ಬ್ರೇಕಿಂಗ್ ನ್ಯೂಸ್
23-06-21 04:19 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 23: ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದು ದೇಶ ಬಿಟ್ಟು ಓಡಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರಿಗೆ ಸೇರಿದ ವಿವಿಧ ಕಡೆ ಇರುವ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದೆ. ಈಗಾಗ್ಲೇ 18,170 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದ್ದು, ಒಟ್ಟು ಸಾಲ ಬಾಬ್ತು ಮೌಲ್ಯದ 80 ಶೇಕಡಾ ಆಸ್ತಿಯನ್ನು ಜಪ್ತಿ ಮಾಡಿದಂತಾಗಿದೆ. ಇದರ ಭಾಗವಾಗಿ ಜಪ್ತಿ ಮಾಡಿರುವ ಆಸ್ತಿಯ ಒಟ್ಟು ಮೌಲ್ಯದ ಅರ್ಧದಷ್ಟನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿವಿಧ ಬ್ಯಾಂಕುಗಳಿಗೆ ಮರು ಪಾವತಿ ಮಾಡಿದ್ದಾರೆ.
ಸಾಲ ಬಾಕಿ ಉಳಿಸಿಕೊಂಡಿರುವ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಮತ್ತು ಕೇಂದ್ರ ಸರಕಾರಕ್ಕೆ 9317 ಕೋಟಿ ರೂಪಾಯಿ ಮೊತ್ತವನ್ನು ಜಮಾ ಮಾಡಿದ್ದೇವೆ ಎಂದು ಇಡಿ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ನೀರವ್ ಮೋದಿ, ವಿಜಯ್ ಮಲ್ಯ ಮತ್ತು ಮೆಹುಲ್ ಚೋಕ್ಸಿ ಪ್ರತ್ಯೇಕವಾಗಿ ಒಟ್ಟು 22,585 ಕೋಟಿ ರೂ. ಸಾಲವನ್ನು ವಿವಿಧ ಬ್ಯಾಂಕುಗಳಿಂದ ಪಡೆದಿದ್ದು ಆಬಳಿಕ ಪಾವತಿಸದೆ ಮೋಸ ಮಾಡಿದ್ದರು. ಈ ಪೈಕಿ 18 ಸಾವಿರ ಕೋಟಿಯಷ್ಟು ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ದೇಶದ ವಿವಿಧ ಕಡೆಗಳಿಂದ ವಶಕ್ಕೆ ಪಡೆದಿದ್ದಾರೆ.


ನ್ಯಾಯಾಲಯದ ಆದೇಶ ಪ್ರಕಾರ, ಇಂದಿನ ವರೆಗೆ 8441 ಕೋಟಿ ರೂ. ಮೊತ್ತದ ಆಸ್ತಿಯನ್ನು ಬ್ಯಾಂಕುಗಳಿಗೆ ವರ್ಗಾಯಿಸಲಾಗಿದೆ. ಅಲ್ಲದೆ, ಜೂನ್ 25ರ ಒಳಗೆ ಮತ್ತೆ ರೂ. 800 ಕೋಟಿ ಮೊತ್ತವನ್ನು ವರ್ಗಾವಣೆ ಮಾಡುತ್ತೇವೆ. ಇದೇ ವೇಳೆ, ಷೇರು ಮೌಲ್ಯದ ಆಸ್ತಿಯನ್ನೂ ಸೇಲ್ ಮಾಡಿ ಮತ್ತೆ 800 ರೂ. ಮೊತ್ತವನ್ನು ಬ್ಯಾಂಕಿಗೆ ವರ್ಗಾಯಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ಸ್ಪೆಷಲ್ ಕೋರ್ಟ್ ಆದೇಶದಂತೆ, ಸಾಲ ವಸೂಲಾತಿ ಪ್ರಾಧಿಕಾರವು ಈಗಾಗ್ಲೇ ಉದ್ಯಮಿ ವಿಜಯ್ ಮಲ್ಯಗೆ ಸೇರಿದ 5800 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದು, ಅದರಿಂದ ಬಂದ ಹಣವನ್ನು ಇಡಿಗೆ ವರ್ಗಾಯಿಸಿತ್ತು. ಇಡಿ ಅಧಿಕಾರಿಗಳು ಅದನ್ನೀಗ ಆಯಾ ಬ್ಯಾಂಕುಗಳಿಗೆ ಮರು ಪಾವತಿ ಮಾಡುತ್ತಿದ್ದಾರೆ.
Assets worth ₹ 9,371 crores belonging to fugitive businessmen Vijay Mallya, Nirav Modi, Mehul Choksi have been transferred by the Enforcement Directorate to state-run banks that will help them recover losses on account of the fraud.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm