಯಲ್ಲೇ ಪಟಾಕಿ ತಯಾರಿಸಲಾಗುತ್ತಿತ್ತು. ಈ ವೇಳೆ ಸಂಭವಿಸಿದ ಸ್ಫೋಟದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದೇವೆ ಎಂದು ಹೇಳಿದ್ದಾರೆ.
ಮೃತರನ್ನು 35 ವರ್ಷದ ಸೆಲ್ವಂಮಣಿ, ಅವರ 5 ವರ್ಷದ ಪುತ್ರ ಹಾಗೂ 35 ವರ್ಷದ ಕರ್ಪಾಗಂ ಎಂದು ಗುರುತಿಸಲಾಗಿದೆ. ಅಂತೆಯೇ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸೂರ್ಯ ಮತ್ತು ಪ್ರಭಾಕರ್ ಅವರನ್ನು ಸಮೀಪದ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಸ್ಫೋಟದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಮೂರು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿವೆ. ಸ್ಫೋಟದ ತೀವ್ರತೆಯಿಂದಾಗಿ ಇಡೀ ಮನೆ ಜಖಂಗೊಂಡಿದೆ. 2020ರಲ್ಲಿ ಪಟಾಕಿ ಸ್ಫೋಟ ಸಂಭವಿಸಿ 8 ಮಂದಿ ಮೃತಪಟ್ಟಿದ್ದರು. ತಮಿಳುನಾಡಿನ ಪಟಾಕಿ ತಯಾರಿಕಾ ಘಟಕ ಹೊತ್ತಿ ಉರಿದಿದ್ದು 8 ಮಂದಿ ಮೃತಪಟ್ಟಿದ್ದು, 10 ಮಂದಿ ಗಾಯಗೊಂಡಿದ್ದರು.
ಚಿಪ್ಪಿಪ್ಪಾರೈ ನಲ್ಲಿ ಘಟನೆ ನಡೆದಿದೆ. ಇದು ಈ ಜಿಲ್ಲೆಯಲ್ಲಿ ಈ ತಿಂಗಳಲ್ಲಿ ಸಂಭವಿಸಿದ ಎರಡನೇ ಸ್ಫೋಟ ಪ್ರಕರಣವಾಗಿದೆ. ಕಕ್ಕಿವಾದಂಪಟ್ಟಿ ಬಳಿ ಸಂಭವಿಸಿದ್ದ ಮೊದಲ ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದರು.
In Tamil Nadu two women and a child, were killed in a firecracker factory explosion. Two people were injured in the accident at the illegal firecracker factory near Sivakasi in Tamil Nadu's Virudhunagar district.
25-04-25 06:30 pm
Bangalore Correspondent
Pahalgam Attack, Shivamogga, Manjunath: ಉಗ್ರರ...
24-04-25 10:13 pm
Terror Attack, Bharat Bhushan wife: "ಸಣ್ಣ ಮಗು...
24-04-25 06:39 pm
Kalaburagi Accident: ಕಲಬುರಗಿ; ನಾಯಿಯ ಪ್ರಾಣ ಕಾಪ...
24-04-25 04:56 pm
CM Siddaramaiah, DK Shivakumar, Threat Mail:...
23-04-25 10:49 pm
25-04-25 06:37 pm
HK News Desk
ಪಹಲ್ಗಾಮ್ ದುಷ್ಕೃತ್ಯ ; ಐದು ವರ್ಷ ಕಾಲ ಪಾಕಿನಲ್ಲಿದ್...
25-04-25 02:54 pm
BSF jawan, Pakistan: ಗಡಿಯಲ್ಲಿ ಬಿಕ್ಕಟ್ಟು ; ಪಾಕ...
25-04-25 01:16 pm
Melted plastic, Kollam, Hazard: ವಲಸೆ ಕಾರ್ಮಿಕರ...
24-04-25 09:00 pm
ಭಯೋತ್ಪಾದನೆ ಕ್ಯಾನ್ಸರ್ ಇದ್ದಂತೆ, ಇಸ್ಲಾಮಿಗೆ ವಿರುದ...
24-04-25 04:59 pm
24-04-25 11:08 pm
Mangalore Correspondent
Pahalgam terror attack, udupi Vishwaprasanna...
23-04-25 10:23 pm
ಜಾತ್ಯತೀತರು ಉಗ್ರರಿಗೆ ಧರ್ಮ ಇಲ್ಲ ಎನ್ನುತ್ತಿದ್ದರು,...
23-04-25 09:45 pm
Terror Attack, Mangalore Mp, Brijesh Chowta:...
23-04-25 09:36 pm
Bearys Group, Bearys Turning Point mall, Dera...
23-04-25 09:23 pm
24-04-25 12:58 pm
Mangaluru Correspondent
Ullal Gang Rape, Mangalore, Police: ಗ್ಯಾಂಗ್ ರ...
23-04-25 01:03 pm
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm