ಬ್ರೇಕಿಂಗ್ ನ್ಯೂಸ್
26-06-21 09:04 pm Headline Karnataka News Network ದೇಶ - ವಿದೇಶ
Photo credits : khaleej Times
ದುಬೈ, ಜೂನ್ 26: ಭಾರತದ ಜೊತೆಗಿನ ವಿಮಾನ ಸಂಚಾರ ನಿರ್ಬಂಧವನ್ನು ಯುಎಇ ಮತ್ತೆ ಮುಂದುವರಿಸಿದ್ದು, ಮುಂದಿನ ಆದೇಶದ ವರೆಗೂ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದೆ. ಯುಎಇ ಪ್ರಜೆಗಳು, ರಾಜತಾಂತ್ರಿಕ ಅಧಿಕಾರಿಗಳು, ಬಿಸಿನೆಸ್ ಉದ್ದೇಶಿತ ಉದ್ಯಮದಾರರ ವಿಮಾನಗಳು ಮತ್ತು ಗೋಲ್ಡನ್ ವೀಸಾ ಹೊಂದಿರುವರ ವಿಮಾನ ಸಂಚಾರ ಹೊರತುಪಡಿಸಿ ಉಳಿದೆಲ್ಲ ರೀತಿಯ ವೈಮಾನಿಕ ಸಂಚಾರವನ್ನು ನಿರ್ಬಂಧಿಸಿ ಯುಎಇ ಜನರಲ್ ಸಿವಿಲ್ ಏವಿಯೇಶನ್ ಅಥಾರಿಟಿ ಆದೇಶ ಮಾಡಿದೆ.
ಭಾರತದಲ್ಲಿ ಕೊರೊನಾ ಸೋಂಕು ಹೆಚ್ಚಿದ ಕಾರಣ ಕಳೆದ ಎಪ್ರಿಲ್ 24ರಿಂದ ಯುಎಇ ಭಾರತದ ಜೊತೆಗೆ ವಿಮಾನ ಸಂಚಾರವನ್ನು ನಿರ್ಬಂಧಿಸಿ ಆದೇಶ ಮಾಡಿತ್ತು. ಜೂನ್ 19ರಂದು ಯುಎಇ ವಿಪತ್ತು ನಿರ್ವಹಣಾ ಕಮಿಟಿ ಸಭೆ ಸೇರಿ ಭಾರತ, ನೈಜೀರಿಯಾ ಮತ್ತು ದಕ್ಷಿಣ ಆಫ್ರಿಕಾ ದೇಶಗಳ ನಡುವೆ ಜೂನ್ 23ರಿಂದ ಪ್ಯಾಸೆಂಜರ್ ವಿಮಾನಗಳ ಸಂಚಾರಕ್ಕೆ ಕೆಲವು ಷರತ್ತಿನ ಮೇರೆಗೆ ಅನುವು ಮಾಡಿತ್ತು. ಅದರಂತೆ, ಜೂನ್ 24ರಂದು ಏರ್ ಇಂಡಿಯಾ ಕಮರ್ಶಿಯಲ್ ವಿಮಾನ ಸಂಚಾರವನ್ನು ಆರಂಭಿಸಿತ್ತು. ಆದರೆ, ಈಗ ಮತ್ತೆ ಯುಎಇ ವಿಮಾನ ಪ್ರಾಧಿಕಾರವು ಭಾರತದ ಜೊತೆಗಿನ ವೈಮಾನಿಕ ಸಂಚಾರಕ್ಕೆ ನಿರ್ಬಂದ ವಿಧಿಸಿದೆ.
ಷರತ್ತಿನ ಪ್ರಕಾರ, ಯುಎಇಗೆ ಆಗಮಿಸುವ ಪ್ರಯಾಣಿಕರು ರೆಸಿಡೆನ್ಶಿಯಲ್ ವೀಸಾ ಹೊಂದಿರಬೇಕು. ಅಲ್ಲದೆ, ಯುಎಇ ಅಂಗೀಕಾರ ನೀಡಿರುವ ಲಸಿಕೆಯನ್ನು ಎರಡೂ ಡೋಸ್ ಹಾಕಿಸಿಕೊಂಡಿರಬೇಕು. ಫೈಜರ್, ಸ್ಪುಟ್ನಿಕ್ ವಿ, ಆಸ್ಟ್ರಾಜೆನೆಕಾ, ಸಿನೋಫಾರ್ಮ್ ಇವುಗಳಲ್ಲಿ ಒಂದನ್ನು ಲಸಿಕೆಯಾಗಿ ಪಡೆದಿರಬೇಕು. ಅಲ್ಲದೆ, ಪ್ರಯಾಣಿಕರು ತಮಗೆ ಕೋವಿಡ್ ಇಲ್ಲವೆಂದು ಖಚಿತಪಡಿಸಲು 48 ಗಂಟೆ ಒಳಗೆ ಪರೀಕ್ಷೆ ಮಾಡಿರುವ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ಯುಎಇ ತಲುಪಿದ ಬಳಿಕ ಮತ್ತೆ ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಟ್ಟು ಹತ್ತು ದಿನಗಳ ಕ್ವಾರಂಟೈನ್ ಇರಬೇಕೆಂದು ಷರತ್ತು ವಿಧಿಸಲಾಗಿತ್ತು.
UAE’s General Civil Aviation Authority (GCAA) has announced that inbound passenger traffic from India would remain suspended until further notice. Referring to this, an official in the know-how stated, “As far as inbound passenger traffic from India is concerned, the status quo remains.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm