ಬ್ರೇಕಿಂಗ್ ನ್ಯೂಸ್
23-06-21 04:19 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 23: ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದು ದೇಶ ಬಿಟ್ಟು ಓಡಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರಿಗೆ ಸೇರಿದ ವಿವಿಧ ಕಡೆ ಇರುವ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದೆ. ಈಗಾಗ್ಲೇ 18,170 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದ್ದು, ಒಟ್ಟು ಸಾಲ ಬಾಬ್ತು ಮೌಲ್ಯದ 80 ಶೇಕಡಾ ಆಸ್ತಿಯನ್ನು ಜಪ್ತಿ ಮಾಡಿದಂತಾಗಿದೆ. ಇದರ ಭಾಗವಾಗಿ ಜಪ್ತಿ ಮಾಡಿರುವ ಆಸ್ತಿಯ ಒಟ್ಟು ಮೌಲ್ಯದ ಅರ್ಧದಷ್ಟನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿವಿಧ ಬ್ಯಾಂಕುಗಳಿಗೆ ಮರು ಪಾವತಿ ಮಾಡಿದ್ದಾರೆ.
ಸಾಲ ಬಾಕಿ ಉಳಿಸಿಕೊಂಡಿರುವ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಮತ್ತು ಕೇಂದ್ರ ಸರಕಾರಕ್ಕೆ 9317 ಕೋಟಿ ರೂಪಾಯಿ ಮೊತ್ತವನ್ನು ಜಮಾ ಮಾಡಿದ್ದೇವೆ ಎಂದು ಇಡಿ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ನೀರವ್ ಮೋದಿ, ವಿಜಯ್ ಮಲ್ಯ ಮತ್ತು ಮೆಹುಲ್ ಚೋಕ್ಸಿ ಪ್ರತ್ಯೇಕವಾಗಿ ಒಟ್ಟು 22,585 ಕೋಟಿ ರೂ. ಸಾಲವನ್ನು ವಿವಿಧ ಬ್ಯಾಂಕುಗಳಿಂದ ಪಡೆದಿದ್ದು ಆಬಳಿಕ ಪಾವತಿಸದೆ ಮೋಸ ಮಾಡಿದ್ದರು. ಈ ಪೈಕಿ 18 ಸಾವಿರ ಕೋಟಿಯಷ್ಟು ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ದೇಶದ ವಿವಿಧ ಕಡೆಗಳಿಂದ ವಶಕ್ಕೆ ಪಡೆದಿದ್ದಾರೆ.


ನ್ಯಾಯಾಲಯದ ಆದೇಶ ಪ್ರಕಾರ, ಇಂದಿನ ವರೆಗೆ 8441 ಕೋಟಿ ರೂ. ಮೊತ್ತದ ಆಸ್ತಿಯನ್ನು ಬ್ಯಾಂಕುಗಳಿಗೆ ವರ್ಗಾಯಿಸಲಾಗಿದೆ. ಅಲ್ಲದೆ, ಜೂನ್ 25ರ ಒಳಗೆ ಮತ್ತೆ ರೂ. 800 ಕೋಟಿ ಮೊತ್ತವನ್ನು ವರ್ಗಾವಣೆ ಮಾಡುತ್ತೇವೆ. ಇದೇ ವೇಳೆ, ಷೇರು ಮೌಲ್ಯದ ಆಸ್ತಿಯನ್ನೂ ಸೇಲ್ ಮಾಡಿ ಮತ್ತೆ 800 ರೂ. ಮೊತ್ತವನ್ನು ಬ್ಯಾಂಕಿಗೆ ವರ್ಗಾಯಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ಸ್ಪೆಷಲ್ ಕೋರ್ಟ್ ಆದೇಶದಂತೆ, ಸಾಲ ವಸೂಲಾತಿ ಪ್ರಾಧಿಕಾರವು ಈಗಾಗ್ಲೇ ಉದ್ಯಮಿ ವಿಜಯ್ ಮಲ್ಯಗೆ ಸೇರಿದ 5800 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದು, ಅದರಿಂದ ಬಂದ ಹಣವನ್ನು ಇಡಿಗೆ ವರ್ಗಾಯಿಸಿತ್ತು. ಇಡಿ ಅಧಿಕಾರಿಗಳು ಅದನ್ನೀಗ ಆಯಾ ಬ್ಯಾಂಕುಗಳಿಗೆ ಮರು ಪಾವತಿ ಮಾಡುತ್ತಿದ್ದಾರೆ.
Assets worth ₹ 9,371 crores belonging to fugitive businessmen Vijay Mallya, Nirav Modi, Mehul Choksi have been transferred by the Enforcement Directorate to state-run banks that will help them recover losses on account of the fraud.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm