ಬ್ರೇಕಿಂಗ್ ನ್ಯೂಸ್
24-06-21 11:51 am Headline Karnataka News Network ದೇಶ - ವಿದೇಶ
ಕೋವಿಡ್ ಆತಂಕದಿಂದ ಆಟೋ ಉದ್ಯಮವು ತೀವ್ರ ಹಿನ್ನಡೆ ಅನುಭವಿಸುತ್ತಿದ್ದು, ಹೊಸ ವಾಹನ ಮಾರಾಟದಲ್ಲಿ ಭಾರೀ ಪ್ರಮಾಣದ ಕುಸಿತ ಕಂಡಿದೆ. ಇದರ ನಡುವೆ ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ವಾಹನಗಳ ಮುಖ ಮಾಡುತ್ತಿದ್ದಾರೆ.
ಕರೋನಾ ವೈರಸ್ನಿಂದಾಗಿ ಪ್ರಮುಖ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಆಟೋ ಉದ್ಯಮವು ಕೂಡಾ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದೆ. ಲಾಕ್ಡೌನ್ ವಿನಾಯ್ತಿ ನಂತರ ಆಟೋ ಉತ್ಪಾದನಾ ಚಟುವಟಿಕೆಗಳಿಗೆ ಅವಕಾಶ ಸಿಕ್ಕಿದ್ದರೂ ಗ್ರಾಹಕರಿಲ್ಲದೆ ಹಲವು ಕಾರು ಮಾರಾಟ ಕಂಪನಿಗಳು ಕದಮುಚ್ಚುವ ಸ್ಥಿತಿಗೆ ತಲುಪಿವೆ.

ಸದ್ಯ ಕರೋನಾ ವೈರಸ್ 2ನೇ ಅಲೆಯ ಪರಿಣಾಮ ದೇಶದಲ್ಲಿ ಆಟೋ ಉದ್ಯಮವು ಮಂದಗತಿಯಲ್ಲಿ ಸಾಗಿದ್ದು, ಹೊಸ ವಾಹನ ಖರೀದಿ ಯೋಜನೆಯಲ್ಲಿದ್ದ ಹಲವು ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿಯತ್ತ ಮುಖ ಮಾಡುತ್ತಿದ್ದಾರೆ.
ಹೊಸ ವಾಹನಗಳ ಬೇಡಿಕೆಯಿಲ್ಲದಿರುವುದರಿಂದ ಹೊಸ ಅವಕಾಶವನ್ನು ಬಳಸಿಕೊಳ್ಳಲು ಮುಂದಾಗಿರುವ ಹಲವು ಆಟೋ ಕಂಪನಿಗಳು ಹೊಸ ವಾಹನಗಳ ಮಾರಾಟದ ಜೊತೆಗೆ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟದ ಉದ್ಯಮದ ಮೇಲೂ ಗಮನಹರಿಸುತ್ತಿವೆ.
ಸದ್ಯ ವೈರಸ್ ಭೀತಿ ನಡುವೆಯೂ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ವ್ಯಾಪಾರ ವಹಿವಾಟು ಕೈಗೊಂಡಿರುವ ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ವಾಹನ ಮಾರಾಟ ಪ್ರಮಾಣವನ್ನು ದಾಖಲಿಸಿದ್ದು, ಬಹುತೇಕ ಕಂಪನಿಗಳ ಕಾರು ಮಾರಾಟದಲ್ಲಿ ಶೇ. 40ರಿಂದ ಶೇ.60ರಷ್ಟು ಕುಸಿತ ಕಂಡುಬಂದಿದೆ.


ಹೊಸ ಕಾರುಗಳು ಮಾರಾಟವು ಕುಸಿದ ಬೆನ್ನಲ್ಲೇ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿ ಮತ್ತು ಮಾರಾಟ ಪ್ರಮಾಣವು ತೀವ್ರಗತಿಯಲ್ಲಿ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಪ್ರಮುಖ ಕಂಪನಿ ಸೆಕೆಂಡ್ ಹ್ಯಾಂಡ್ ಮಾರಾಟ ಮಳಿಗೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸುತ್ತಿವೆ.
ಅಸಂಘಟಿತವಾಗಿರುವ ಸ್ಥಳೀಯ ವ್ಯಾಪಾರಿಗಳ ಬಳಿ ಸೆಕೆಂಡ್ ಹ್ಯಾಂಡ್ ವಾಹನ ಖರೀದಿಯು ಕೆಲವು ಸಂದರ್ಭಗಳಲ್ಲಿ ಲಾಭಕ್ಕಿಂತ ಹೆಚ್ಚು ನಷ್ಟ ಅನುಭವಿಸಬೇಕಾದ ಸಂದರ್ಭಗಳು ಎದುರಾಗಬಹುದಾಗಿದ್ದು, ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳನ್ನು ಗ್ರಾಹಕರಿಗೆ ತಲುಪಿಸುವ ಯೋಜನೆಯಲ್ಲಿವೆ.

ಜೊತೆಗೆ ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆಗಳಲ್ಲಿ ಖರೀದಿಸುವ ವಾಹನಗಳಿಗೆ ಹೆಚ್ಚುವರಿಯಾಗಿ ವಾರಂಟಿ ಸಹ ದೊರೆಯಲಿದ್ದು, ಮೋಸ ವ್ಯವಹಾರಗಳಿಗೆ ಇಲ್ಲಿ ಅವಕಾಶವಿರುವುದಿಲ್ಲ.
ಈ ನಿಟ್ಟಿನಲ್ಲಿ ಮಹೀಂದ್ರಾ ಕಂಪನಿಯು ಫಸ್ಟ್ ಛಾಯ್ಸ್, ಮಾರುತಿ ಸುಜುಕಿ ಟ್ರೂ ವ್ಯಾಲ್ಯೂ ಸೇರಿದಂತೆ ಪ್ರಮುಖ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳು ಭಾರೀ ಪ್ರಮಾಣದ ವಹಿವಾಟು ನಡೆಸುವ ಯೋಜನೆಯಲ್ಲಿದ್ದು, ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಮಹಾನಗರಗಳಿಂತಲೂ ಹೆಚ್ಚು 2ನೇ ಮತ್ತು 3ನೇ ಹಂತದ ನಗರಗಳಲ್ಲಿ ಹೆಚ್ಚಿನ ಮಟ್ಟದ ಬೇಡಿಕೆ ಕಂಡುಬರುತ್ತಿದೆ.
Second-hand vehicle business on high speed in India amid Covid 19 pandemic
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm