ಬ್ರೇಕಿಂಗ್ ನ್ಯೂಸ್
27-06-21 01:36 pm Headline Karnataka News Network ದೇಶ - ವಿದೇಶ
ಶ್ರೀನಗರ್, ಜೂನ್ 27: ಜಮ್ಮು ವಿಮಾನ ನಿಲ್ದಾಣದಲ್ಲಿ ಕೇವಲ ಐದು ನಿಮಿಷಗಳ ಅಂತರದಲ್ಲಿ ಸಂಭವಿಸಿದ ಎರಡು ಸ್ಫೋಟಗಳ ಬೆನ್ನಲ್ಲೇ ಡ್ರೋನ್ ದಾಳಿ ಬಗ್ಗೆ ಭಾರತೀಯ ವಾಯು ಪಡೆ ಸಿಬ್ಬಂದಿ ತನಿಖೆ ಶುರು ಮಾಡಿದ್ದಾರೆ. ಎರಡು ಕಡಿಮೆ ತೀವ್ರತೆಯ ಸ್ಫೋಟ ಭಯೋತ್ಪಾದಕ ದಾಳಿಯೇ ಎಂಬ ಆಯಾಮದಲ್ಲಿ ರಕ್ಷಣಾ ಮತ್ತು ಭದ್ರತಾ ಕೇಂದ್ರದ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ಭಾನುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಐದು ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟ ಸಂಭವಿಸಿದ್ದು, ಇಬ್ಬರು ಭಾರತೀಯ ಸೇನಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ. ಸ್ಥಳಕ್ಕೆ ರಾಷ್ಟ್ರೀಯ ಬಾಂಬ್ ದತ್ತಾಂಶ ಕೇಂದ್ರ ತಜ್ಞರು, ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ದೌಡಾಯಿಸಿದ್ದು, ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಭಾನುವಾರ ಬೆಳಗಿನ ಜಾವ 1.37ರ ಹೊತ್ತಿಗೆ ಮೊದಲ ಸ್ಫೋಟ ಸಂಭವಿಸಿದ್ದು, ಕಟ್ಟಡದ ತಾಂತ್ರಿಕ ವಿಭಾಗದಲ್ಲಿನ ಮೇಲ್ಛಾವಣಿಗೆ ಹಾನಿಯಾಗಿದೆ. ಬೆಳಗಿನ ಜಾವ 1.43ರ ಹೊತ್ತಿಗೆ ಒಂದೇ ಕಿಲೋ ಮೀಟರ್ ದೂರದಲ್ಲಿ ಇರುವ ಬಯಲು ಪ್ರದೇಶದಲ್ಲಿ ಎರಡನೇ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ.
ಜಮ್ಮು ವಿಮಾನ ನಿಲ್ದಾಣದಲ್ಲಿ ನಡೆದಿರುವ ಎರಡು ಸ್ಫೋಟಗಳ ಗಂಭೀರತೆಯನ್ನು ಅರಿತುಕೊಂಡು ಕೇಂದ್ರ ತನಿಖಾ ತಂಡವೇ ಪ್ರಕರಣದ ತನಿಖೆಗೆ ಮುಂದಾಗಿದೆ. 'ವಾಯು ಪಡೆ ಮುಖ್ಯಸ್ಥ ಏರ್ ಮಾರ್ಷಲ್ ಹೆಚ್.ಎಸ್ ಅರೋರಾ ಮತ್ತು ಏರ್ ಮಾರ್ಷಲ್ ವಿಕ್ರಮ್ ಸಿಂಗ್ ಜೊತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಚರ್ಚೆ ನಡೆಸಿದ್ದು, ಇಬ್ಬರು ಅಧಿಕಾರಿಗಳು ಘಟನೆ ನಡೆದ ಸ್ಥಳಕ್ಕೆ ತೆರಳಿದ್ದಾರೆ,' ಎಂದು ಸಚಿವಾಲಯವು ಸ್ಪಷ್ಟಪಡಿಸಿದೆ.
ಸತ್ವಾರಿ ಪ್ರದೇಶದ ಜಮ್ಮು ವಿಮಾನ ನಿಲ್ದಾಣದ ರನ್ ವೇ ಮತ್ತು ವಾಯು ಸಂಚಾರವನ್ನು ಭಾರತೀಯ ವಾಯು ಪಡೆ ನಿಯಂತ್ರಿಸುತ್ತಿದೆ. ಪ್ರಯಾಣಿಕರನ್ನು ಹೊಂದಿರುವ ವಿಮಾನಗಳ ಹಾರಾಟವನ್ನು ಸಹ ನಿರ್ವಹಿಸಲಾಗುತ್ತದೆ.
Two low intensity explosions were reported early Sunday morning in the technical area of Jammu Air Force Station. One caused minor damage to the roof of a building while the other exploded in an open area.
— Indian Air Force (@IAF_MCC) June 27, 2021
Two low intensity explosions were reported early Sunday morning in the technical area of Jammu Air Force Station. One caused minor damage to the roof of a building while the other exploded in an open area.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm