ಬ್ರೇಕಿಂಗ್ ನ್ಯೂಸ್
01-09-20 09:20 am Dhruthi Anchan - Correspondent ದೇಶ - ವಿದೇಶ
ಹೊಸದಿಲ್ಲಿ, ಸೆಪ್ಟೆಂಬರ್.1: ನಿರೀಕ್ಷೆಯಂತೆ ಐತಿಹಾಸಿಕ ಆರ್ಥಿಕ ಕುಸಿತಕ್ಕೆ ಭಾರತ ಸಾಕ್ಷಿಯಾಗಿದ್ದು ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಜಿಡಿಪಿ ಶೇ. 23.9ರಷ್ಟು ಭಾರಿ ಕುಸಿತ ಕಂಡಿದೆ. ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ. 3.1ರಷ್ಟು ಬೆಳವಣಿಗೆ ದರ ದಾಖಲಾಗಿತ್ತು.
ಇದು 2020-21ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕವಾದ ಏಪ್ರಿಲ್-ಜೂನ್ ತಿಂಗಳ ಅವಧಿಯಲ್ಲಿ ಉಂಟಾದ ಕುಸಿತವಾಗಿದೆ. 2019-20ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ದೇಶದ ಜಿಡಿಪಿಯ ಗಾತ್ರ 35.25 ಲಕ್ಷ ಕೋಟಿ ರು. ಇತ್ತು.2020-21ನೇ ಸಾಲಿನ ಮೊದಲ ತ್ರೈಮಾಸಿಕದಲ್ಲಿ ಅದು 26.90 ಲಕ್ಷ ಕೋಟಿ ರು.ಗೆ ಕುಸಿತವಾಗಿದೆ. ಹೀಗಾಗಿ ಈ ತ್ರೈಮಾಸಿಕ ಅವಧಿಯಲ್ಲಿ ಶೇ.23.9ರಷ್ಟು ಇಳಿಕೆ ಕಂಡಿದೆ.
ದೇಶದಲ್ಲಿ ಈ ಆರ್ಥಿಕ ವರ್ಷದ ಮೊದಲ ತ್ರೈಮಾಸಿಕದಲ್ಲಿ ಶೇ.3.4ರಷ್ಟುಬೆಳವಣಿಗೆ ಕಂಡ ಏಕೈಕ ಕ್ಷೇತ್ರವೆಂದರೆ ಅದು ಕೃಷಿ. ಕಳೆದ ವರ್ಷದ ಈ ಅವಧಿಯಲ್ಲಿ ಕೃಷಿ ಕ್ಷೇತ್ರ ಶೇ.3ರಷ್ಟು ಬೆಳವಣಿಗೆ ಸಾಧಿಸಿತ್ತು. ಈ ವರ್ಷದ ಮೊದಲ ತ್ರೈಮಾಸಿಕದಲ್ಲಿ ಅದು ಶೇ.0.4ರಷ್ಟು ಹೆಚ್ಚು ಬೆಳವಣಿಗೆ ಕಂಡಿದೆ.
ಸೋಮವಾರ ಭಾರತೀಯ ಸಂಖ್ಯಾ ಶಾಸ್ತ್ರೀಯ ಕಚೇರಿ ಈ ಮಾಹಿತಿ ಬಿಡುಗಡೆ ಮಾಡಿದ್ದು, 1996ರಲ್ಲಿ ತ್ರೈಮಾಸಿಕ ಜಿಡಿಪಿ ವರದಿ ಬಿಡುಗಡೆ ಮಾಡುವ ಸಂಪ್ರದಾಯ ಆರಂಭವಾದ ನಂತರ ಇಲ್ಲಿಯವರೆಗೆ ಈ ಪ್ರಮಾಣದ ಆರ್ಥಿಕ ಕುಸಿತ ದಾಖಲಾಗಿರಲಿಲ್ಲ.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm