ಬ್ರೇಕಿಂಗ್ ನ್ಯೂಸ್
26-06-21 09:04 pm Headline Karnataka News Network ದೇಶ - ವಿದೇಶ
Photo credits : khaleej Times
ದುಬೈ, ಜೂನ್ 26: ಭಾರತದ ಜೊತೆಗಿನ ವಿಮಾನ ಸಂಚಾರ ನಿರ್ಬಂಧವನ್ನು ಯುಎಇ ಮತ್ತೆ ಮುಂದುವರಿಸಿದ್ದು, ಮುಂದಿನ ಆದೇಶದ ವರೆಗೂ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದೆ. ಯುಎಇ ಪ್ರಜೆಗಳು, ರಾಜತಾಂತ್ರಿಕ ಅಧಿಕಾರಿಗಳು, ಬಿಸಿನೆಸ್ ಉದ್ದೇಶಿತ ಉದ್ಯಮದಾರರ ವಿಮಾನಗಳು ಮತ್ತು ಗೋಲ್ಡನ್ ವೀಸಾ ಹೊಂದಿರುವರ ವಿಮಾನ ಸಂಚಾರ ಹೊರತುಪಡಿಸಿ ಉಳಿದೆಲ್ಲ ರೀತಿಯ ವೈಮಾನಿಕ ಸಂಚಾರವನ್ನು ನಿರ್ಬಂಧಿಸಿ ಯುಎಇ ಜನರಲ್ ಸಿವಿಲ್ ಏವಿಯೇಶನ್ ಅಥಾರಿಟಿ ಆದೇಶ ಮಾಡಿದೆ.
ಭಾರತದಲ್ಲಿ ಕೊರೊನಾ ಸೋಂಕು ಹೆಚ್ಚಿದ ಕಾರಣ ಕಳೆದ ಎಪ್ರಿಲ್ 24ರಿಂದ ಯುಎಇ ಭಾರತದ ಜೊತೆಗೆ ವಿಮಾನ ಸಂಚಾರವನ್ನು ನಿರ್ಬಂಧಿಸಿ ಆದೇಶ ಮಾಡಿತ್ತು. ಜೂನ್ 19ರಂದು ಯುಎಇ ವಿಪತ್ತು ನಿರ್ವಹಣಾ ಕಮಿಟಿ ಸಭೆ ಸೇರಿ ಭಾರತ, ನೈಜೀರಿಯಾ ಮತ್ತು ದಕ್ಷಿಣ ಆಫ್ರಿಕಾ ದೇಶಗಳ ನಡುವೆ ಜೂನ್ 23ರಿಂದ ಪ್ಯಾಸೆಂಜರ್ ವಿಮಾನಗಳ ಸಂಚಾರಕ್ಕೆ ಕೆಲವು ಷರತ್ತಿನ ಮೇರೆಗೆ ಅನುವು ಮಾಡಿತ್ತು. ಅದರಂತೆ, ಜೂನ್ 24ರಂದು ಏರ್ ಇಂಡಿಯಾ ಕಮರ್ಶಿಯಲ್ ವಿಮಾನ ಸಂಚಾರವನ್ನು ಆರಂಭಿಸಿತ್ತು. ಆದರೆ, ಈಗ ಮತ್ತೆ ಯುಎಇ ವಿಮಾನ ಪ್ರಾಧಿಕಾರವು ಭಾರತದ ಜೊತೆಗಿನ ವೈಮಾನಿಕ ಸಂಚಾರಕ್ಕೆ ನಿರ್ಬಂದ ವಿಧಿಸಿದೆ.
ಷರತ್ತಿನ ಪ್ರಕಾರ, ಯುಎಇಗೆ ಆಗಮಿಸುವ ಪ್ರಯಾಣಿಕರು ರೆಸಿಡೆನ್ಶಿಯಲ್ ವೀಸಾ ಹೊಂದಿರಬೇಕು. ಅಲ್ಲದೆ, ಯುಎಇ ಅಂಗೀಕಾರ ನೀಡಿರುವ ಲಸಿಕೆಯನ್ನು ಎರಡೂ ಡೋಸ್ ಹಾಕಿಸಿಕೊಂಡಿರಬೇಕು. ಫೈಜರ್, ಸ್ಪುಟ್ನಿಕ್ ವಿ, ಆಸ್ಟ್ರಾಜೆನೆಕಾ, ಸಿನೋಫಾರ್ಮ್ ಇವುಗಳಲ್ಲಿ ಒಂದನ್ನು ಲಸಿಕೆಯಾಗಿ ಪಡೆದಿರಬೇಕು. ಅಲ್ಲದೆ, ಪ್ರಯಾಣಿಕರು ತಮಗೆ ಕೋವಿಡ್ ಇಲ್ಲವೆಂದು ಖಚಿತಪಡಿಸಲು 48 ಗಂಟೆ ಒಳಗೆ ಪರೀಕ್ಷೆ ಮಾಡಿರುವ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ಯುಎಇ ತಲುಪಿದ ಬಳಿಕ ಮತ್ತೆ ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಟ್ಟು ಹತ್ತು ದಿನಗಳ ಕ್ವಾರಂಟೈನ್ ಇರಬೇಕೆಂದು ಷರತ್ತು ವಿಧಿಸಲಾಗಿತ್ತು.
UAE’s General Civil Aviation Authority (GCAA) has announced that inbound passenger traffic from India would remain suspended until further notice. Referring to this, an official in the know-how stated, “As far as inbound passenger traffic from India is concerned, the status quo remains.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm