ಬ್ರೇಕಿಂಗ್ ನ್ಯೂಸ್
24-06-21 11:51 am Headline Karnataka News Network ದೇಶ - ವಿದೇಶ
ಕೋವಿಡ್ ಆತಂಕದಿಂದ ಆಟೋ ಉದ್ಯಮವು ತೀವ್ರ ಹಿನ್ನಡೆ ಅನುಭವಿಸುತ್ತಿದ್ದು, ಹೊಸ ವಾಹನ ಮಾರಾಟದಲ್ಲಿ ಭಾರೀ ಪ್ರಮಾಣದ ಕುಸಿತ ಕಂಡಿದೆ. ಇದರ ನಡುವೆ ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ವಾಹನಗಳ ಮುಖ ಮಾಡುತ್ತಿದ್ದಾರೆ.
ಕರೋನಾ ವೈರಸ್ನಿಂದಾಗಿ ಪ್ರಮುಖ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಆಟೋ ಉದ್ಯಮವು ಕೂಡಾ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದೆ. ಲಾಕ್ಡೌನ್ ವಿನಾಯ್ತಿ ನಂತರ ಆಟೋ ಉತ್ಪಾದನಾ ಚಟುವಟಿಕೆಗಳಿಗೆ ಅವಕಾಶ ಸಿಕ್ಕಿದ್ದರೂ ಗ್ರಾಹಕರಿಲ್ಲದೆ ಹಲವು ಕಾರು ಮಾರಾಟ ಕಂಪನಿಗಳು ಕದಮುಚ್ಚುವ ಸ್ಥಿತಿಗೆ ತಲುಪಿವೆ.

ಸದ್ಯ ಕರೋನಾ ವೈರಸ್ 2ನೇ ಅಲೆಯ ಪರಿಣಾಮ ದೇಶದಲ್ಲಿ ಆಟೋ ಉದ್ಯಮವು ಮಂದಗತಿಯಲ್ಲಿ ಸಾಗಿದ್ದು, ಹೊಸ ವಾಹನ ಖರೀದಿ ಯೋಜನೆಯಲ್ಲಿದ್ದ ಹಲವು ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿಯತ್ತ ಮುಖ ಮಾಡುತ್ತಿದ್ದಾರೆ.
ಹೊಸ ವಾಹನಗಳ ಬೇಡಿಕೆಯಿಲ್ಲದಿರುವುದರಿಂದ ಹೊಸ ಅವಕಾಶವನ್ನು ಬಳಸಿಕೊಳ್ಳಲು ಮುಂದಾಗಿರುವ ಹಲವು ಆಟೋ ಕಂಪನಿಗಳು ಹೊಸ ವಾಹನಗಳ ಮಾರಾಟದ ಜೊತೆಗೆ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟದ ಉದ್ಯಮದ ಮೇಲೂ ಗಮನಹರಿಸುತ್ತಿವೆ.
ಸದ್ಯ ವೈರಸ್ ಭೀತಿ ನಡುವೆಯೂ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ವ್ಯಾಪಾರ ವಹಿವಾಟು ಕೈಗೊಂಡಿರುವ ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ವಾಹನ ಮಾರಾಟ ಪ್ರಮಾಣವನ್ನು ದಾಖಲಿಸಿದ್ದು, ಬಹುತೇಕ ಕಂಪನಿಗಳ ಕಾರು ಮಾರಾಟದಲ್ಲಿ ಶೇ. 40ರಿಂದ ಶೇ.60ರಷ್ಟು ಕುಸಿತ ಕಂಡುಬಂದಿದೆ.


ಹೊಸ ಕಾರುಗಳು ಮಾರಾಟವು ಕುಸಿದ ಬೆನ್ನಲ್ಲೇ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿ ಮತ್ತು ಮಾರಾಟ ಪ್ರಮಾಣವು ತೀವ್ರಗತಿಯಲ್ಲಿ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಪ್ರಮುಖ ಕಂಪನಿ ಸೆಕೆಂಡ್ ಹ್ಯಾಂಡ್ ಮಾರಾಟ ಮಳಿಗೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸುತ್ತಿವೆ.
ಅಸಂಘಟಿತವಾಗಿರುವ ಸ್ಥಳೀಯ ವ್ಯಾಪಾರಿಗಳ ಬಳಿ ಸೆಕೆಂಡ್ ಹ್ಯಾಂಡ್ ವಾಹನ ಖರೀದಿಯು ಕೆಲವು ಸಂದರ್ಭಗಳಲ್ಲಿ ಲಾಭಕ್ಕಿಂತ ಹೆಚ್ಚು ನಷ್ಟ ಅನುಭವಿಸಬೇಕಾದ ಸಂದರ್ಭಗಳು ಎದುರಾಗಬಹುದಾಗಿದ್ದು, ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳನ್ನು ಗ್ರಾಹಕರಿಗೆ ತಲುಪಿಸುವ ಯೋಜನೆಯಲ್ಲಿವೆ.

ಜೊತೆಗೆ ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆಗಳಲ್ಲಿ ಖರೀದಿಸುವ ವಾಹನಗಳಿಗೆ ಹೆಚ್ಚುವರಿಯಾಗಿ ವಾರಂಟಿ ಸಹ ದೊರೆಯಲಿದ್ದು, ಮೋಸ ವ್ಯವಹಾರಗಳಿಗೆ ಇಲ್ಲಿ ಅವಕಾಶವಿರುವುದಿಲ್ಲ.
ಈ ನಿಟ್ಟಿನಲ್ಲಿ ಮಹೀಂದ್ರಾ ಕಂಪನಿಯು ಫಸ್ಟ್ ಛಾಯ್ಸ್, ಮಾರುತಿ ಸುಜುಕಿ ಟ್ರೂ ವ್ಯಾಲ್ಯೂ ಸೇರಿದಂತೆ ಪ್ರಮುಖ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳು ಭಾರೀ ಪ್ರಮಾಣದ ವಹಿವಾಟು ನಡೆಸುವ ಯೋಜನೆಯಲ್ಲಿದ್ದು, ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಮಹಾನಗರಗಳಿಂತಲೂ ಹೆಚ್ಚು 2ನೇ ಮತ್ತು 3ನೇ ಹಂತದ ನಗರಗಳಲ್ಲಿ ಹೆಚ್ಚಿನ ಮಟ್ಟದ ಬೇಡಿಕೆ ಕಂಡುಬರುತ್ತಿದೆ.
Second-hand vehicle business on high speed in India amid Covid 19 pandemic
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm