ಬ್ರೇಕಿಂಗ್ ನ್ಯೂಸ್
26-06-21 09:04 pm Headline Karnataka News Network ದೇಶ - ವಿದೇಶ
Photo credits : khaleej Times
ದುಬೈ, ಜೂನ್ 26: ಭಾರತದ ಜೊತೆಗಿನ ವಿಮಾನ ಸಂಚಾರ ನಿರ್ಬಂಧವನ್ನು ಯುಎಇ ಮತ್ತೆ ಮುಂದುವರಿಸಿದ್ದು, ಮುಂದಿನ ಆದೇಶದ ವರೆಗೂ ಜಾರಿಯಲ್ಲಿ ಇರಲಿದೆ ಎಂದು ತಿಳಿಸಿದೆ. ಯುಎಇ ಪ್ರಜೆಗಳು, ರಾಜತಾಂತ್ರಿಕ ಅಧಿಕಾರಿಗಳು, ಬಿಸಿನೆಸ್ ಉದ್ದೇಶಿತ ಉದ್ಯಮದಾರರ ವಿಮಾನಗಳು ಮತ್ತು ಗೋಲ್ಡನ್ ವೀಸಾ ಹೊಂದಿರುವರ ವಿಮಾನ ಸಂಚಾರ ಹೊರತುಪಡಿಸಿ ಉಳಿದೆಲ್ಲ ರೀತಿಯ ವೈಮಾನಿಕ ಸಂಚಾರವನ್ನು ನಿರ್ಬಂಧಿಸಿ ಯುಎಇ ಜನರಲ್ ಸಿವಿಲ್ ಏವಿಯೇಶನ್ ಅಥಾರಿಟಿ ಆದೇಶ ಮಾಡಿದೆ.
ಭಾರತದಲ್ಲಿ ಕೊರೊನಾ ಸೋಂಕು ಹೆಚ್ಚಿದ ಕಾರಣ ಕಳೆದ ಎಪ್ರಿಲ್ 24ರಿಂದ ಯುಎಇ ಭಾರತದ ಜೊತೆಗೆ ವಿಮಾನ ಸಂಚಾರವನ್ನು ನಿರ್ಬಂಧಿಸಿ ಆದೇಶ ಮಾಡಿತ್ತು. ಜೂನ್ 19ರಂದು ಯುಎಇ ವಿಪತ್ತು ನಿರ್ವಹಣಾ ಕಮಿಟಿ ಸಭೆ ಸೇರಿ ಭಾರತ, ನೈಜೀರಿಯಾ ಮತ್ತು ದಕ್ಷಿಣ ಆಫ್ರಿಕಾ ದೇಶಗಳ ನಡುವೆ ಜೂನ್ 23ರಿಂದ ಪ್ಯಾಸೆಂಜರ್ ವಿಮಾನಗಳ ಸಂಚಾರಕ್ಕೆ ಕೆಲವು ಷರತ್ತಿನ ಮೇರೆಗೆ ಅನುವು ಮಾಡಿತ್ತು. ಅದರಂತೆ, ಜೂನ್ 24ರಂದು ಏರ್ ಇಂಡಿಯಾ ಕಮರ್ಶಿಯಲ್ ವಿಮಾನ ಸಂಚಾರವನ್ನು ಆರಂಭಿಸಿತ್ತು. ಆದರೆ, ಈಗ ಮತ್ತೆ ಯುಎಇ ವಿಮಾನ ಪ್ರಾಧಿಕಾರವು ಭಾರತದ ಜೊತೆಗಿನ ವೈಮಾನಿಕ ಸಂಚಾರಕ್ಕೆ ನಿರ್ಬಂದ ವಿಧಿಸಿದೆ.
ಷರತ್ತಿನ ಪ್ರಕಾರ, ಯುಎಇಗೆ ಆಗಮಿಸುವ ಪ್ರಯಾಣಿಕರು ರೆಸಿಡೆನ್ಶಿಯಲ್ ವೀಸಾ ಹೊಂದಿರಬೇಕು. ಅಲ್ಲದೆ, ಯುಎಇ ಅಂಗೀಕಾರ ನೀಡಿರುವ ಲಸಿಕೆಯನ್ನು ಎರಡೂ ಡೋಸ್ ಹಾಕಿಸಿಕೊಂಡಿರಬೇಕು. ಫೈಜರ್, ಸ್ಪುಟ್ನಿಕ್ ವಿ, ಆಸ್ಟ್ರಾಜೆನೆಕಾ, ಸಿನೋಫಾರ್ಮ್ ಇವುಗಳಲ್ಲಿ ಒಂದನ್ನು ಲಸಿಕೆಯಾಗಿ ಪಡೆದಿರಬೇಕು. ಅಲ್ಲದೆ, ಪ್ರಯಾಣಿಕರು ತಮಗೆ ಕೋವಿಡ್ ಇಲ್ಲವೆಂದು ಖಚಿತಪಡಿಸಲು 48 ಗಂಟೆ ಒಳಗೆ ಪರೀಕ್ಷೆ ಮಾಡಿರುವ ಕೋವಿಡ್ ನೆಗೆಟಿವ್ ರಿಪೋರ್ಟ್ ಹೊಂದಿರಬೇಕು. ಯುಎಇ ತಲುಪಿದ ಬಳಿಕ ಮತ್ತೆ ಆರ್ ಟಿಪಿಸಿಆರ್ ಪರೀಕ್ಷೆಗೆ ಒಳಪಟ್ಟು ಹತ್ತು ದಿನಗಳ ಕ್ವಾರಂಟೈನ್ ಇರಬೇಕೆಂದು ಷರತ್ತು ವಿಧಿಸಲಾಗಿತ್ತು.
UAE’s General Civil Aviation Authority (GCAA) has announced that inbound passenger traffic from India would remain suspended until further notice. Referring to this, an official in the know-how stated, “As far as inbound passenger traffic from India is concerned, the status quo remains.
20-03-26 06:10 pm
HK News Staffer
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
20-03-26 11:26 pm
HK News Staffer
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
Peace Festival in Udupi Amid Protests; High C...
20-03-26 07:54 pm
Mohan C Lazarus Udupi, Protest: ಹಿಂಜಾವೇ ಪ್ರತಿ...
20-03-26 07:36 pm
Sandesh PG, Inspector: ಮೂಡುಬಿದ್ರೆ ಇನ್ಸ್ ಪೆಕ್ಟ...
20-03-26 06:56 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm