ಬ್ರೇಕಿಂಗ್ ನ್ಯೂಸ್
24-06-21 11:51 am Headline Karnataka News Network ದೇಶ - ವಿದೇಶ
ಕೋವಿಡ್ ಆತಂಕದಿಂದ ಆಟೋ ಉದ್ಯಮವು ತೀವ್ರ ಹಿನ್ನಡೆ ಅನುಭವಿಸುತ್ತಿದ್ದು, ಹೊಸ ವಾಹನ ಮಾರಾಟದಲ್ಲಿ ಭಾರೀ ಪ್ರಮಾಣದ ಕುಸಿತ ಕಂಡಿದೆ. ಇದರ ನಡುವೆ ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ವಾಹನಗಳ ಮುಖ ಮಾಡುತ್ತಿದ್ದಾರೆ.
ಕರೋನಾ ವೈರಸ್ನಿಂದಾಗಿ ಪ್ರಮುಖ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಆಟೋ ಉದ್ಯಮವು ಕೂಡಾ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದೆ. ಲಾಕ್ಡೌನ್ ವಿನಾಯ್ತಿ ನಂತರ ಆಟೋ ಉತ್ಪಾದನಾ ಚಟುವಟಿಕೆಗಳಿಗೆ ಅವಕಾಶ ಸಿಕ್ಕಿದ್ದರೂ ಗ್ರಾಹಕರಿಲ್ಲದೆ ಹಲವು ಕಾರು ಮಾರಾಟ ಕಂಪನಿಗಳು ಕದಮುಚ್ಚುವ ಸ್ಥಿತಿಗೆ ತಲುಪಿವೆ.

ಸದ್ಯ ಕರೋನಾ ವೈರಸ್ 2ನೇ ಅಲೆಯ ಪರಿಣಾಮ ದೇಶದಲ್ಲಿ ಆಟೋ ಉದ್ಯಮವು ಮಂದಗತಿಯಲ್ಲಿ ಸಾಗಿದ್ದು, ಹೊಸ ವಾಹನ ಖರೀದಿ ಯೋಜನೆಯಲ್ಲಿದ್ದ ಹಲವು ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿಯತ್ತ ಮುಖ ಮಾಡುತ್ತಿದ್ದಾರೆ.
ಹೊಸ ವಾಹನಗಳ ಬೇಡಿಕೆಯಿಲ್ಲದಿರುವುದರಿಂದ ಹೊಸ ಅವಕಾಶವನ್ನು ಬಳಸಿಕೊಳ್ಳಲು ಮುಂದಾಗಿರುವ ಹಲವು ಆಟೋ ಕಂಪನಿಗಳು ಹೊಸ ವಾಹನಗಳ ಮಾರಾಟದ ಜೊತೆಗೆ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟದ ಉದ್ಯಮದ ಮೇಲೂ ಗಮನಹರಿಸುತ್ತಿವೆ.
ಸದ್ಯ ವೈರಸ್ ಭೀತಿ ನಡುವೆಯೂ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ವ್ಯಾಪಾರ ವಹಿವಾಟು ಕೈಗೊಂಡಿರುವ ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ವಾಹನ ಮಾರಾಟ ಪ್ರಮಾಣವನ್ನು ದಾಖಲಿಸಿದ್ದು, ಬಹುತೇಕ ಕಂಪನಿಗಳ ಕಾರು ಮಾರಾಟದಲ್ಲಿ ಶೇ. 40ರಿಂದ ಶೇ.60ರಷ್ಟು ಕುಸಿತ ಕಂಡುಬಂದಿದೆ.


ಹೊಸ ಕಾರುಗಳು ಮಾರಾಟವು ಕುಸಿದ ಬೆನ್ನಲ್ಲೇ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿ ಮತ್ತು ಮಾರಾಟ ಪ್ರಮಾಣವು ತೀವ್ರಗತಿಯಲ್ಲಿ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಪ್ರಮುಖ ಕಂಪನಿ ಸೆಕೆಂಡ್ ಹ್ಯಾಂಡ್ ಮಾರಾಟ ಮಳಿಗೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸುತ್ತಿವೆ.
ಅಸಂಘಟಿತವಾಗಿರುವ ಸ್ಥಳೀಯ ವ್ಯಾಪಾರಿಗಳ ಬಳಿ ಸೆಕೆಂಡ್ ಹ್ಯಾಂಡ್ ವಾಹನ ಖರೀದಿಯು ಕೆಲವು ಸಂದರ್ಭಗಳಲ್ಲಿ ಲಾಭಕ್ಕಿಂತ ಹೆಚ್ಚು ನಷ್ಟ ಅನುಭವಿಸಬೇಕಾದ ಸಂದರ್ಭಗಳು ಎದುರಾಗಬಹುದಾಗಿದ್ದು, ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳನ್ನು ಗ್ರಾಹಕರಿಗೆ ತಲುಪಿಸುವ ಯೋಜನೆಯಲ್ಲಿವೆ.

ಜೊತೆಗೆ ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆಗಳಲ್ಲಿ ಖರೀದಿಸುವ ವಾಹನಗಳಿಗೆ ಹೆಚ್ಚುವರಿಯಾಗಿ ವಾರಂಟಿ ಸಹ ದೊರೆಯಲಿದ್ದು, ಮೋಸ ವ್ಯವಹಾರಗಳಿಗೆ ಇಲ್ಲಿ ಅವಕಾಶವಿರುವುದಿಲ್ಲ.
ಈ ನಿಟ್ಟಿನಲ್ಲಿ ಮಹೀಂದ್ರಾ ಕಂಪನಿಯು ಫಸ್ಟ್ ಛಾಯ್ಸ್, ಮಾರುತಿ ಸುಜುಕಿ ಟ್ರೂ ವ್ಯಾಲ್ಯೂ ಸೇರಿದಂತೆ ಪ್ರಮುಖ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳು ಭಾರೀ ಪ್ರಮಾಣದ ವಹಿವಾಟು ನಡೆಸುವ ಯೋಜನೆಯಲ್ಲಿದ್ದು, ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಮಹಾನಗರಗಳಿಂತಲೂ ಹೆಚ್ಚು 2ನೇ ಮತ್ತು 3ನೇ ಹಂತದ ನಗರಗಳಲ್ಲಿ ಹೆಚ್ಚಿನ ಮಟ್ಟದ ಬೇಡಿಕೆ ಕಂಡುಬರುತ್ತಿದೆ.
Second-hand vehicle business on high speed in India amid Covid 19 pandemic
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm