ಬ್ರೇಕಿಂಗ್ ನ್ಯೂಸ್
23-06-21 04:19 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 23: ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದು ದೇಶ ಬಿಟ್ಟು ಓಡಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರಿಗೆ ಸೇರಿದ ವಿವಿಧ ಕಡೆ ಇರುವ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದೆ. ಈಗಾಗ್ಲೇ 18,170 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದ್ದು, ಒಟ್ಟು ಸಾಲ ಬಾಬ್ತು ಮೌಲ್ಯದ 80 ಶೇಕಡಾ ಆಸ್ತಿಯನ್ನು ಜಪ್ತಿ ಮಾಡಿದಂತಾಗಿದೆ. ಇದರ ಭಾಗವಾಗಿ ಜಪ್ತಿ ಮಾಡಿರುವ ಆಸ್ತಿಯ ಒಟ್ಟು ಮೌಲ್ಯದ ಅರ್ಧದಷ್ಟನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿವಿಧ ಬ್ಯಾಂಕುಗಳಿಗೆ ಮರು ಪಾವತಿ ಮಾಡಿದ್ದಾರೆ.
ಸಾಲ ಬಾಕಿ ಉಳಿಸಿಕೊಂಡಿರುವ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಮತ್ತು ಕೇಂದ್ರ ಸರಕಾರಕ್ಕೆ 9317 ಕೋಟಿ ರೂಪಾಯಿ ಮೊತ್ತವನ್ನು ಜಮಾ ಮಾಡಿದ್ದೇವೆ ಎಂದು ಇಡಿ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ನೀರವ್ ಮೋದಿ, ವಿಜಯ್ ಮಲ್ಯ ಮತ್ತು ಮೆಹುಲ್ ಚೋಕ್ಸಿ ಪ್ರತ್ಯೇಕವಾಗಿ ಒಟ್ಟು 22,585 ಕೋಟಿ ರೂ. ಸಾಲವನ್ನು ವಿವಿಧ ಬ್ಯಾಂಕುಗಳಿಂದ ಪಡೆದಿದ್ದು ಆಬಳಿಕ ಪಾವತಿಸದೆ ಮೋಸ ಮಾಡಿದ್ದರು. ಈ ಪೈಕಿ 18 ಸಾವಿರ ಕೋಟಿಯಷ್ಟು ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ದೇಶದ ವಿವಿಧ ಕಡೆಗಳಿಂದ ವಶಕ್ಕೆ ಪಡೆದಿದ್ದಾರೆ.
ನ್ಯಾಯಾಲಯದ ಆದೇಶ ಪ್ರಕಾರ, ಇಂದಿನ ವರೆಗೆ 8441 ಕೋಟಿ ರೂ. ಮೊತ್ತದ ಆಸ್ತಿಯನ್ನು ಬ್ಯಾಂಕುಗಳಿಗೆ ವರ್ಗಾಯಿಸಲಾಗಿದೆ. ಅಲ್ಲದೆ, ಜೂನ್ 25ರ ಒಳಗೆ ಮತ್ತೆ ರೂ. 800 ಕೋಟಿ ಮೊತ್ತವನ್ನು ವರ್ಗಾವಣೆ ಮಾಡುತ್ತೇವೆ. ಇದೇ ವೇಳೆ, ಷೇರು ಮೌಲ್ಯದ ಆಸ್ತಿಯನ್ನೂ ಸೇಲ್ ಮಾಡಿ ಮತ್ತೆ 800 ರೂ. ಮೊತ್ತವನ್ನು ಬ್ಯಾಂಕಿಗೆ ವರ್ಗಾಯಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ಸ್ಪೆಷಲ್ ಕೋರ್ಟ್ ಆದೇಶದಂತೆ, ಸಾಲ ವಸೂಲಾತಿ ಪ್ರಾಧಿಕಾರವು ಈಗಾಗ್ಲೇ ಉದ್ಯಮಿ ವಿಜಯ್ ಮಲ್ಯಗೆ ಸೇರಿದ 5800 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದು, ಅದರಿಂದ ಬಂದ ಹಣವನ್ನು ಇಡಿಗೆ ವರ್ಗಾಯಿಸಿತ್ತು. ಇಡಿ ಅಧಿಕಾರಿಗಳು ಅದನ್ನೀಗ ಆಯಾ ಬ್ಯಾಂಕುಗಳಿಗೆ ಮರು ಪಾವತಿ ಮಾಡುತ್ತಿದ್ದಾರೆ.
Assets worth ₹ 9,371 crores belonging to fugitive businessmen Vijay Mallya, Nirav Modi, Mehul Choksi have been transferred by the Enforcement Directorate to state-run banks that will help them recover losses on account of the fraud.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm