ಬ್ರೇಕಿಂಗ್ ನ್ಯೂಸ್
23-06-21 04:19 pm Headline Karnataka News Network ದೇಶ - ವಿದೇಶ
ನವದೆಹಲಿ, ಜೂನ್ 23: ಸಾವಿರಾರು ಕೋಟಿ ರೂಪಾಯಿ ಸಾಲ ಪಡೆದು ದೇಶ ಬಿಟ್ಟು ಓಡಿರುವ ಉದ್ಯಮಿಗಳಾದ ವಿಜಯ್ ಮಲ್ಯ, ನೀರವ್ ಮೋದಿ ಮತ್ತು ಮೆಹುಲ್ ಚೋಕ್ಸಿಯವರಿಗೆ ಸೇರಿದ ವಿವಿಧ ಕಡೆ ಇರುವ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿದೆ. ಈಗಾಗ್ಲೇ 18,170 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಕ್ಕೆ ಪಡೆದಿದ್ದು, ಒಟ್ಟು ಸಾಲ ಬಾಬ್ತು ಮೌಲ್ಯದ 80 ಶೇಕಡಾ ಆಸ್ತಿಯನ್ನು ಜಪ್ತಿ ಮಾಡಿದಂತಾಗಿದೆ. ಇದರ ಭಾಗವಾಗಿ ಜಪ್ತಿ ಮಾಡಿರುವ ಆಸ್ತಿಯ ಒಟ್ಟು ಮೌಲ್ಯದ ಅರ್ಧದಷ್ಟನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿವಿಧ ಬ್ಯಾಂಕುಗಳಿಗೆ ಮರು ಪಾವತಿ ಮಾಡಿದ್ದಾರೆ.
ಸಾಲ ಬಾಕಿ ಉಳಿಸಿಕೊಂಡಿರುವ ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ಮತ್ತು ಕೇಂದ್ರ ಸರಕಾರಕ್ಕೆ 9317 ಕೋಟಿ ರೂಪಾಯಿ ಮೊತ್ತವನ್ನು ಜಮಾ ಮಾಡಿದ್ದೇವೆ ಎಂದು ಇಡಿ ಅಧಿಕಾರಿಗಳು ಹೇಳಿಕೆ ನೀಡಿದ್ದಾರೆ. ನೀರವ್ ಮೋದಿ, ವಿಜಯ್ ಮಲ್ಯ ಮತ್ತು ಮೆಹುಲ್ ಚೋಕ್ಸಿ ಪ್ರತ್ಯೇಕವಾಗಿ ಒಟ್ಟು 22,585 ಕೋಟಿ ರೂ. ಸಾಲವನ್ನು ವಿವಿಧ ಬ್ಯಾಂಕುಗಳಿಂದ ಪಡೆದಿದ್ದು ಆಬಳಿಕ ಪಾವತಿಸದೆ ಮೋಸ ಮಾಡಿದ್ದರು. ಈ ಪೈಕಿ 18 ಸಾವಿರ ಕೋಟಿಯಷ್ಟು ಮೌಲ್ಯದ ಆಸ್ತಿಯನ್ನು ಇಡಿ ಅಧಿಕಾರಿಗಳು ದೇಶದ ವಿವಿಧ ಕಡೆಗಳಿಂದ ವಶಕ್ಕೆ ಪಡೆದಿದ್ದಾರೆ.


ನ್ಯಾಯಾಲಯದ ಆದೇಶ ಪ್ರಕಾರ, ಇಂದಿನ ವರೆಗೆ 8441 ಕೋಟಿ ರೂ. ಮೊತ್ತದ ಆಸ್ತಿಯನ್ನು ಬ್ಯಾಂಕುಗಳಿಗೆ ವರ್ಗಾಯಿಸಲಾಗಿದೆ. ಅಲ್ಲದೆ, ಜೂನ್ 25ರ ಒಳಗೆ ಮತ್ತೆ ರೂ. 800 ಕೋಟಿ ಮೊತ್ತವನ್ನು ವರ್ಗಾವಣೆ ಮಾಡುತ್ತೇವೆ. ಇದೇ ವೇಳೆ, ಷೇರು ಮೌಲ್ಯದ ಆಸ್ತಿಯನ್ನೂ ಸೇಲ್ ಮಾಡಿ ಮತ್ತೆ 800 ರೂ. ಮೊತ್ತವನ್ನು ಬ್ಯಾಂಕಿಗೆ ವರ್ಗಾಯಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಮುಂಬೈ ಸ್ಪೆಷಲ್ ಕೋರ್ಟ್ ಆದೇಶದಂತೆ, ಸಾಲ ವಸೂಲಾತಿ ಪ್ರಾಧಿಕಾರವು ಈಗಾಗ್ಲೇ ಉದ್ಯಮಿ ವಿಜಯ್ ಮಲ್ಯಗೆ ಸೇರಿದ 5800 ಕೋಟಿ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದು, ಅದರಿಂದ ಬಂದ ಹಣವನ್ನು ಇಡಿಗೆ ವರ್ಗಾಯಿಸಿತ್ತು. ಇಡಿ ಅಧಿಕಾರಿಗಳು ಅದನ್ನೀಗ ಆಯಾ ಬ್ಯಾಂಕುಗಳಿಗೆ ಮರು ಪಾವತಿ ಮಾಡುತ್ತಿದ್ದಾರೆ.
Assets worth ₹ 9,371 crores belonging to fugitive businessmen Vijay Mallya, Nirav Modi, Mehul Choksi have been transferred by the Enforcement Directorate to state-run banks that will help them recover losses on account of the fraud.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm